Tel: 7676775624 | Mail: info@yellowandred.in

Language: EN KAN

    Follow us :


ಕೋಡಂಬಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲೂ ದೋಖಾ ಎಸಗಿರುವ ಶಂಕರ್

Posted date: 03 Jun, 2019

Powered by:     Yellow and Red

ಕೋಡಂಬಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲೂ ದೋಖಾ ಎಸಗಿರುವ ಶಂಕರ್

ಶಾಲೆಯ ಮುಂಭಾಗಕ್ಕೆ ಮಾತ್ರ ಬಣ್ಣ ಹಚ್ಚಿದ್ದು ನಾಮಫಲಕ ಹಾಗೆ ಇದೆ

ರಾಮನಗರ ಜಿಲ್ಲಾ ಪಂಚಾಯತಿ ಚನ್ನಪಟ್ಟಣ ತಾಲ್ಲೂಕು ವ್ಯಾಪ್ತಿಯ ಕಿರಿಯ ಇಂಜಿನಿಯರ್ ಶಂಕರ್ ಹೊಂಗನೂರು ಜಿಲ್ಲಾ ಪಂಚಾಯತಿ ತುಂಡು ಗುತ್ತಿಗೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಕ್ರಮ ಬಿಲ್ ಮಾಡಿಕೊಂಡಿರುವ ಸಂಬಂಧ ಸರದಿ ವರದಿಗಳು ಮತ್ತು ಕೃಷ್ಣೇಗೌಡ ರ ದೂರಿನ ಮೇರೆಗೆ ಜಿಲ್ಲಾ ಪಂಚಾಯತಿ ಸಿಇಓ ರವರು ತನಿಖೆಗೆ ಆದೇಶಿಸಿ ಮೇಲ್ನೋಟಕ್ಕೆ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಕಿರಿಯ ಇಂಜಿನಿಯರ್ ಶಂಕರ್ ನನ್ನು ಕಳೆದ ತಿಂಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೇವಲ ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಗಷ್ಟೇ ಸೀಮಿತ ಎಂದುಕೊಂಡಿದ್ದ ನಮಗೆ ಕೋಡಂಬಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲೂ ಆತ ಅಕ್ರಮ ಎಸಗಿರುವುದು ಕಂಡು ಬಂದಿತು, ಅದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.


ಕೋಡಂಬಳ್ಳಿ ಜಿಲ್ಲಾ ಪಂಚಾಯತಿ ಜೆ ಬ್ಯಾಡರಹಳ್ಳಿ ಗ್ರಾಮದ ಪ್ರೌಢಶಾಲೆಗೆ ಚುರಕಿ, ಸುಣ್ಣಬಣ್ಣ ಮತ್ತು ರ್ಯಾಂಪ್ ನಿರ್ಮಾಣಕ್ಕೆಂದು ಒಂದೇ ದಿನಾಂಕದಲ್ಲಿ *೩,೦೦,೦೦೦ ಮತ್ತು ೯೦,೦೦೦ ಹಾಗೂ ಐದು ದಿನಗಳ ಅಂತರದಲ್ಲಿ ೩೦,೦೦೦ ರೂಪಾಯಿಗಳನ್ನು ಗುತ್ತಿಗೆದಾರ ಬಿ ಟಿ ಅನಂತಕುಮಾರ ಹೆಸರಿನಲ್ಲಿ ಕಿರಿಯ ಇಂಜಿನಿಯರ್ ಶಂಕರ್ ಮತ್ತು ಅಂದಿನ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಇಂಜಿನಿಯರ್ ಕುಮಾರಸ್ವಾಮಿ* ಕಾರಣಾಗಿರುವುದು ದಾಖಲೆಗಳ ಮೂಲಕ ಸಾಬೀತಾಗಿದೆ.


ಚನ್ನಪಟ್ಟಣ ತಾಲ್ಲೂಕು ಜೆ ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಜೆ ಬ್ಯಾಡರಹಳ್ಳಿ ಪ್ರೌಢಶಾಲೆಯ ಕಟ್ಟಡ ದುರಸ್ತಿ ಹಾಗೂ ರ್ಯಾಂಪ್ ನಿರ್ಮಾಣ ಕಾಮಗಾರಿ D.R.No.:517/2017-18, W.O No.:559/2017-18 ರ ಸಂಖ್ಯೆಯಲ್ಲಿ ದಿನಾಂಕ ೦೯/೦೩/೨೦೧೮ ರಲ್ಲಿ ೨,೯೨,೨೮೭ ರೂಪಾಯಿಗಳ ಬಿಲ್ ಪಾವತಿ ಮಾಡಿಕೊಂಡಿದ್ಧಾರೆ,


ಅದೇ ದಿನಾಂಕದಲ್ಲಿ ಅದೇ ಪ್ರೌಢಶಾಲೆ ಕಟ್ಟಡಕ್ಕೆ ಸುಣ್ಣ ಬಣ್ಣ ಹಾಗೂ ರಿಪೇರಿಗೆಂದು D.R.No.:846/2017-18, W.O.No.:732/2017-18, ಸಂಖ್ಯೆಯಲ್ಲಿ ೮೮,೪೬೯ ರೂಪಾಯಿಗಳ ಬಿಲ್ ಪಾವತಿ ಮಾಡಿಕೊಂಡಿದ್ದಾರೆ.


ಐದು ದಿನಗಳ ನಂತರ ಅಂದರೆ ೧೪/೦೩/೨೦೧೮ ರಂದು ಅದೇ ಪ್ರೌಢಶಾಲೆಗೆ ರ್ಯಾಂಪ್ ನಿರ್ಮಾಣ ಮಾಡಲು D.R.766.:/2017-18. ಕೆ.ಅ.ಸಂ 734/2018-18 ರ ಸಂಖ್ಯೆಯಲ್ಲಿ ೨೮,೩೮೫ ರೂಪಾಯಿಗಳ ಬಿಲ್ ಪಡೆದು ಕೊಂಡಿದ್ದಾರೆ.


ಈ ಮೇಲಿನ ಎಲ್ಲಾ ಕಾಮಗಾರಿಗಳು ೨೦೧೭/೧೮ ನೇ ಸಾಲಿನ ಜಿಲ್ಲಾ ಪಂಚಾಯತಿ ಅನುದಾನದ ಕಾಮಗಾರಿಗಳಾಗಿದ್ದು ಎಲ್ಲಾ ಬಿಲ್ ಗಳನ್ನು ಜೆ ಬ್ಯಾಡರಹಳ್ಳಿ ಗ್ರಾಮದ ಮೂರನೇ ದರ್ಜೆ ಗುತ್ತಿಗೆದಾರ *ಅನಂತಕುಮಾರ ಬಿ ಟಿ* ಎಂಬುವವರ ಹೆಸರಿಗೆ ಪರೀಕ್ಷಾರ್ಥ ಸೇವಾವಧಿಯಲ್ಲಿದ್ದ ಕಿರಿಯ ಇಂಜಿನಿಯರ್ *ಶಂಕರ್* ಮತ್ತು ಅಂದಿನ ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ *ಕುಮಾರಸ್ವಾಮಿ* ಯವರೇ ಕಾಮಗಾರಿಯನ್ನು ಪರೀಕ್ಷಿಸಿ ಬಿಲ್ ಪಾವತಿ ಮಾಡಿದ್ದೇವೆಂದು ಸಹಿ ಮಾಡಿದ್ದಾರೆ.


ಈ ಎಲ್ಲಾ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿ  ಸಂಬಂಧಿಸಿದ ಇಂಜಿನಿಯರ್ ಮುಖೇನ ಪರೀಕ್ಷಿಸಲಾಗಿ ಕಟ್ಟಡದ ಮುಂದಿನ ಭಾಗಕ್ಕೆ ಮಾತ್ರ ಬಣ್ಣ ಹಚ್ಚಿದ್ದು ಸಂಪೂರ್ಣ ಕಟ್ಟಡಕ್ಕೆ ಬಣ್ಣ, ಕಟ್ಟಡದ ರಿಪೇರಿ, ಮೇಲ್ಭಾಗಕ್ಕೆ ಚುರಕಿಯನ್ನು ಹಾಕಿಲ್ಲ, ಬಹಳ ಮುಖ್ಯವಾಗಿ ಎರಡೂ ಬಿಲ್ ನಲ್ಲಿ ರ್ಯಾಂಪ್ ಗೆಂದು ಹಣ ಪಡೆದಿದ್ದು ರ್ಯಾಂಪ್ ನಿರ್ಮಿಸಿಲ್ಲ.

ಜಿಲ್ಲಾ ಪಂಚಾಯತಿ ಗೆ ಬಿಲ್ ಪಡೆಯಲು ಕೊಟ್ಟಿರುವ ಪೋಟೋಗಳಿಗೂ ಅಲ್ಲಿರುವ ಕಟ್ಟಡದ ಬಿಲ್ ಗೂ ಸಂಬಂಧವೇ ಇಲ್ಲ, ಹೆಂಚಿನ ಮನೆಯ ಶಾಲೆಯ ಚಿತ್ರವೊಂದನ್ನು ನೀಡಿದ್ದು ಪ್ರೌಢಶಾಲೆಯಲ್ಲಿ ಹೆಂಚಿನ ಮನೆಯ ಶಾಲೆ ಇರದಿರುವುದು ಇವರ ಅಕ್ರಮಗಳನ್ನು ತೋರಿಸುತ್ತವೆ.


ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಂಡು ಸಂಬಂಧಿಸಿದವರಿಂದ ಹಣ ವಸೂಲಿ ಮಾಡಿ ಪಾರದರ್ಶಕತೆ ಮೆರೆಯಲಿ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑