ಚನ್ನಪಟ್ಟಣಕ್ಕೆ ಮುಖ್ಯ ಮಂತ್ರಿಗಳ ಭೇಟಿ
ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತರಾಟೆ
ಚನ್ನಪಟ್ಟಣ.ಜೂ.೧೧: ಇಂದು ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಈ ತಿಂಗಳು ೧೭, ೧೮ರಂದು ಮುಖ್ಯ ಮಂತ್ರಿಗಳು ಚನ್ನಪಟ್ಟಣ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಳ್ಳುವುದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಸಭೆಯನ್ನು ಕರೆಯಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಮುಲ್ಲೈಮುಹಿಲನ್ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಮ್ಮ ಇಲಾಖೆಯ ವ್ಯಾಪ್ತಿಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಜಲ ಸಂಪನ್ಮೂಲ ಇಲಾಖೆಯ ಇಂಜಿಯರ್ ವೆಂಕಟೆಗೌಡರ ವಿರುದ್ಧ ಕಿಡಿಕಾರಿದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಮುಲೈ ಮುಹಿಲನ್ ಅವರು ೧೭ನೇ ತಾರೀಖಿನ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಪ್ರಯತ್ನ ಮಾಡಬೇಕು, ಇನ್ನಿತರ ಇಲಾಖೆಗಳ ಎಲ್ಲಾ ಕಾಮಗಾರಿಗಳು ಸಂಪೂರ್ಣವಾಗಬೇಕು, ಇಲ್ಲದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಲಕ್ಷ ಲಕ್ಷ ಸಂಬಳ ಎಣಿಸಿಕೊಳ್ಳುವ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡದಿರುವುದು ನಾಚಿಕೆಗೇಡಿನ ಸಂಗತಿ. ಸಣ್ಣ ದಾಖಲೆಗಳನ್ನು ಪಡೆದುಕೊಳ್ಳಲು ಸಾರ್ವಜನಿಕರನ್ನು ಅಲೆದಾಡಿಸುತ್ತಿರಿ ಎಂಬ ದೂರುಗಳು
ಇವೆ.
ಅವರ ಕೆಲಸ ಕಾನೂನಾತ್ಮಕವಾಗಿ ಆಗುವುದಿಲ್ಲ ಎಂದಾದರೆ ಸೌಜನ್ಯವಾಗಿ ಹೇಳಿ ಎಂದರು.
ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಮುಲೈ ಮುಹಿಲನ್ ಮಾತನಾಡಿ ಮುಖ್ಯಮಂತ್ರಿಗಳ ಮುಂದೆ ಜಿಲ್ಲಾಧಿಕಾರಿಗಳು ಕ್ಷಮೆ ಕೇಳುವ ಹಾಗೆ ಮಾಡಬೇಡಿ, ಎಲ್ಲಾ ಕೆಲಸಗಳನ್ನು ನಿಗಧಿತ ವೇಳೆಯಲ್ಲಿ ಮಾಡಿ ಮುಗಿಸಿ ಎಂದರು.
ಜಲಾಮೃತ ಯೋಜನೆ, ನೀರು ಮತ್ತು ಮೇವು ಸಮಸ್ಯೆ, ವಸತಿ ಯೋಜನೆ, ಮಹತ್ಮಾ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆ, ಗ್ರಾಮ ವಿಕಾಸ್ ಯೋಜನೆ ಬಗ್ಗೆ ಗಮನ ಸೆಳೆದರು. ಕೆಪಿಆರ್ ನಿಯಮ ೨೧೦ರಂತೆ ಕೆಲವು ಗ್ರಾಮ ಪಂಚಾಯ್ತಿ ಸ್ವತ್ತುಗಳಿಗೆ ಪೂರ್ವಾನುಮೋದನೆ ನೀಡುವ ಬಗ್ಗೆ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸ್ಥಾಯಿ ಸಮಿತಿ ರಚನೆ ಬಗ್ಗೆಯೂ ಸೂಚನೆ ನೀಡಿದರು.
ಬಹುತೇಕ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿ, ಗ್ರಾಮ ಮಟ್ಟದಲ್ಲಿ ನಿರಂತರ ಸಂಪರ್ಕ ಮಾಡಿ ಅಭಿವೃದ್ಧಿಗೆ ಒತ್ತು ಕೊಡಲು ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಭೇಟಿ:
ಮುಖ್ಯಮಂತ್ರಿಗಳು ಈ ತಿಂಗಳು ೧೭ರಂದು ಹೊಂಗನೂರು, ಕೋಡಂಬಳ್ಳಿ, ಅಕ್ಕೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರವಾಸ ಮಾಡಲಿದ್ದಾರೆ. ೧೮ ರಂದು ಬೇವೂರು, ಮಳೂರು ಹಾಗೂ ಪುರ ಪ್ರದೇಶದಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು