ಸ್ಪ್ರಿಂಗ್ ಫೀಲ್ಡ್ ಶಾಲೆಯಲ್ಲಿ ಪಠ್ಯಪುಸ್ತಕ ಮಾರಾಟ: ಡಿಡಿಪಿಐ ಭೇಟಿ ತರಾಟೆ
ಚನ್ನಪಟ್ಟಣ : ಅಕ್ರಮವಾಗಿ ಪಠ್ಯ ಪುಸ್ತಕ ಮಾರಾಟ ಮಾಡುತ್ತಿರುವ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ ನಗರದ ಹೊರಭಾಗದ ಚನ್ನಂಕೇಗೌಡನ ದೊಡ್ಡಿ ಸಮೀಪ ಇರುವ ಗೋವಿಂದೇಗೌಡನದೊಡ್ಡಿ ಗ್ರಾಮದ ಸ್ಪ್ರಿಂಗ್ಪೀಲ್ಡ್ ಖಾಸಗಿ ಶಾಲೆಗೆ ಗುರುವಾರ ದಿಢೀರ್ ಭೇಟಿನೀಡಿ ಪರಿಶೀಲನೆ ನಡೆಸಿದರು.
ಉಪನಿರ್ದೇಶಕರ ಭೇಟಿ ವೇಳೆ ಶಾಲೆಯಲ್ಲಿ ಪಠ್ಯಪುಸ್ತಗಳನ್ನು ಮಾರಾಟ ಮಾಡುತ್ತಿದ್ದು ಕಂಡು ಬಂದಿತು. ಶಾಲಾ ಕೊಠಡಿಯೊಂದರಲ್ಲಿ ಪಠ್ಯಪುಸ್ತಕಗಳನ್ನು ಬ್ಯಾಗ್ನಲ್ಲಿ ಹಾಕಿ ರಾಶಿ ಹಾಕಿದ್ದು ಕಂಡು ಬಂದಿದ್ದು ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಶಾಲಾ ಸಿಬ್ಬಂದಿ ಖಾಸಗಿ ವ್ಯಕ್ತಿಗಳು ಮಾರಾಟ ಮಾಡುತ್ತಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಲು ಮುಂದಾದರು.
ಇದನ್ನು ಒಪ್ಪದ ಡಿಡಿಪಿಐ ಶಾಲೆಯೊಳಗೆ ಪಠ್ಯ ಪುಸ್ತಕ ಮಾರಾಟ ಮಾಡಲು ಅವಕಾಶ ಮತ್ತು ಅನುಮತಿ ನೀಡಿದವರು ಯಾರು ? ಎಂದು ತರಾಟೆಗೆ ತೆಗೆದು ಕೊಂಡರು.
ಪುಸ್ತಕ ಮತ್ತು ಸಮವಸ್ತ್ರ ಮಾರಾಟ ಮಾಡುತ್ತಿರುವ ವಿಡಿಯೋ ಚಿತ್ರಣ ಮಾಡಿಕೊಂಡ ಅವರು ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು ಉಪಸ್ಥಿತರಿದ್ದರು.
ಶಾಲೆಯಲ್ಲಿ ಅಕ್ರಮವಾಗಿ ಪಠ್ಯ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಮೇರೆಗೆ ಭೇಟಿ ನೀಡಿ ಪರೀಶೀಲಿಸಲಾಗಿ ಅಕ್ರಮ ಮಾರಾಟ ಮಾಡುತ್ತಿರುವುದು ಸಾಬೀತಾಗಿದೆ, ಸೋಮವಾರ ನೋಟೀಸ್ ಜಾರಿ ಮಾಡುತ್ತೇನೆ.
*ಗಂಗಮಾರೇಗೌಡ ಡಿಡಿಪಿಐ ರಾಮನಗರ*
ಪಠ್ಯ ಪುಸ್ತಕ ಅಕ್ರಮ ಮಾರಾಟದ ದೂರಿನ ಮೇರೆಗೆ ಡಿಡಿಪಿಐ ಮತ್ತು ನಾವು ದಿಢೀರ್ ಭೇಟಿ ನೀಡಿ ಪರೀಶೀಲಿಸಿದ್ದು ಅಕ್ರಮ ಮಾರಾಟ ಸಾಬಿತಾಗಿದೆ, ಡಿಡಿಪಿಐ ರವರು ನೋಟೀಸ್ ಜಾರಿ ಮಾಡಿದ ನಂತರ ಕ್ರಮ ಕೈಗೊಳ್ಳುತ್ತೇವೆ.
*ಆರ್ ಎಸ್ ಸೀತಾರಾಮು ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪಟ್ಟಣ*
ಇತ್ತೀಚೆಗೆ ನಡೆದ ಆರ್ ಟಿ ಇ ಮಕ್ಕಳಿಗೆ ಹೆಚ್ಚುವರಿ ಶುಲ್ಕ ವಸೂಲಿ ಸಭೆಯಲ್ಲಿ ಸಹ ಬಂದ ದೂರುಗಳ ಪೈಕಿ ಅತಿ ಹೆಚ್ಚು ದೂರುಗಳು ಇದೇ ಶಾಲೆಯ ವಿರುದ್ದ ಬಂದಿದ್ದನ್ನು ಗಮನಿಸಬಹುದು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು