ಮಹಾಭಾರತದ ಶ್ರೀ ಕೃಷ್ಣ ನಿಂದ ಪ್ರಾರಂಭವಾದ ಯೋಗ ಇಂದು ಕಲಿಯುಗದಲ್ಲಿ ವಿಶ್ವವಿಖ್ಯಾತವಾಗಿದೆ ಮೋಹನ್
ಚನ್ನಪಟ್ಟಣ: ಮಹಾಭಾರತದ ಶ್ರೀಕೃಷ್ಣ ನಿಂದ ಮೊದಲ್ಗೊಂಡು ಪತಂಜಲಿ ಗುರುಗಳು, ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಯೋಗ ಸೇರಿದಂತೆ ಇಂದಿನ ಆಧುನಿಕತೆಯ ಗುರುಗಳ ವರೆಗೆ ಯೋಗ ಜನಜನಿತವಾಗಿ ಉಳಿದುಕೊಂಡಿರುವುದಲ್ಲದೆ ಸಂಸ್ಕೃತಿ ಏನೆಂದು ಗೊತ್ತಿಲ್ಲದ, ಯೋಗ ಎಂದರೇನೆಂದು ತಿಳಿಯದ ವಿಶ್ವದ ಎಲ್ಲಾ ಧರ್ಮದ ನಾಗರೀಕರಿಗೆ ಯೋಗ ಗುರು ಭಾರತ ಎಂದೇ ಬಿಂಬಿತವಾದ ಯೋಗ, ನಮ್ಮೆಲ್ಲರ ಹೆಮ್ಮೆಯ ಸಂಕೇತ ಎಂದು ನಗರದ ಮೆಟ್ರಿಕ್ ನಂತರದ ಪುರುಷರ ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಮೋಹನ್ ತಿಳಿಸಿದರು.
ಅವರು ವಿದ್ಯಾರ್ಥಿ ನಿಲಯದಲ್ಲಿ ಇಂದು ಆಯೋಜಿಸಿದ್ದ ಐದನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕುರಿತು ಯೋಗ ಪಟುಗಳಿಗೆ ಯೋಗ ಕುರಿತು ಮಾಹಿತಿ ನೀಡಿದರು.
ಯೋಗದಲ್ಲಿ ಅಷ್ಟಾಂಗ ಯೋಗ ಎಂಬ ಎಂಟು ಆಸನ ಗಳಿದ್ದು ಅದರಲ್ಲಿ ಅನೇಕ ಉಪ ಆಸನಗಳಿವೆ, ಉದಾಹರಣೆಗೆ ಸತ್ಯ, ಅಹಿಂಸೆ, ಬ್ರಹ್ಮಚರ್ಯ, ಯಮ ನಿಯಮ ಇತ್ಯಾದಿ ಯೋಗಗಳಿದ್ದು ಒಂದೊಂದು ಆಸನವೂ ಬಹಳ ವಿಭಿನ್ನವಾಗಿದ್ದು ಒಂದೊಂದು ಆಸನವೂ ದೇಹ ಮತ್ತು ಮನಸ್ಸನ್ನು ಸಂತೃಪ್ತಗೊಳಿಸಿ ಉತ್ತಮ ಆರೋಗ್ಯ ನೀಡುತ್ತದೆ ಎಂದರು.
ಯೋಗ ಕೇವಲ ಆರೋಗ್ಯ ಕ್ಕೆ ಒಳ್ಳೆಯದು ಎಂಬುದಷ್ಟೇ ನಂಬಿಕೆಯಾಗಿದ್ದು ಅದರಾಚೆಗೂ ಅನೇಕ ಉಪಯೋಗಗಳಿವೆ, ಯೋಗ ದೇಹಾರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ, ಒಂದೊಂದು ಆಸನವೂ ದೇಹದ ಒಂದೊಂದು ಖಾಯಿಲೆಗಳನ್ನು ದೂರ ಮಾಡುತ್ತದೆ, ಹಾಗಾಗಿ ಯೋಗಾಭ್ಯಾಸ ವನ್ನು ಕಾಟಚಾರಕ್ಕೆ ಮಾಡದೇ ದಿನನಿತ್ಯದ ಒಂದು ಭಾಗವಾಗಿ ಮಾಡಿಕೊಂಡಾಗ ಮಾತ್ರ ತಮ್ಮ ಮನಸ್ಸು ಮತ್ತು ಆರೋಗ್ಯ ಹತೋಟಿಗೆ ಬಂದು ಜೀವ ಮತ್ತು ಜೀವನ ಸುಭಿಕ್ಷವಾಗಲಿದೆ ಎಂದು ಶಿಬಿರಾರ್ಥಿಗಳಿಗೆ ತಿಳಿ ಹೇಳಿದರು.
ಯೋಗಭ್ಯಾಸವನ್ನು ಪುನರ್ವಸು ಕೇಂದ್ರದ ಯೋಗ ಗುರು ಭರತ್ ನಡೆಸಿಕೊಟ್ಟರು, ವಿದ್ಯಾರ್ಥಿ ನಿಲಯದ ಮಕ್ಕಳು ಯೋಗದಲ್ಲಿ ಪಾಲ್ಗೊಂಡು ಹರ್ಷಿತರಾದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು