Tel: 7676775624 | Mail: info@yellowandred.in

Language: EN KAN

    Follow us :


ಪಟ್ಲು ಕೆರೆಗೆ ಜಲಾಮೃತ ಯೋಜನೆಯ ಕಾಯಕಲ್ಪ;

Posted date: 11 Jun, 2019

Powered by:     Yellow and Red

ಚನ್ನಪಟ್ಟಣ.ಜೂ.೧೧: ಇಂದು ಚನ್ನಪಟ್ಟಣ ತಾಲ್ಲೂಕು ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯ್ತಿ ಪ್ಯಾಪ್ತಿಯ ಪಟ್ಲು ಕೆರೆಯನ್ನು ಜಲಾಮೃತ ಯೋಜನೆಯಡಿ ಅಭಿವೃದ್ಧ್ಧಿ ಪಡಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. 

ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಇ.ಒ ರಾಮಕೃಷ್ಣ ಮಾತನಾಡಿ ಜಲ + ಅಮೃತ ಎಂದರೆ ನೀರು ಅಮೃತ ಎಂದರ್ಥ, ನಾವು ನೀರನ್ನು ಜಲಾಮೃತ ಎಂದು ಭಾವಿಸಿಕೊಂಡಿದ್ದೇವೆ, ಈ ಯೋಜನೆಯ ಅಡಿ ಇಂದು ಪಟ್ಲು ಗ್ರಾಮದ ಕೆರೆಗೆ ಕಾಮಗಾರಿ ಶುರು ಮಾಡಲು ವಿದ್ಯುಕ್ತವಾಗಿ ಚಾಲನೆ ನೀಡಿದ್ದೇವೆ ಮುಂದೆ ಈ ತಾಲ್ಲೂಕಿನ ಮಾರ್ಚನಹಳ್ಳಿ ಕೆರೆಗೆ ಕಾಯಕಲ್ಪ ಮಾಡಬೇಕಾಗಿದೆ.


ಈ ಎರಡೂ ಕೆರೆಗಳನ್ನು ಜೆಸಿಬಿ ಮೂಲಕ ಕಾಮಗಾರಿಯನ್ನು ಮಾಡಿಸಲಾಗುತ್ತಿದೆ. ಈ ತಿಂಗಳು ೧೭ ಮತ್ತು ೧೮ ರಂದು ಮುಖ್ಯಮಂತ್ರಿಗಳು ಸ್ವಕ್ಷೇತ್ರಕ್ಕೆ ಆಗಮಿಸುತ್ತಿರುವುದರಿಂದ ಆ ಕೆರೆಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಲಿದ್ದಾರೆ ಎಂದರು.


ಮನುಷ್ಯ ಬದುಕಿರುವಾಗಲೇ ಭೂಮಿ ಯನ್ನು ಉಳಿಸುವ ಕಾರ್ಯ ಮಾಡಬೇಕು. ಚನ್ನಪಟ್ಟಣ ತಾಲ್ಲೂಕಿನಲ್ಲಿ ಅನೇಕ ಚೆಕ್ ಡ್ಯಾಂ ಗಳನ್ನು ಕಟ್ಟಬಹುದಾಗಿದೆ ಆದರೆ ಅದಕ್ಕೆ ಒತ್ತುವರಿದಾರರ ಸಮಸ್ಯೆ ಇದೆ. ಅದನ್ನು ನಿವಾರಿಸಿದರೆ ಈ ತಾಲ್ಲೂಕಿನಲ್ಲಿ ಅನೇಕ ಸಂಖ್ಯೆಯಲ್ಲಿ ಚೆಕ್ ಡ್ಯಾಂಗಳನ್ನು ಮಾಡಿ, ನೀರನ್ನು ಭೂಮಿಯಲ್ಲಿ ಇಂಗಿಸುವ ಕೆಲಸವನ್ನು ಮಾಡಬಹುದು.

ಈ ಎರಡೂ ಕೆರೆಗಳಲ್ಲಿ ಫಲವತ್ತಾದ ಗೋಡು ಮಣ್ಣು ತುಂಬಿರುವುದರಿಂದ  ಅದನ್ನು ಭೂಮಿಗೆ ಬಳಸಿಕೊಂಡರೆ, ರೈತನ ಭೂಮಿ ಫಲವತ್ತಾಗುತ್ತದೆ. ಈಗ ತೆಗೆಯುವ ಮಣ್ಣನ್ನು ರೈತರಿಗೆ ಕೊಟ್ಟು ಉಳಿದ ಮಣ್ಣನ್ನು ರಸ್ತೆ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದರು.


ಹೊಂಗನೂರು ಜಿಲ್ಲಾ ಪಂಚಾಯ್ತಿ ಸದಸ್ಯೆಯಾದ ಶ್ರೀಮತಿ ವೀಣಾ ಕುಮಾರಿ ಮಾತನಾಡಿ ಪಟ್ಲು ಮತ್ತು ಮಾರ್ಚನಹಳ್ಳಿ ಕೆರೆಗಳಷ್ಟೇ ಅಲ್ಲದೇ ತಾಲ್ಲೂಕಿನ ಎಲ್ಲಾ ಕೆರೆಗಳ ಹೂಳು ಎತ್ತಿಸಿ ಎಲ್ಲಾ ಕೆರೆಗಳಲ್ಲೂ ತುಂಬಿಸಲಿ ಎಂದರು.


ಬೇವೂರು ಜಿಲ್ಲಾ ಪಂಚಾಯ್ತಿ ಸದಸ್ಯೆಯಾದ ಶ್ರೀಮತಿ ಸುಗುಣ ತಿಮ್ಮಪ್ಪ ಮಾತನಾಡಿ ಇಂತಹ ಅಪೂರ್ವವಾದ ಕಾರ್ಯಕ್ರಮವನ್ನು ಗ್ರಾಮದ ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.


ಇದೇ ಗ್ರಾಮದ ಮಾಗಡಿಯಲ್ಲಿ ಅಧಿಕಾರಿಯಾಗಿರುವ ಚಂದ್ರಕೀರ್ತಿ ಎಂಬುವವರು ಮಾತನಾಡಿ, ಸರ್ಕಾರದ ಹಾಗೂ ಇಲಾಖೆಯವರ ಈ ಕಾರ್ಯ ಕ್ರಮಗಳು ಮೆಚ್ಚುಗೆಗೆ ಪಾತ್ರವಾಗಿವೆ ಎಂದರು.


ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹರೂರು ರಾಜಣ್ಣ ಮಾತನಾಡಿ, ಸ್ವಚ್ಛ ಮೇವ ಜಯತೇ ಆಂದೋಲನ ಹಾಗೂ ಜಲಾಮೃತ ಯೋಜನೆ ಇವು ಪರಿಸರ ದಿನಾಚರಣೆಯ ನೆನೆಪಿಗಾಗಿ ನಡೆಯುವ ಒಂದು ದಿವಸದ ಕಾರ್ಯಕ್ರಮವಾಗದೆ, ನಿರಂತವಾಗಿ ನಡೆಯುವ ಕಾರ್ಯಕ್ರಮವಾ ಗಬೇಕು . ಪರಿಸರ ಹಾಳಾಗಲು ನಾವೇ ಕಾರಣವಾಗಿದ್ದೇವೆ, ಹಿಂದೆ ನಮ್ಮ ಹಳ್ಳಿಗಳಲ್ಲಿ ಅವರವರ ಕೆಲಸಗಳನ್ನು ಅವರೇ ಮಾಡಿಕೊಳ್ಳುತ್ತಿದ್ದರು, ಈಗ ಆ ಪದ್ದತಿ ಮತ್ತೆ ಬರಬೇಕು ಎಂದರು.


ಸಂದರ್ಭದಲ್ಲಿ ತಿಟ್ಟಮಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷ ಪುಟ್ಟಸ್ವಾಮಿ, ಸಾಮಾಜಿಕ ಅರಣ್ಯಾಧಿಕಾರಿ ಚೈತ್ರ, ಪಂಚಾಯ್ತಿ ಪಿಡಿಒ ಕಾವ್ಯ, ಗ್ರಾಮ ಪಂಚಾಯ್ತಿ ಸದಸ್ಯರುಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑