ಮಕ್ಕಳು ಸೃಜನಶೀಲರಾಗಿ ಬೆಳೆಯಬೇಕು ಹರೀಶ್ ಹೆಗ್ಗಡೆ
ಚನ್ನಪಟ್ಟಣ: ಸರ್ಕಾರಿ ಶಾಲಾ ಮಕ್ಕಳು ಎಂದರೆ ಮೂಗು ಮುರಿಯುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತಸದ ಸಂಗತಿ, ಇಂತಹ ಮಕ್ಕಳಿಗೆ ಸಹಾಯ ಹಸ್ತ ನೀಡಲು ತುಂಬಾ ಖುಸಿಯಾಗುತ್ತದೆ ಎಂದು ಶೆಟ್ಟಿಹಳ್ಳಿ ಗ್ರಾಮದಲ್ಲಿ ವೃದ್ದಾಶ್ರಮ ನಡೆಸುತ್ತಿರುವ ಮಾತೃಶ್ರೀ ಸೇವಾ ಟ್ರಸ್ಟ್ ನ ಸಂಸ್ಥಾಪಕ ಕಾರ್ಯದರ್ಶಿ ಹರೀಶ್ ಹೆಗ್ಗಡೆ ತಿಳಿಸಿದರು, ಅವರು ಮತ್ತೀಕೆರೆ ಶೆಟ್ಟಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾನಪದ ಪರಿಷತ್ತು ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ ರವರು ಮಕ್ಕಳ ಕಲಿಕೆ ಪ್ರಾರಂಭವಾಗುವುದೇ ಪ್ರಾಥಮಿಕ ಶಾಲೆಯಲ್ಲಿ, ಮಕ್ಕಳು ಇಲ್ಲಿ ಏನು ಕಲಿಯುತ್ತಾರೋ ಅದು ಉನ್ನತ ಶಿಕ್ಷಣದಲ್ಲಿಯೂ ಮುಂದುವರಿಯುತ್ತದೆ, ಪ್ರಾಥಮಿಕ ಶಾಲೆಯ ಶಿಕ್ಷಕರೇ ಭವಿಷ್ಯದ ಪ್ರಜೆಗಳ ಶಾಶ್ವತ ಕಂಬಗಳು, ಶಿಕ್ಷಕರು ಮತ್ತು ಪೋಷಕರು ಇಬ್ಬರೂ ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆಯೋ ಅದನ್ನೇ ಕಲಿಸಿಕೊಟ್ಟರೇ ಭವಿಷ್ಯದಲ್ಲಿ ಮಕ್ಕಳು ಉತ್ತಮ ಹೆಸರು ಗಳಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜೀವರಕ್ಷಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಆಶಾ ರವರು ನಿಮ್ಮ ತಂದೆತಾಯಿಗಳು ನಿಮ್ಮನ್ನು ಎಷ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಾರೋ ಅಷ್ಟೇ ಪ್ರೀತಿಯಿಂದ ತಮ್ಮ ತಂದೆತಾಯಂದಿರನ್ನು ನೋಡಿಕೊಂಡರೆ ಅನಾಥ ಶ್ರಮ ಮತ್ತು ವೃದ್ದಾಶ್ರಮಗಳ ಅವಶ್ಯಕತೆ ಇಲ್ಲ, ಸಮಾಜ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂದು ನಮಗೆ ನಾವೇ ಪ್ರಶ್ನೆ ಮಾಡಿಕೊಂಡರೆ ಉತ್ತಮ ಜೀವನ ನಡೆಸಬಹುದು ಎಂದರು.
ಮುಖ್ಯ ಶಿಕ್ಷಕ ಕರಿಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಾತೃಶ್ರೀ ಸೇವಾ ಟ್ರಸ್ಟ್ ನ ಅಧ್ಯಕ್ಷ ನಾಗೇಶ್ ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂತೋಷ, ಕೃಷ್ಣಪ್ಪ, ಮನೋಜ್ ಮತ್ತು ಶಾಲಾ ಶಿಕ್ಷಕರು ಹಾಜರಿದ್ದರು, ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು