Tel: 7676775624 | Mail: info@yellowandred.in

Language: EN KAN

    Follow us :


ಸಾವು ಬದುಕಿನ ಹೋರಾಟದಲ್ಲಿರುವ ರೋಗಿಗಳಿಗೆ ರಕ್ತ ಸಂಜೀವಿನಿ‌ ಇದ್ದಂತೆ ಸಿ ಪುಟ್ಟಸ್ವಾಮಿ

Posted date: 24 Jun, 2019

Powered by:     Yellow and Red

ಸಾವು ಬದುಕಿನ ಹೋರಾಟದಲ್ಲಿರುವ ರೋಗಿಗಳಿಗೆ ರಕ್ತ ಸಂಜೀವಿನಿ‌ ಇದ್ದಂತೆ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ದಾನ ದಾನಗಳಲ್ಲಿ ರಕ್ತದಾನ ಅತಿ ಶ್ರೇಷ್ಠ ದಾನವಾಗಿದೆ, ಬೇರೆ ರೀತಿಯ ಹಲವಾರು ದಾನಗಳು ತೋರ್ಪಡಿಕೆಗೆ ಅಥವಾ ಅಡಂಬರಕ್ಕೆ ಸೀಮೀತವಾದರೆ, ರಕ್ತದಾನ ಸಾವು ಬದುಕಿನ ಹೋರಾಟದಲ್ಲಿ ತೊಯ್ದಾಡುತ್ತಿರುವ ರೋಗಿಗೆ ಜೀವ ಉಳಿಸಲು ನೆರವಾಗುತ್ತದೆ, ಆ ರಕ್ತ ಪಡೆದ ರೋಗಿಯ ಜೀವದ ಜೊತೆಗೆ ಆತನ ಕುಟುಂಬವೂ ಸಹ ತಮ್ಮ ಕುಡಿಯನ್ನು ಉಳಿಸಿಕೊಂಡಂತಾಗುತ್ತದೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಹೇಳಿದರು.

ಅವರು ನಗರದ *ಮಾತೃಶ್ರೀ ಆರ್ಥೋಪೆಡಿಕ್ ಮತ್ತು ಟ್ರಾಮಾ ಸೆಂಟರ್* ನಲ್ಲಿ ಏಳನೇ ವರ್ಷದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ನಮ್ಮ ತಾಲ್ಲೂಕಿನಲ್ಲಿ ತಮ್ಮ ಸಮಯ ಮತ್ತು ಗಳಿಕೆಯನ್ನು ತಾವೇ ಉಪಯೋಗಿಸಿಕೊಳ್ಳದೇ ಸಮಾಜಕ್ಕೆ ಅರ್ಪಿಸುವ ಮನೋಭಾವ ಇರುವ ವ್ಯಕ್ತಿಗಳಲ್ಲಿ ಡಾ ಮಲವೇಗೌಡ ರ ಹೆಸರು ಮುಂಚೂಣಿಯಲ್ಲಿದೆ, ಕೇವಲ ರಕ್ತದಾನ ಶಿಬಿರವಲ್ಲದೆ, ಗಿಡಗಳನ್ನು ನೆಟ್ಟು ಪೋಷಿಸುವುದು, ಪರಿಸರ ಮಾಲಿನ್ಯದ ಬಗ್ಗೆ ಕಾಳಜಿ ವಹಿಸಿವುದು, ಆರ್ಥಿಕವಾಗಿ ಹಿಂದುಳಿದ ಬಡ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವುದು, ಮತ್ತು ಸೈಕಲ್ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ ಸಂಪೂರ್ಣವಾಗಿ ಕನ್ನಡದಲ್ಲಿ ವ್ಯವಹರಿಸುವುದು ಇವರ ಉತ್ತಮ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.


ಮಾತೃಶ್ರೀ ಆಸ್ಪತ್ರೆಯ ಮುಖ್ಯಸ್ಥ ಹಾಗೂ ರಕ್ತದಾನ ಶಿಬಿರದ ರೂವಾರಿ ಡಾ ಮಲವೇಗೌಡ ಮಾತನಾಡಿ

ವಿಶ್ವದಾದ್ಯಂತ ವಿಜ್ಞಾನ ಎಷ್ಟೇ ಬೆಳೆದು ನಿಂತರೂ ಪ್ರಕೃತಿಯ ಮುಂದೆ ಮನುಜರು ನಗಣ್ಯ.


ಮಾನವನ ದೇಹದ ಬಹುತೇಕ ಎಲ್ಲಾ ಅಂಗಗಳನ್ನು ಕೃತಕವಾಗಿ ಜೋಡಿಸಬಹುದಾದರು ದೇಹಕ್ಕೆ ಬೇಕಾದ ರಕ್ತವನ್ನು ಮಾತ್ರ ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ, ಅದೆಷ್ಟೋ ವಿಜ್ಞಾನಿಗಳು ಕೃತಕ ರಕ್ತ ಸೃಷ್ಟಿಸುವಲ್ಲಿ ಅನುತ್ತೀರ್ಣರಾಗಿದ್ದರೂ ಸಹ ತಮ್ಮ ಪ್ರಯತ್ನವನ್ನು ಬಿಡದೆ ಛಲದಂಕ ಮಲ್ಲರಂತೆ ಪ್ರಯತ್ನ ಮುಂದುವರಿಸಿದ್ದಾರೆ.


ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾದರೆ ಅಪಘಾತ ಮತ್ತು ಗರ್ಭಿಣಿ ಸ್ತ್ರೀಯರ ಸಾವಿನ ಸಂಖ್ಯೆ ಇಳಿಮುಖವಾಗುತ್ತದೆ, ಆದರೆ ಅದು ಅಸಾಧ್ಯ, ಹಾಗಾಗಿ ಆರೋಗ್ಯವಂತ ಯುವಕರು ರಕ್ತದಾನ ಮಾಡುವುದರ ಮೂಲಕ ರಕ್ತದ ಕೊರತೆಯಿಂದ ಬಳಲುತ್ತಿರುವ ರೋಗಿಗೆ ನೆರವಾಗಬೇಕು ಎಂದರು.

ರಕ್ತದಾನ ಮಾಡಿದ ವ್ಯಕ್ತಿ ಮತ್ತಷ್ಟು ಬಲಿಷ್ಠನಾಗುತ್ತಾನೆ, ರಕ್ತದಾನ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆ ಬರುವುದಿಲ್ಲ ಎಂದು ಅವರು ತಿಳಿಸಿದರು.


ಶಿಬಿರದಲ್ಲಿ ರೆಡ್ ಕ್ರಾಸ್ ನ ವೈದ್ಯೆ ಡಾ ವರ್ಷಾ ಮತ್ತು ಸಿಬ್ಬಂದಿ, ಮಾತೃಶ್ರೀ ಆಸ್ಪತ್ರೆಯ ಸಿಬ್ಬಂದಿ ವರ್ಗ, ಕರ್ನಾಟಕ ಜಾನಪದ ಪರಿಷತ್ತು ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ, ಸಾಹಿತಿ ವಿಜಯ್ ರಾಂಪುರ ಮತ್ತು ಎಂ ಕುಮಾರ್ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑