ಇಂದಿನ ಪೀಳಿಗೆಯ ಮಕ್ಕಳ ಆರೋಗ್ಯಕ್ಕಾಗಿ ಶುದ್ಧ ಗಾಳಿಯ ಅವಶ್ಯಕತೆ ಇದೆ ಶೈಲಾ ಶ್ರೀನಿವಾಸ
ರಾಮನಗರ: ಇಂದಿನ ಮತ್ತು ಮುಂದಿನ ಪೀಳಿಗೆಗೆ ಕೊಡುಗೆ ನೀಡುವುದಾದರೆ ಶುದ್ಧ ಗಾಳಿಯನ್ನು ಕೊಡುಗೆಯಾಗಿ ನೀಡಬೇಕು, ಶುದ್ಧ ಗಾಳಿ ದೊರಕಬೇಕಾದರೆ ಕಾಡು ಮೇಡಿನ ಜೊತೆಗೆ ಅವಶ್ಯ ಜಾಗವಿರುವ ಭೂಮಿಯಲ್ಲಿ ಆಯಾ ಮಣ್ಣು ಮತ್ತು ವಾತಾವರಣಕ್ಕನುಗುಣವಾಗಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಜನಸಾಮಾನ್ಯರು ತಮ್ಮ ಕರ್ತವ್ಯ ಮತ್ತು ಸಾಮಾಜಿಕ ಹೊಣೆಗಾರಿಕೆ ಎಂದು ಭಾವಿಸಿ ಭೂಮಂಡಲವನ್ನು ಹಸಿರುಕರಣ ಮಾಡುವ ಸಂಕಲ್ಪ ಮಾಡಬೇಕೆಂದು ಔಷಧೀಯ ಸಸ್ಯ ತಜ್ಞೆ ಶಿಕ್ಷಕಿ ಶೈಲಾ ಶ್ರೀನಿವಾಸ್ ಹೇಳಿದರು.
ಅವರು ಕೈಲಾಂಚ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಸಹ ಶಿಕ್ಷಕರು ಮತ್ತು ಗ್ರಾಮಸ್ಥರ ಜೊತೆಗೂಡಿ ಗ್ರಾಮದ ಕೆರೆಯಂಚಿನಲ್ಲಿ ವಿಶ್ವ ಪರಿಸರ ದಿನ ಜಾಗೃತಿಗಾಗಿ ಸಸ್ಯಗಳನ್ನು ನೆಟ್ಟು ಬಳಿಕ ಮಾತನಾಡಿದರು.
ವಿಶ್ವ ಪರಿಸರ ದಿನ ಕೇವಲ ನಾಮಾಕವಸ್ಥೆ ದಿನಾಚರಣೆಯಾಗದೇ ಜನ ಜೀವನದ ಅವಿಭಾಜ್ಯ ಅಂಗವಾಗಬೇಕಿದೆ. ಈ ಬಾರಿಯ ವಿಶ್ವಸಂಸ್ಥೆಯ ಘೋಷವಾಕ್ಯ ವಾಯು ಮಾಲಿನ್ಯ, ಈ ಘೋಷ ವಾಕ್ಯವು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು.
ಮೆಗಾಸಿಟಿ ಜನರಿಂದ ಗ್ರಾಮೀಣ ಬದುಕಿನ ಜನರೂ ಬದಲಾಗುತ್ತಿದ್ದು ಅವರ ಇತ್ತೀಚಿನ ಜೀವನಶೈಲಿ ವಾಯು ಮಾಲಿನ್ಯಕ್ಕೆ ವಿಷಪೂರಿತ ಕೊಡುಗೆ ನೀಡುತ್ತಿದೆ, ಇದನ್ನು ತಡೆಗಟ್ಟದಿದ್ದರೆ ಭವಿಷ್ಯದ ದಿನಗಳು ದುರ್ಬರವಾಗಲಿದೆ, ವಿಶ್ವ ಆರೋಗ್ಯ ಸಂಸ್ಥೆಯ ವಾಯು ಗುಣಮಟ್ಟದ ಮಾನದಂಡಗಳ ಉಲ್ಲಂಘನೆಯಾಗುತ್ತಿದ್ದು ಜಗತ್ತಿನ ಹತ್ತು ಜನರಲ್ಲಿ ಒಂಭತ್ತು ಜನರು ಅಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದಾರೆ.
ಕೈಗಾರಿಕೆಗಳು, ವಾಹನಗಳು, ಹೊರಹಾಕುವ ಹೊಗೆ ಅವೈಜ್ಞಾನಿಕವಾಗಿ ತ್ಯಾಜ್ಯವನ್ನು ಸುಡುವುದರಿಂದ ಸೃಷ್ಟಿಯಾಗುವ ವಿಷಗಾಳಿ, ಕಾಡಿನ ಬೆಂಕಿಯಿಂದ ಉಂಟಾಗುವ ಸಮಸ್ಯೆ, ಇವೆಲ್ಲದರ ಜೊತೆಗೆ ಅಡುಗೆ ಮನೆಗಳಲ್ಲೂ ಬಳಸುವ ನಾನಾ ವಿಧದ ಅಡುಗೆ ಎಣ್ಣೆ, ಉರುವಲುಗಳಿಂದಲೂ ವಾಯು ಮಾಲಿನ್ಯವುಂಟಾಗುತ್ತಿದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ವಾಯುಮಾಲಿನ್ಯದಿಂದ ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮಗಳುಂಟಾಗುತ್ತಿವೆ. ವಿಶ್ವದ ಜನರಲ್ಲಿ ಆಸ್ತಮಾದಂತಹ ಸಮಸ್ಯೆಗಳು ಕಾಡುತ್ತಿರುವುದಲ್ಲದೇ ಪ್ರತಿ ವರ್ಷ 7 ಮಿಲಿಯನ್ ಜನರು ಸಾವನ್ನಪ್ಪುತ್ತಿದ್ದಾರೆ. ಇವೆಲ್ಲವನ್ನೂ ತಡೆಗಟ್ಟಲು ಇರುವ ಏಕೈಕ ದಾರಿಯೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಗಿಡಮರಗಳನ್ನು ಬೆಳೆಸುವುದು. ನಮ್ಮದೇ ಜಿಲ್ಲೆಯ ಸಾಲು ಮರದ ತಿಮ್ಮಕ್ಕ ತಮ್ಮ ಸಾಧನೆಗಾಗಿ ದೇಶ ಮೆಚ್ಚುವ ಗೌರವ ಗಳಿಸಿರುವುದನ್ನು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮಾದರಿಯಾಗಿಸಿಕೊಂಡು ತಮ್ಮ ವಾಸಸ್ಥಳ, ದುಡಿಮೆಯ ಸ್ಥಳಗಳನ್ನು ಹಸಿರು ಮರಗಳಿಂದ ಆವೃತವಾಗಿರುವಂತೆ ನೋಡಿಕೊಳ್ಳಬೇಕು ಎಂದರು.
ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಗಿಡ ನೆಡುವ ಅಭಿಯಾನದಲ್ಲಿ ಪಾಲ್ಗೊಂಡು ಶಾಲಾವರಣ, ಕೆರೆಯಂಚು, ರಸ್ತೆಯ ಇಕ್ಕೆಲಗಳಲ್ಲಿ ಗಿಡಗಳನ್ನು ನೆಟ್ಟು ನೀರೆರೆದರು. ಹಿಂದಿನ ವರ್ಷ ವಿಶ್ವ ಪರಿಸರ ದಿನದಂದು ಶಾಲಾವರಣದಲ್ಲಿ ನೆಟ್ಟು ಬೇಸಿಗೆಯಲ್ಲೂ ಕಾಪಾಡಿಕೊಂಡಿದ್ದ ಗಿಡಗಳು ಇಂದು ನಳನಳಿಸುತ್ತಿರುವುದನ್ನು ವಿದ್ಯಾರ್ಥಿಗಳ ಸಾಧನೆ ಎಂದು ಇದೇ ಸಮಯದಲ್ಲಿ ಅಭಿನಂದಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು