Tel: 7676775624 | Mail: info@yellowandred.in

Language: EN KAN

    Follow us :


ರಾಮನಗರದ ಟಿಪ್ಪು ನಗರದಲ್ಲಿ ಎರಡು ಸಜೀವ ಬಾಂಬ್ ಗಳು ಪತ್ತೆ

Posted date: 27 Jun, 2019

Powered by:     Yellow and Red

ರಾಮನಗರದ ಟಿಪ್ಪು ನಗರದಲ್ಲಿ ಎರಡು ಸಜೀವ ಬಾಂಬ್ ಗಳು ಪತ್ತೆ

ತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ ಸಿಕ್ಕಿ ಬಿದ್ದ *ಬಾಂಗ್ಲಾದೇಶ* ಮೂಲದ ಶಂಕಿತ ಉಗ್ರ *ಹಬೀಬ್‌ವುಲ್ಲಾ* ನೀಡಿದ ಮಾಹಿತಿಯ ಮೇರೆಗೆ *ಎನ್ ಐ ಎ ಮತ್ತು ಐಬಿ ಅಧಿಕಾರಿಗಳು*  

ನಗರದಲ್ಲಿ ಎರಡು  ಕಚ್ಚಾ ಬಾಂಬ್‌ಗಳನ್ನು ಪತ್ತೆ ಹಚ್ಚಿದ್ದಾರೆ.


ನಗರದ ಯಾರಬ್‌ನಗರದ ಬಳಿ ಇರುವ ಸೀರಹಳ್ಳದಲ್ಲಿ ಎರಡು ಕಚ್ಚಾ ಬಾಂಬ್  ಪತ್ತೆಯಾಗಿವೆ. ಆದರೆ  

ಅವು ಜೀವಂತವೇ ಅಥವಾ ನಿಷ್ಕ್ರಿಯ ಬಾಂಬ್ ಗಳೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಲಿಲ್ಲ. ಸ್ಥಳಕ್ಕೆ ಶಂಕಿತ 

ಉಗ್ರ ಹಬೀಬುಲ್ಲಾ ನನ್ನು ಕರೆತರಲಾಗಿದ್ದು. ಸೀರಹಳ್ಳ ಮತ್ತು ಅದರ  ಸುತ್ತಮುತ್ತ  

ಬಾಂಬ್‌ಗಳು ಇನ್ನಿತರ ಕಚ್ಚಾವಸ್ತುಗಳಿಗಾಗಿ ಸುಮಾರು ೫ ಗಂಟೆಗಳಿಗೂ ಹೆಚ್ಚು ಕಾಲ ಜೊಂಡು, ಪೊದೆ, ಬೇಲಿ ಇನ್ನಿತರ

ಗಿಡಗಂಟಿಗಳ ನಡುವೆ  ಶೋಧ ನಡೆಸಿದರು.


ಒಟ್ಟು ಆರು ಕಚ್ಚಾ ಬಾಂಬ್‌ಗಳನ್ನು  ಇಲ್ಲಿ  

ಎಸೆದಿರುವಾಗಿ ಶಂಕಿತ ಉಗ್ರ ಹೇಳಿಕೆ ನೀಡಿದ್ದ ಎನ್ನಲಾಗಿದ್ದು, ಎರಡು ಕಚ್ಚಾ ಬಾಂಬ್‌ಗಳು  ಪತ್ತೆಯಾಗಿವೆ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶಂಕಿತ ಉಗ್ರ ಮುನೀರ್‌ನನ್ನು ಎನ್.ಐ.ಎ ಅಧಿಕಾರಿಗಳು 

ಪತ್ತೆ ಹಚ್ಚಿದ್ದರು. ಎನ್ ಐ ಎ ಅಧಿಕಾರಿಗಳು ಮುನೀರನನ್ನು ವಶಕ್ಕೆ ಪಡೆದುಕೊಂಡಿದ್ದು ಆಗ ಆತನೊಂದಿಗೆ ಇದ್ದ ಆತನ ಪತ್ನಿ ಮತ್ತು ಹತ್ತಿರದ ಸಂಬಂಧಿ ಹಬೀಬುಲ್ಲಾ 

ಪರಾರಿಯಾಗಿದ್ದರು.


ಪರಾರಿಯಗುವ ವೇಳೆ ಹಬೀಬುಲ್ಲಾ  ತನ್ನ ಬಳಿ ಇದ್ದ ಬಾಂಬ್‌ಗಳು 

ಮತ್ತು ಕಚ್ಚಾ ವಸ್ತುಗಳನ್ನು ಪೊದೆಯಲ್ಲಿ ಎಸೆದು ಪಕ್ಕದಲ್ಲೇ ಇರುವ ರೈಲು ನಿಲ್ದಾಣದ 

ಮೂಲಕ ಪರಾರಿಯಗಿದ್ದ.


ಮಂಗಳವಾರವಷ್ಟೇ ದೊಡ್ಡಬಳ್ಳಾಪುರದಲ್ಲಿ ಹಬೀಬುಲ್ಲಾ ಪತ್ತೆಯಾಗಿದ್ದು

ಬಾಂಬ್ ಪತ್ತೆ ವಿಚಾರ ಕಾಳ್ಗಿಚ್ಚಿನಂತೆ ಹರಡಿದ ಸುದ್ದಿಯಿಂದಾಗಿ ಜನಗಳು ಬಾಂಬ್ ಪತ್ತೆಯಾದ ಸ್ಥಳದಲ್ಲಿ 

ಜಮಾಯಿಸಿದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿ ಸಾರ್ವಜನಿಕರ ಪ್ರವೇಶಕ್ಕೆ 

ನಿರ್ಬಂಧ ಹೇರಿ, ಜನರನ್ನು ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತು.

ಸ್ಥಳಕ್ಕೆ *ಎಸ್‌ಪಿ ಚೇತನ್ ಸಿಂಗ್ ರಾಥೋಡ್* ಭೇಟಿ ನೀಡಿದ್ದರು.


*ಮುಂಜಾಗ್ರತಾ ಕ್ರಮಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಸೂಚನೆ*


ರಾಮನಗರದಲ್ಲಿ  ಸ್ಪೋಟಕಗಳು  ಪತ್ತೆಯಾದ ಹಿನ್ನೆಲೆಯಲ್ಲಿ  ಶಾಸಕಿ ಅನಿತಾ ಕುಮಾರಸ್ವಾಮಿ ದೂರವಾಣಿ ಮೂಲಕ ಎಸ್ಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ  ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಎಸ್ಪಿಯವರಿಗೆ ಸೂಚನೆ ಕೊಟ್ಟಿದ್ದಾರೆ.


ಆಶಾಂತಿ ಉಂಟಾಗಲು ಬಿಡಬೇಡಿ ಎಂದು ಸಲಹೆ ನೀಡಿದ ಅವರು ಅಶಾಂತಿ ಉಂಟು ಮಾಡುವವರ ವಿರುದ್ದ 

ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ಪ್ರತಿ ವಾರ್ಡುಗಳಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸುವಂತೆ ತಿಳಿಸಿದ್ದಾರೆ. ದುಷ್ಕರ್ಮಿಗಳಿಗೆ ನೆರವು-ಸಹಕಾರ ನೀಡುವವರ ಬಗ್ಗೆಯೂ 

ನಿಗಾವಹಿಸುವಂತೆ ಅವರು ತಿಳಿಸಿದ್ದಾರೆ.


ರಾಮನಗರದಲ್ಲಿ ದುಷ್ಠ ಶಕ್ತಿಗಳು ತಲೆ ಎತ್ತಲು ಅವಕಾಶ ಇಲ್ಲ, ಆ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ  ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑