ಉಗ್ರರ ಅಡಗುತಾಣಗಳಾಗುತ್ತಿರುವ ಜಿಲ್ಲೆಗಳು, ವಿಫಲವಾದ ಗೃಹ ಇಲಾಖೆ ಅಶ್ವಥ್ ನಾರಾಯಣಗೌಡ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಭಯೋತ್ಪಾದಕರ ಅಡಗುತಾಣಗಳಾಗಿವೆ (Sleeper Cell Terrorism) ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ವಕ್ತಾರರಾದ ಅಶ್ವಥ್ ನಾರಾಯಣಗೌಡ ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೆರೆಯ ಬಾಂಗ್ಲಾದೇಶ ದ ನಿಷೇಧಿತ ಭಯೋತ್ಪಾದಕ ಜೆಎಂಬಿ (Jamaat-ul-Mujahideen Bangladesh) ಸಂಘಟನೆಯ ಭಯೋತ್ಪಾದಕನೊಬ್ಬನನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ತವರು ಜಿಲ್ಲೆ ರಾಮನಗರದಲ್ಲಿ ೨೦೧೮ ರ ಆಗಸ್ಟ್ ೫ ರಂದು ಬಂಧಿಸಲಾಗಿತ್ತು.
ಕೇಂದ್ರದ ರಾಷ್ಟ್ರೀಯ ತನಿಖಾ ದಳ (NIA) ಮಾಹಿತಿ ಕಲೆ ಹಾಕಿ ರಾಮನಗರ ಮತ್ತು ಬೆಂಗಳೂರಿನ ಕಂಟೋನ್ಮೆಂಟ್ ಗೆ ಬಂದು ಉಗ್ರರನ್ನು ಬಂಧಿಸುವವರೆಗೂ ಸ್ಥಳೀಯ ಪೋಲಿಸರಿಗಾಗಲಿ ರಾಜ್ಯದ ಗೃಹ ಇಲಾಖೆಗಾಗಲಿ ಮಾಹಿತಿಯೇ ಇರಲಿಲ್ಲವೆಂದರೆ ಗೃಹ ಸಚಿವರು ಮತ್ತು ಗುಪ್ತಚರ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಉಗ್ರರ ಬಂಧನ ವೇಳೆ ಅಂದಿನ ಗೃಹ ಸಚಿವರಾದ ಡಾ ಜಿ ಪರಮೇಶ್ವರ ರವರನ್ನು ಕೇಳಿದಾಗ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಐಷಾರಾಮಿ ಕಾರಿನಲ್ಲಿ ಬಂದು ಉಗ್ರರನ್ನು ಬಂಧಿಸಿ ಕರೆದೊಯ್ಯುತ್ತಾರೆ, ನಮಗೆ ಮಾಹಿತಿಯನ್ನೇ ನೀಡುವುದಿಲ್ಲ ಎಂಬ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದಲ್ಲಿ ಜೆಎಂಬಿ ಸಂಘಟನೆಯು ಬಿಹಾರದ ಬುದ್ದಗಯಾ ಸ್ಪೋಟ ಪ್ರಕರಣ ಮತ್ತು ಪಶ್ಚಿಮ ಬಂಗಾಳದ ಬರ್ದಾನ್ ಪ್ರಕರಣದಲ್ಲಿ ಬೇಕಾಗಿದ್ದ ಬಯೋತ್ಪಾದಕ ಹಬೀಬುಲ್ಲಾ ರೆಹಮಾನ್ ನನ್ನು ಬಂಧಿಸಿ ರಾಮನಗರ ದ ವಾಡ್೯ ೨೩ ರಲ್ಲಿ ಹುದುಗಿಸಿಟ್ಟಿದ್ದ ಎರಡು ಸಜೀವ ಬಾಂಬ್ ಗಳನ್ನು ಎನ್ ಐ ಎ ಪತ್ತೆ ಹಚ್ಚಿರುವುದು, ಈ ಹಿಂದೆ ರಾಮನಗರ ದಲ್ಲಿ ಉಗ್ರವಾದಿಗಳನ್ನು ಬಂಧಿಸಿರುವುದನ್ನು ಗಮನಿಸಿದರೇ ಈ ಜಿಲ್ಲೆಗಳು ಉಗ್ರರರಿಗೆ ಸುರಕ್ಷಿತ ತಾಣವಾಗಿದೆ ಎಂದೆನುಸುತ್ತಿದೆ ಎಂದಿದ್ದಾರೆ.
ನೆರೆಯ ಶ್ರೀಲಂಕಾ ದೇಶದ ಚಚ್೯ನಲ್ಲಿ ಇತ್ತೀಚಿಗೆ ಬಾಂಬ್ ಸ್ಪೋಟಗೊಂಡು ನೂರಾರು ಅಮಾಯಕರು ಸತ್ತ ನಂತರ ಈ ದಾಳಿಗೆ ಬೆಂಗಳೂರಿನ ನಂಟಿದೆ ಎಂಬ ಮಾಹಿತಿ ದೊರಕಿದ್ದರೂ ಸಹ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳದಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಈ ರೀತಿಯಾದರೇ, ಗೃಹ ಸಚಿವರು ನೇರ ಹೊಣೆಯಾಗುತ್ತಾರೆ, ಪೋಲಿಸ್ ಇಲಾಖೆಯಲ್ಲಿ ರಾಜಕೀಯ ಹಸ್ತಕ್ಷೇಪ, ಪ್ರಾಮಾಣಿಕ ಪೋಲಿಸ್ ಅಧಿಕಾರಿಗಳ ವರ್ಗಾವಣೆ (೩ ತಿಂಗಳಿಗೆ-೬ ತಿಂಗಳಿಗೆ) ದಂಧೆಯಿಂದ ಇಲಾಖೆ ನಿಷ್ಕ್ರಿಯವಾಗಿದೆ, ಈ ಹಿಂದೆ ರಾಮನಗರದ ವಾಡ್೯ ೨೩ ರಲ್ಲಿ ಪೋಲಿಸ್ ಔಟ್ ಪೋಸ್ಟ್ ತೆರೆಯಬೇಕೆಂಬ ಬೇಡಿಕೆ ಇದ್ದರೂ ಜಿಲ್ಲಾಡಳಿತ ಗಮನ ಹರಿಸಿಲ್ಲ, ಇವೆಲ್ಲವೂ ರಾಜಕೀಯ ಹಸ್ತಕ್ಷೇಪದಿಂದ ಕೂಡಿದ ಕಾರಣ ಭಯೋತ್ಪಾದಕರಿಗೆ ರಾಮನಗರ ಉಗ್ರರ ಅಡಗುತಾಣವಾಗಿದೆ, ರಾಜ್ಯ ಸರ್ಕಾರವು ಉಗ್ರರ ಬಗ್ಗೆ ಮೃದು ಧೋರಣೆ ಬಿಟ್ಟು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು