ಕೋಡಂಬಳ್ಳಿ ಜಿಲ್ಲಾ ಪಂಚಾಯತಿ ಬ್ಯಾಡರಹಳ್ಳಿ ಗ್ರಾಮದ ರಸ್ತೆ ನುಂಗಿದ ಶಂಕರ್
ಲಕ್ಕಿ ಕಟ್ಟೆ ಮತ್ತು ಹೋಗುವ ರಸ್ತೆ
ರಾಮನಗರ ಜಿಲ್ಲಾ ಪಂಚಾಯತಿ ಚನ್ನಪಟ್ಟಣ ವಲಯದಲ್ಲಿ ಈ ಹಿಂದೆ ಇಂಜಿನಿಯರ್ ಆಗಿದ್ದ *ಚಿಕ್ಕವೆಂಕಟೇಶ ಮತ್ತು ಕುಮಾರಸ್ವಾಮಿ* ಎಂಬ ಇಂಜಿನಿಯರ್ ಗಳ ಹೆಸರು ಬಹಳ *ದೊಡ್ಡದು* ಕಾಮಗಾರಿ ಮಾಡದಿದ್ದರೂ, ಅರ್ಧದಷ್ಟು ಕೆಲಸ ಮಾಡಿದರೂ ಅಥವಾ ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದರೂ ಸಹ ಹಿಂದುಮುಂದು ನೋಡದೆ ಚೆಕ್ ಮತ್ತು ಬಿಲ್ ಗೆ ಸಹಿ ಹಾಕಿ ಗುತ್ತಿಗೆದಾರರಿಗೆ ಕೊಟ್ಟು ಕಮೀಷನ್ ಪಡೆದು ನಂತರ ಇಲಾಖೆಯ ತನಿಖೆಗೊಳಪಟ್ಟು ಅಮಾನತು ಆದವರು, ಅವರ ಸಾಲಿಗೆ ಮತ್ತೋರ್ವ ಇಂಜಿನಿಯರ್ ಸೇರ್ಪಡೆಗೊಂಡು ತಾಲ್ಲೂಕು ವ್ಯಾಪ್ತಿಯ ಜಿಲ್ಲಾ ಪಂಚಾಯತಿ ಅನುದಾನವನ್ನು ನುಂಗಿ ನೀರು ಕುಡಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸುದ್ದಿಯ ಹೀರೋ ಅದೇ ದೋಖಾ *ಶಂಕರ್*.
ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಕಳಪೆ ಕಾಮಗಾರಿಗಳಿಗೆ ಮತ್ತು ಕಾಮಗಾರಿ ಮಾಡದೇ ಬಿಲ್ ಮಾಡಿಕೊಟ್ಟಿರುವುದಕ್ಕೆ ಮಾಹಿತಿ ಹಕ್ಕು ಕಾರ್ಯಕರ್ತ ವಂದಾರಗುಪ್ಪೆ ಕೃಷ್ಣೇಗೌಡ ಮತ್ತು ನಮ್ಮ ಪತ್ರಿಕೆಯ ಸರಣಿ ವರದಿಯ ಮೇರೆಗೆ ತನಿಖೆಗೊಳಪಟ್ಟು ಕಳೆದ ತಿಂಗಳು ಅಮಾನತು ಆಗಿರುವ ಶಂಕರ್ ಕೋಡಂಬಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿಯೂ ತನ್ನ ಕೈ ಚಳಕ ತೋರಿಸಿದ್ದು *ಜೆ ಬ್ಯಾಡರಹಳ್ಳಿ* ಪ್ರೌಢಶಾಲೆಗೆ *೪,೦೦,೦೦೦ ₹* ಹೆಚ್ಚು ದೋಖಾ ಎಸಗಿದರೆ ಅದೇ ಗ್ರಾಮದ *ಲಕ್ಕಿ ಕಟ್ಟೆ* ಗೆ ಹೋಗುವ ರಸ್ತೆ ಅಭಿವೃದ್ಧಿಗೆಂದು *೨,೦೦,೦೦೦*₹ ತುಂಡು ಗುತ್ತಿಗೆ ಕಾಮಗಾರಿಯನ್ನು ಮಾಡದೇ ಸರ್ಕಾರಕ್ಕೆ ದ್ರೋಹ ಎಸಗಿರುವುದು ದಾಖಲೆಗಳಿಂದ ತಿಳಿದುಬಂದಿದೆ.
೨೦೧೭/೧೮ ನೇ ಸಾಲಿನ ಮುಖ್ಯಮಂತ್ರಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಯಡಿ (೩೦೫೪-೦೦-೧೦೧-೦-೨೯-೧೭೨) *ಜೆ ಬ್ಯಾಡರಹಳ್ಳಿ ಮುಖ್ಯ ರಸ್ತೆಯಿಂದ ಲಕ್ಕಿ ಕಟ್ಟೆ ಗೆ* ಹೋಗುವ ರಸ್ತೆ ಅಭಿವೃದ್ಧಿ ಡಿ ಆರ್ ನಂಬರ್ ೬೯೩/೨೦೧೭-೧೮, ಕೆ.ಅ.ಸಂಖ್ಯೆ ೬೩೭/೨೦೧೭-೧೮ ರ ಬಿಲ್ ಸಂಖ್ಯೆಯಲ್ಲಿ *ಗುತ್ತಿಗೆದಾರ ಶ್ರೀನಿವಾಸ* ಎಂಬುವವರಿಗೆ ದಿನಾಂಕ ೦೬/೦೩/೨೦೧೮ ರಂದು ೧,೮೦,೮೫೨ ರೂಪಾಯಿಗಳ ಬಿಲ್ ನೀಡಲಾಗಿದೆ.
೨೦೧೮/೧೯ ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ನರೇಗಾ ಯೋಜನೆಯಡಿ ಇದೇ ಲಕ್ಕಿ ಕಟ್ಟೆ ರಸ್ತೆಗೆ *೯,೫೦,೦೦೦*₹ ಅನುದಾನದ ಅಡಿಯಲ್ಲಿ ಕೆಲಸ ಮಾಡಲು ಅನುಮೋದನೆ ದೊರೆತಿರುವುದಾಗಿ ಅದೇ ರಸ್ತೆ ಬದಿಯಲ್ಲಿ ಫಲಕ ಅಳವಡಿಸಿದ್ದು ಕಳೆದ ವರ್ಷ ಮಾಡಿದ ರಸ್ತೆ ಅಭಿವೃದ್ಧಿ ಏನಾಯಿತು ಎಂಬ ಪ್ರಶ್ನೆ ಎದುರಾಗುತ್ತದೆ.
ಕಳೆದ ವರ್ಷ ರಸ್ತೆ ಅಭಿವೃದ್ಧಿ ಮಾಡಿರುವುದಕ್ಕೆ ಸಣ್ಣ ಕುರುಹೂ ಸಹ ದೊರೆಯುವುದಿಲ್ಲ, ರಸ್ತೆಯ ಎರಡೂ ಬದಿಯಲ್ಲಿ ಚರಂಡಿಯನ್ನಾಗಲಿ ಕೊನೇಪಕ್ಷ ತಿಪ್ಪೆ ಗುಂಡಿಗಳನ್ನು ಎತ್ತಿಸದಿರುವುದು ಕಂಡುಬರುತ್ತದೆ, ಸ್ಥಳೀಯರನ್ನು ಈ ಬಗ್ಗೆ ಮಾತನಾಡಿಸಿದಾಗ ಖಡಾಖಂಡಿತವಾಗಿ ಕಳೆದ ಸಾಲಿನಲ್ಲಿ ಈ ರಸ್ತೆಗೆ ಒಂದು ಹಿಡಿ ಮಣ್ಣು ಸಹ ಹಾಕಿಲ್ಲವೆಂದು ದೂರುತ್ತಾರೆ.
ಸಂಬಂಧಿಸಿದ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಎಲ್ಲಾ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಿಲ್ ಪಾವತಿಸಿರುವ ಹಣವನ್ನು ಹಿಂಪಡೆದುಕೊಳ್ಳಲಿ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು