Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಆಡಳಿತ ನಿರ್ಲಕ್ಷ್ಯ, ರೈತ ಸಂಘ ಪ್ರತಿಭಟನೆ

Posted date: 03 Jun, 2019

Powered by:     Yellow and Red

ತಾಲ್ಲೂಕು ಆಡಳಿತ ನಿರ್ಲಕ್ಷ್ಯ, ರೈತ ಸಂಘ ಪ್ರತಿಭಟನೆ

ಚನ್ನಪಟ್ಟಣ: ತಾಲ್ಲೂಕು ಆಡಳಿತವು ನಿರ್ಲಕ್ಷ್ಯ ಮತ್ತು ನಿರ್ಲಜ್ಯದಿಂದ ಕೂಡಿದ್ದು ತಾಲ್ಲೂಕು ಆಡಳಿತವನ್ನು ಚುರುಕುಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ರವರ ನೇತೃತ್ವದಲ್ಲಿ ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪದಾಧಿಕಾರಿಗಳು ಹಾಗೂ ಎತ್ತಿನ ಬಂಡಿಗಳ ಸಮೇತ ಗಾಂಧಿಭವನದಿಂದ ಮೆರವಣಿಗೆ ಹೊರಟು ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.


ಕಂದಾಯ ಇಲಾಖೆಯ ಅಧಿಕಾರಿಗಳ ಕಿರುಕುಳ, ವಿದ್ಯುತ್ ಇಲಾಖೆಯಿಂದ ಅಸಮರ್ಪಕ ವಿದ್ಯುತ್, ಕೃಷಿ ಉತ್ಪನ್ನಗಳ ಆಯೋಗ ರಚನೆಯಿಂದ ವರದಿ ಬಾರದಿರುವುದು, ಪರವಾನಗಿ ಇಲ್ಲದೆ ಎಲ್ಲೆಂದರಲ್ಲಿ ಮದ್ಯ ಮಾರಾಟ, ನರೇಗಾ ಕಾಮಗಾರಿಗಳಲ್ಲಿ ಆಗುತ್ತಿರುವ ಅನ್ಯಾಯ, ಎಪಿಎಂಸಿಯಲ್ಲಿ ಕಮಿಷನ್ ದಂಧೆ, ಕೆರೆ ಏರಿಗಳ ಮೇಲೆ ಕೋಳಿತ್ಯಾಜ್ಯ, ಬರಪೀಡಿತ ತಾಲ್ಲೂಕು ಘೋಷಣೆ ಆಗಿದ್ದರೂ ಪರಿಹಾರ ಕಲ್ಪಿಸಿದರಿವುದು, ವೈದ್ಯಾಧಿಕಾರಿಗಳ ಕೊರತೆ, ರೈತರ ಸಾಲಮನ್ನಾ ಬಗ್ಗೆ ಶ್ವೇತ ಪತ್ರ, ಕಾಡುಪ್ರಾಣಿಗಳಿಂದ ಆಗುತ್ತಿರುವ ತೊಂದರೆ, ಕಣ್ವ ನೀರಾವರಿ ಕಾಮಗಾರಿಗಳ ಅಕ್ರಮ ಮತ್ತು ಕೆರೆ ನೀರು ತುಂಬಿಸುವುದು, ಬ್ಯಾಂಕ್ ಗಳಲ್ಲಿ ರೈತರ ಒಡವೆ ಸಾಲ ನವೀಕರಣ, ಎಲ್ಲಾ ರೈತರಿಗೂ ಜನಶ್ರೀ ಯೋಜನೆ, ಹಾಗೂ ಗ್ರಾಮಗಳಲ್ಲಿ ಗುಂಡುತೋಪು, ಕೆರೆಕುಂಟೆ ಸರ್ಕಾರಿ ಸ್ಮಶಾನಗಳು, ರಸ್ತೆ ಒತ್ತುವರಿ ಹೀಗೆ ಹಲವಾರು ವಿಷಯಗಳನ್ನು ತನಿಖೆ ಮಾಡಿಸಿ ಶೀಘ್ರವಾಗಿ ಪರಿಹಾರ ಕಲ್ಪಿಸಬೇಕೆಂದು ಪ್ರತಿಭಟಿಸಿದರು.


ತಾಲ್ಲೂಕು ಕಛೇರಿ ಮುಂದೆ ಪ್ರತಿಭಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮುಖ್ಯಮಂತ್ರಿ ಕ್ಷೇತ್ರದಲ್ಲೇ ತಾಲ್ಲೂಕು ಆಡಳಿತ ಸಂಪೂರ್ಣ ಹದಗೆಟ್ಟಿದೆ ಎಂದಾದರೆ ರಾಜ್ಯದ ೨೨೪ ಕ್ಷೇತ್ರದ ಸಮಸ್ಯೆಗಳು ಎಷ್ಟಿರಬಹುದು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡುವುದಾಗಿ ಘೋಷಿಸಿದ್ದಾರೆ ಸಂತೋಷ, ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಹೂಡುವುದಾಗಿ ಪ್ರಕಟಿಸಿದ್ದಾರೆ, ರಾಜ್ಯಾದ್ಯಂತ ೧,೦೦೦ ಶಾಲೆಗಳನ್ನು ಮುಚ್ಚುವುದಾಗಿ ಹೇಳಿರುವ ಮುಖ್ಯಮಂತ್ರಿಗಳು ಶಾಲೆಯಲ್ಲಿ ವಾಸವ್ಯ ಹೂಡುವುದು ಹಾಸ್ಯಾಸ್ಪದ ಎಂದರು, ಗ್ರಾಮ ವಾಸ್ತವ್ಯ ರಾಜಕೀಯ ಇಲ್ಲದೆ ಪ್ರಾಮಾಣಿಕತೆಯಿಂದ ಮಾಡಬೇಕು, ಹಿಂದಿ ಹೇರಿಕೆ, ಪಹಣಿಯಿಂದ ಆಗುತ್ತಿರುವ ತೊಂದರೆ, ಸರ್ಕಾರಿ ಶಾಲೆ ಉಳಿಸುವ, ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಮತ್ತು ಕಾವೇರಿ ಪ್ರಾಧಿಕಾರವನ್ನು ಸಮರ್ಥವಾಗಿ ಮುನ್ನಡೆಸುವಂತೆ ಅವರು ಆಗ್ರಹಿಸಿದರು.


ರಾಜ್ಯ ರೈತಸಂಘದ ಉಪಾಧ್ಯಕ್ಷ ಎಂ ರಾಮು ಮಾತನಾಡಿ ಕಳೆದ ಇಪ್ಪತ್ತು ವರ್ಷಗಳಿಂದ ಕಣ್ವ ಕೆರೆಯಿಂದ ನೀರು ಹರಿಸಿಲ್ಲ, ಅನೇಕ ರೈತರು ವ್ಯವಸಾಯವನ್ನೇ ಮರೆಯುತ್ತಿದ್ದಾರೆ, ನಾಲೆಗೆ ಸಂಬಂಧಿಸಿದಂತೆ ಅನುಮತಿ ದೊರೆತಿದ್ದು ಯಾವ ಅಧಿಕಾರಿಗಳನ್ನು ಕೇಳಿದರೂ ಸಬೂಬು ಹೇಳುತ್ತಾರೆ ಎಂದು ದೂರಿದರು, ಮುಖ್ಯಮಂತ್ರಿ ಕ್ಷೇತ್ರದಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದ್ದು ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ರೈತರ ಕೆಲಸಗಳನ್ನು ಲಂಚರುಸುವತ್ತಿಗಳಿಲ್ಲದೇ ಜರೂರು ಮಾಡಿಕೊಡಲು ನಿರ್ದೇಶನ ಮಾಡುವಂತೆ ಆಗ್ರಹಿಸಿದರು.


ಜಿಲ್ಲಾ ಕಸಾಪ ದ ನಿಕಟಪೂರ್ವ ಅಧ್ಯಕ್ಷ ಬಿ ಟಿ ನಾಗೇಶ್ ಅತೀವ ನೋವಿನಿಂದ ಮಾತನಾಡಿ ರೈತರ ಅವನತಿಗಳಿಗೆ ಅಧಿಕಾರಿಗಳೇ ನೇರ ಕಾರಣ, ಕೈತುಂಬಾ ಸಂಬಳ ಪಡೆಯುವ ಅಧಿಕಾರಿಗಳು ರೈತರನ್ನು ನಿರ್ದಾಕ್ಷಿಣ್ಯವಾಗಿ ಕಾಣುತ್ತಿರುವುದು ದುರದೃಷ್ಟಕರ ಎಂದು ವಿಷಾದಿಸಿದರು.


ಹೋರಾಟಗಾರ ಶಂಭೂಗೌಡ ಮಾತನಾಡಿ ಖಾಸಗಿ ಶಾಲೆಯಲ್ಲಿ ಆರ್ ಟಿ ಇ ಮಕ್ಕಳು ಮತ್ತು ಸರ್ಕಾರಿ ಶಾಲೆಗಳ ಬಗ್ಗೆ ಇರುವ ತಾತ್ಸಾರ ಮನೋಭಾವ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ದ ಬಗ್ಗೆ ಮಾತನಾಡಿದರು.


ಜಿ ಟಿ ರಾಮಸ್ವಾಮಿ, ರಾಮನಗರ ಜಿಲ್ಲಾ ಅಧ್ಯಕ್ಷ ಮಲ್ಲಯ್ಯ, ಮಾಗಡಿ ತಾಲ್ಲೂಕು ಅಧ್ಯಕ್ಷ ಲೋಕೇಶ್, ಮುನಿರಾಜು ಸುಕನ್ಯಾ ಮತ್ತಿತರ ಪದಾಧಿಕಾರಿಗಳು ಮಾತನಾಡಿದರು.


ತಾಲ್ಲೂಕು ಆಡಳಿತದ ಹನ್ನೆರಡು ಇಲಾಖೆಗಳಾದ ಕಂದಾಯ, ತಾಲ್ಲೂಕು ಪಂಚಾಯತಿ, ಕುಡಿಯುವ ನೀರು, ವಾಣಿಜ್ಯ ತೆರಿಗೆ, ಕೃಷಿ ಮಾರುಕಟ್ಟೆ, ಅರಣ್ಯ, ಕೃಷಿ, ತೋಟಗಾರಿಕೆ, ನೋಂದಣಿ, ಟ್ರಜರಿ, ಪಶುಸಂಗೋಪನೆ ಮತ್ತು ಕೆಎಂಎಫ್ ಅಧಿಕಾರಿಗಳು ಸ್ಥಳಕ್ಕೇ ಭೇಟಿ ನೀಡಿ ರೈತರ ಅಹವಾಲುಗಳನ್ನು ಸ್ವೀಕರಿಸಿದರು, ಶಿರಸ್ತೇದಾರರು ಮಾತನಾಡಿ ನಿಮ್ಮೆಲ್ಲ ಬೇಡಿಕೆಗಳನ್ನು ಒಂದು ಪಟ್ಟಿ ಮಾಡಿಕೊಡಿ ಆ ಪಟ್ಟಿಯ ಮೂಲಕ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸಭೆ ಕರೆದು ಮುಂದಿನ ದಿನಗಳಲ್ಲಿ ಎಲ್ಲಾ ರೈತರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡುವುದಾಗಿ ಭರವಸೆ ನೀಡಿದರು.


ಈ ನಡುವೆ ಅಧಿಕಾರಿಗಳ ಉತ್ತರದಿಂದ ಸಂತೃಪ್ತರಾಗದ ಪದಾಧಿಕಾರಿಗಳು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಶಿರಸ್ತೇದಾರರು ಮಾತನಾಡಿ ಎಲ್ಲಾ ಅಧಿಕಾರಿಗಳನ್ನು ಸಭೆ ಕರೆದು ಚರ್ಚಿಸಿ ತಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑