ಅನೈತಿಕ ಸಂಬಂಧ ಮನನೊಂದು ದಂಪತಿ ಆತ್ಮಹತ್ಯೆ, ಉದ್ರಿಕ್ತರಿಂದ ಬೆಂಕಿ
ಚನ್ನಪಟ್ಟಣ: ತಾಲ್ಲೂಕಿನ ಸಾದಾರಹಳ್ಳಿ ದಾಖ್ಲೆ ಶ್ರೀನಿವಾಸಪುರ ಗ್ರಾಮದಲ್ಲಿ ದೇವಾಲಯದ
ಅರ್ಚಕನೊಬ್ಬನ ಅನೈತಿಕ ಸಂಬಂಧದಿಂದ ಗಂಡಹೆಂಡತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಅರ್ಚಕ ತ್ಯಾಗರಾಜ ಮನೆ ಹಾಗು ಮನೆಯ ಮುಂದೆ ನಿಂತಿದ್ದ ಅವರ ಕಾರಿಗೆ ಬೆಂಕಿಹಚ್ಚಿರುವ ಘಟನೆ ಮಂಗಳವಾರ ಸಂಜೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲೋಕೇಶ್(೩೩), ಕೌಸಲ್ಯ(೨೪) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಗ್ರಾಮದ ಮುತ್ಯಾಲ ಮಾರಮ್ಮ ದೇವಸ್ಥಾನದ ಅರ್ಚಕ ತ್ಯಾಗರಾಜು ಎಂಬ ವ್ಯಕ್ತಿಯ ಚೆಲ್ಲಾಟದಿಂದ ನೊಂದ ದಂಪತಿಗಳು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮತ್ತು ಸಂಬಂಧಿಕರು ಮನೆಯ ಮುಂದೆ ಗಲಾಟೆ ನಡೆಸಿ ಬೆಂಕಿ ಹಚ್ಚಿದ್ದಾರೆ. ಬೆಂಕಿಯಲ್ಲಿ ಅರ್ಚಕನಿಗೆ ಸೇರಿದ ಇನ್ನೋವಾ ಮತ್ತು ಮಾರುತಿ ಆಮ್ನಿ ಕಾರು, ಬೈಕು ಸೇರಿದಂತೆ ಮನೆಗೆ ಹಾನಿಯಾಗಿದೆ. ಈ ವೇಳೆ ಪಕ್ಕದಲ್ಲೇ ಇದ್ದ ದೇವಾಲಯ ಮತ್ತು ಟ್ರ್ಯಾಕ್ಟರ್ ಸಹ ಬೆಂಕಿಗೆ ಆಹುತಿಯಾಗಿವೆ.
ಶ್ರೀನಿವಾಸಪುರ ಗ್ರಾಮದ ಲೋಕೇಶ್ ಮತ್ತು ಕೌಸಲ್ಯ ೫ ವರ್ಷಗಳ ಹಿಂದೆ ವಿವಾಹವಾಗಿದ್ದರು. ಕೌಸಲ್ಯ ಮತ್ತು ಅದೇ ಗ್ರಾಮದ ಮುತ್ಯಾಲಮಾರಮ್ಮ ದೇವಿಯ ಪೂಜಾರಿ ತ್ಯಾಗರಾಜು ನಡುವೆ ಅನೈತಿಕ ಸಂಬಂಧ ಇದ್ದು, ಕಳೆದ ಒಂದು ವಾರದ ಹಿಂದೆ ಇವರಿಬ್ಬರು ಊರು ಬಿಟ್ಟು ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ.
ಪತ್ನಿಯನ್ನು ಹುಡುಕಿ ರಾಜಿಸಂಧಾನ ಮಾಡಿ ಕರೆತಂದಿದ್ದ ಲೋಕೇಶ್, ತ್ಯಾಗರಾಜು ಜತೆ ಇನ್ನು ಮುಂದೆ ಸಹವಾಸ ಮಾಡದಂತೆ ಪತ್ನಿಯ ಕೈಯಲ್ಲಿ ಆಣೆ ಪ್ರಮಾಣ ಮಾಡಿಸಿಕೊಂಡಿದ್ದ.
ಒಂದು ವಾರದ ನಂತರ ಕಾಮಪಿಶಾಚಿ ಅರ್ಚಕ ತ್ಯಾಗರಾಜ ಲೋಕೇಶ್ ಮೊಬೈಲ್ಗೆ ಆತನ ಪತ್ನಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಪೋಟೋ ಮತ್ತು ವಿಡಿಯೋವನ್ನು ಕಳುಹಿಸಿದ್ದಾಗಿ ತಿಳಿದು ಬಂದಿದೆ.
ಇದರಿಂದ ಮನನೊಂದ ದಂಪಂತಿಗಳು ಮನೆಯಲ್ಲೇ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಂಪತಿಗಳು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ತ್ಯಾಗರಾಜು ಮನೆಯ ಮುಂದೆ ಜಮಾಯಿಸಿ ಗಲಾಟೆ ನಡೆಸಿ ಬೆಂಕಿ ಹಚ್ಚಿದ್ದಾರೆ.
ತ್ಯಾಗರಾಜು ಮನೆಯಲ್ಲಿದ್ದ ತ್ಯಾಗರಾಜು ತಾಯಿ, ಅಣ್ಣ, ಮತ್ತು ಮನೆಯಲ್ಲಿದ್ದವರು ತಮ್ಮ ಮನೆಯ ಹಿಂಭಾಗದಲ್ಲಿರುವ ಇನ್ನೊಂದು ಮನೆಯಲ್ಲಿ ಅವಿತು ಕುಳಿತಿದ್ದರಿಂದ ಯಾವುದೇ ಅಪಾಯವಿಲ್ಲದೆ ಬಚಾವ್ ಆಗಿದ್ದಾರೆ.
ಇದೇ ಸಮಯದಲ್ಲಿ ಆರೋಪಿ ತ್ಯಾಗರಾಜು ಪರಾರಿಯಾಗಿದ್ದು
ಅಕ್ಕೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಡಿವೈಎಸ್ಪಿ ಮಲ್ಲೇಶ್, ವೃತ್ತ ನಿರೀಕ್ಷಕ ಮಂಜುನಾಥ್ ಹಾಗೂ ಅಕ್ಕೂರು ಪೋಲಿಸ್ ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು