ವಿಶ್ವಕ್ಕೆ ಆರೋಗ್ಯ ಭಾಗ್ಯ ನೀಡಿದ ಭಾರತದ ಯೋಗ ಹರೂರು ರಾಜಣ್ಣ
ಚನ್ನಪಟ್ಟಣ: ನಮ್ಮ ಭಾರತ ದೇಶದ ಪುರಾತನ ವಿದ್ಯೆಯಾದ ಯೋಗವನ್ನು ವಿಶ್ವದ ಎಲ್ಲಾ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಿಶ್ವಕ್ಕೆ ಪರಿಚಯಿಸಿ ಯೋಗದಲ್ಲಿ "ವಿಶ್ವ ಗುರು* ಎನಿಸಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಹೇಳಿದರು.
ಅವರು ನಗರದ ಗುರುಕೃಪಾ ವಾಣಿಜ್ಯ ಸಂಕೀರ್ಣದಲ್ಲಿ ಏರ್ಪಡಿಸಿದ್ದ ದಿ ಆರ್ಟ್ ಆಫ್ ಲಿವಿಂಗ್ ನ ಚನ್ನಪಟ್ಟಣ ಶಾಖೆಯ ಐದನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು ಮಸತನಾಡಿದರು.
ಯೋಗ ಎಂಬುದು ದೇಹದ ಆರೋಗ್ಯದ ಜೊತೆಗೆ ಮನಸ್ಸಿನಲ್ಲಿ ಆಹ್ಲಾದ ತುಂಬಲು ಸಹಕಾರಿಯಾಗಿದೆ, ಕಾಟಚಾರಕ್ಕೆಂದು ಯೋಗ ಮಾಡದೇ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಕನಿಷ್ಠ ಅರ್ಧ ಗಂಟೆ ಮನೆಯಲ್ಲೇ ಯೋಗ ಮಾಡಬಹುದು ಎಂದು ಸಲಹೆ ನೀಡಿದರು.
ದಿ ಆರ್ಟ್ ಆಫ್ ಲಿವಿಂಗ್ ನ ಸಂಚಾಲಕರು ಹಾಗೂ ಯೋಗ ಗುರುಗಳಾದ ರಾಧಿಕಾ ರವಿಕುಮಾರ್ ಗೌಡ ಮಾತನಾಡಿ ಈ ಬಾರಿಯ ವಿಶ್ವ ಯೋಗದ ಘೋಷಣೆ *ಹೃದಯಕ್ಕಾಗಿ ಯೋಗ* ಎಂಬುದಾಗಿದೆ, ಅಂದರೆ ನಿಮ್ಮ ಹೃದಯ ಆರಾಮವಾಗಿ ಮಿಡಿಯಬೇಕಾದರೆ ಯೋಗ ತೀರಾ ಅವಶ್ಯವಾಗಿದೆ.
ಯೋಗ ಕೇವಲ ಆರೋಗ್ಯ ಮಾತ್ರವಲ್ಲದೆ ಸಮಾಜದಲ್ಲಿ ದ್ವೇಷವನ್ನು ತೊಡೆದು ಸ್ನೇಹವನ್ನು ಸಂಪಾದಿಸಲು, ತಾಳ್ಮೆಯಿಂದ ನಡೆದುಕೊಳ್ಳಲು ಹಾಗೂ ಆರೋಗ್ಯವಾಗಿ ಧೀರ್ಘಕಾಲ ಜೀವಿಸಲು ಯೋಗ ಅತ್ಯವಶ್ಯಕವಾಗಿದೆ, ಇದನ್ನೇ ಪ್ರಧಾನಿ ಮೋದಿ ಯವರು ಸಹ ಕ್ರಿಕೆಟ್ ಆಟ ಆಡುವ ಭಾರತ ತಂಡದ ಸದಸ್ಯರಿಗೂ ಸಹ ಆಟ ಗೆಲ್ಲುವುದರ ಜೊತೆಗೆ ಅವರ ಹೃದಯವನ್ನು ಗೆದ್ದು ಸ್ನೇಹವನ್ನು ಸಂಪಾದಿಸಬೇಕೆಂಬ ಹಿತವಚನವನ್ನು ಹೇಳಿದ್ದಾರೆ ಎಂದು ತಿಳಿಸಿದರು.
ಉಪನ್ಯಾಸಕ ಡಾ ಮಧುಸೂದನಚಾರ್ಯಜೋಷಿ ಮಾತನಾಡಿ ವಿಶ್ವ ಗುರುವಾದ ಭಾರತ ಜಗತ್ತಿಗೆ ಅನೇಕ ರೀತಿಯ ಕೊಡುಗೆಗಳನ್ನು ನೀಡಿದೆ ವಿಶ್ವದ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಶ್ರೇಷ್ಠ ಕೊಡುಗೆ ಯೋಗ ಎಂದು ಅಭಿಪ್ರಾಯಪಟ್ಟರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಲ್ಲಿನ ಆರ್ಟ್ಆಫ್ ಲಿವಿಂಗ್ ಶಾಖೆ ವಿಜಯವಾಣಿ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಲಭವಾಗಿ ತಂದುಕೊಡುವಂತಹ ಸಾಧನ ಯೋಗವಾಗಿದೆ ಪತಂಜಲಿ ಮಹರ್ಷಿಗಳು ನೀಡಿದ ಈ ವಿದ್ಯೆ ಇಲ್ಲಿ ಅತ್ಯಂತ ಅವಶ್ಯಕ ಸಾಧನವಾಗಿದೆ, ಬದುಕುವುದನ್ನು ವಿಶ್ವಕ್ಕೆ ಕಲಿಸಿದ ದೇಶ ಭಾರತ ಕೋಲಾ ಪೆಪ್ಸಿ ಫಾಸ್ಟ್ ಫುಡ್ ಗಳ ಮೂಲಕ ಸಾಯುವುದು ಹೇಗೆಂಬ ದಾರಿಯನ್ನು ಪಾಶ್ಚಾತ್ಯ ರಾಷ್ಟ್ರಗಳು ನಮಗೆ ಕಲಿಸಿಕೊಟ್ಟರೆ ಬದುಕುವುದು ಹೇಗೆಂಬ ದಾರಿಯನ್ನು ಆರ್ಟ್ ಆಫ್ ಲಿವಿಂಗ್ ನ ಪಂಡಿತ್ ರವಿಶಂಕರ್ ಗುರೂಜಿಯವರು ವಿಶ್ವಕ್ಕೆ ಕಲಿಸಿಕೊಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಆರೆಸ್ಸೆಸ್ ನ ಜಿಲ್ಲಾ ಸಂಚಾಲಕರಾದ ಹರೀಶ್ ರವರು ಗೀತೆಯಲ್ಲಿ ಉಪದೇಶಿಸಿದ ನಾಲ್ಕು ಯೋಗಗಳು ನಾಲ್ಕು ವೇದಗಳ ಮಹತ್ವ ಇತ್ಯಾದಿಗಳನ್ನು ಪ್ರಸ್ತಾಪಿಸಿದರು, ಭಾರತ ವಿಕಾಸ ಪರಿಷತ್ ನ ತಾಲ್ಲೂಕು ಅಧ್ಯಕ್ಷರಾದ ವಸಂತಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು, ವಿಜಯ ವಾಣಿ ವರದಿಗಾರ ರಾದ ಅಭಿಲಾಷ್ ವಂದಿಸಿದರೆ ಯೋಗೇಶ ಚಕ್ಕೆರೆ ನಿರೂಪಿಸಿದರು. ಬೆಳಿಗ್ಗೆ ಆರು ಗಂಟೆಯಿಂದ ಏಳು ಮೂವತ್ತ ರವರೆಗೆ ಅನೇಕರು ಯೋಗ ಮಾಡುವುದರ ಮೂಲಕ ಐದನೇ ಅಂತರರಾಷ್ಟ್ರೀಯ ಯೋಗದಲ್ಲಿ ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು