ತೆಂಗು ಅಭಿವೃದ್ಧಿ ಮಂಡಳಿಯ ಅನುದಾನ ಸಂಪೂರ್ಣ
ಕೇಂದ್ರ ಸರ್ಕಾರದ ತೆಂಗು ಅಭಿವೃದ್ಧಿ ಮಂಡಳಿಯಿಂದ ನೇರವಾಗಿ ತೆಂಗು ಅಭಿವೃದ್ಧಿ ಸಂಘಗಳಿಗೆ ಹನ್ನೆರಡು ವರ್ಷಗಳ ಈಚೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ದಶ ಕೋಟಿ ಗೂ ಹೆಚ್ಚು ಹಣ ಗುಳುಂ ಆಗಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಸಮಾಜ ಸೇವಕ ಮೊಗಳ್ಳಿದೊಡ್ಡಿ ರೋಹಿತ್ ಒತ್ತಾಯಿಸಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ತಾಲ್ಲೂಕಿನಲ್ಲಿ ಏಳು ತೆಂಗು ಅಭಿವೃದ್ಧಿ ಸಂಘಗಳಿದ್ದು ಆರು ಸಂಘಗಳು ಸಕ್ರಿಯವಾಗಿವೆ, ಒಂದು ಸಂಘ ನಾಮಕಾವಸ್ಥೆಯದಾಗಿದ್ದು ಹಣ ಸಂದಾಯವಾಗಿದೆ, ಕೇವಲ ನಾಲ್ಕು ವರ್ಷಗಳಲ್ಲಿ ಅಂದರೆ ೨೦೧೪ ರಿಂದ ೨೦೧೮ ರ ಅವಧಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಏಳು ಸಂಘಗಳಿಗೆ *೪,೦೮,೫೨,೯೨೪₹* ಗಳು ಸಂದಾಯವಾಗಿದೆ, ಇಲ್ಲಿ ಸಂಘದ ಬಲಾಢ್ಯರು ಮಾತ್ರ ತಮ್ಮ ವೈಯುಕ್ತಿಕ ಅಭಿವೃದ್ಧಿ ಹೊಂದಿದ್ದಾರೆ ವಿನಹ ಎರಡು ನೂರಕ್ಕೂ ಹೆಚ್ಚು ಸದಸ್ಯರಿಗೆ ಅದರ ಅರಿವೇ ಇಲ್ಲ ಎಂದರು.
ಪ್ರತಿ ಸಂಘಗಳಿಗೂ ಟ್ರ್ಯಾಕ್ಟರ್, ಟಿಲ್ಲರ್, ಟ್ರೈಲರ್, ಟ್ಯಾಂಕರ್ ಗಳಲ್ಲದೇ ತೆಂಗುಬೆಳೆ ಬೆಳೆದಿರುವ ಜಮೀನುಗಳಲ್ಲಿ ಬೆಳೆಯುವಂತಹ ಬಾಳೆ ಸಸಿಗಳು, ಮುಸುಕಿನ ಜೋಳ, ಹುರುಳಿಬೀಜ ದಂತಹ ಅನೇಕ ಬೀಜಗಳನ್ನು ಸಹ ಟನ್ ಗಟ್ಟಲೆ ಕೊಟ್ಟಿರುವುದು, ಅವುಗಳಿಗೆ ರಾಸಾಯನಿಕ ಮತ್ತು ರಸಗೊಬ್ಬರಗಳನ್ನು ಸಹ ಕೊಟ್ಟಿರುವುದು ದಾಖಲೆಗಳಿಂದ ತಿಳಿಯುತ್ತದೆ, ಈ ಎಲ್ಲಾ ಸರಕು ಸರಂಜಾಮುಗಳನ್ನು ಇಲಾಖೆ ವಿತರಿಸಿದ್ದು ಬಲಾಢ್ಯರು ಮಾತ್ರ ಉಪಯೋಗಿಸಿಕೊಳ್ಳುತ್ತಿರುವುದು ತಿಳಿದುಬಂದಿದೆ ಎಂದು ಆರೋಪಿಸಿದರು.
ಮುಂದುವರಿದು ಮಾತನಾಡಿದ ಅವರು ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳಿಗೆ ಮತ್ತು ಸಂಬಂಧಿಸಿದ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಮಾತನಾಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಚನ್ನಪಟ್ಟಣ ತಾಲೂಕು ಒಂದರಲ್ಲೇ ಕೇವಲ ನಾಲ್ಕು ವರ್ಷಗಳಲ್ಲಿ ನಾಲ್ಕು ಕೋಟಿಗೂ ಹೆಚ್ಚು ಹಣ ದುರುಪಯೋಗ ಆಗಿದೆ ಎಂದರೆ ೨೦೦೭ ರಿಂದ ೨೦೧೯ ರ ವರೆಗೆ ಎಷ್ಟು ದುರುಪಯೋಗ ಆಗಿದೆ, ರಾಮನಗರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಶತಕೋಟಿಗೂ ಹೆಚ್ಚು ಹಣ ದುರುಪಯೋಗ ಆಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ, ಇದನ್ನು ಉನ್ನತ ಮಟ್ಟದ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ನೈಜ ಫಲಾನುಭವಿಗಳಿಗೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಮೋಹನ್, ರಾಮಕೃಷ್ಣ, ಚನ್ನೇಗೌಡ ಮತ್ತು ಬಸವರಾಜು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು