ಚನ್ನಪಟ್ಟಣ ನಗರಸಭೆಗೆ ಎಸಿಬಿ ದಾಳಿ ಪೌರಾಯುಕ್ತ ಸೇರಿದಂತೆ ಮೂವರ ಬಂಧನ
ಚನ್ನಪಟ್ಟಣ: ನಗರದ ನಿವಾಸಿಯೊಬ್ಬರ ವಾಸದ ಮನೆಯ ಇ-ಖಾತಾ ಮತ್ತು ಮ್ಯುಟೇಷನ್ ಮಾಡಿಕೊಡಲು ನಗರಸಭೆಗೆ ಅರ್ಜಿ ಸಲ್ಲಿಸಿದ್ದರೂ ಸಹ ಇ-ಖಾತಾ ಮಾಡಿಕೊಡದೇ ಸತಾಯಿಸುತ್ತಿರುವುದರ ಜೊತೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರುದಾರರ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್ಪಿ ತಂಡವು ಇಂದು ಪೌರಾಯುಕ್ತ ಸಿ ಪುಟ್ಟಸ್ವಾಮಿ ಸೇರಿದಂತೆ ಮೂವರನ್ನು ದೀರ್ಘ ಸಮಯದವರಗೆ ತಪಾಸಣೆಗೊಳಪಡಿಸಿ ಬಂಧಿಸಿದರು.
ನಗರದ ಸಿದ್ದಿಕಿ ಮತ್ತಿತರರು ಎಸಿಬಿ ಗೆ ದೂರು ದಾಖಲಿಸಿದ್ದು ಪೂರ್ವಭಾವಿಯಾಗಿ ಮಾತನಾಡಿದಂತೆ ಖಾತೆ ಮಾಡಿಸಲು ಲಂಚದ ಹಣವನ್ನು ಪೌರಾಯುಕ್ತರಿಗೆ ನೀಡಲು ಕರೆ ಮಾಡಿದಾಗ ನಾನು ಮೀಟಿಂಗ್ ನಲ್ಲಿದ್ದೇನೆ, ನೀವು ನಮ್ಮ ಕಾರಿನ ಚಾಲಕನ ಬಳಿ ನೀಡಿ ಎಂದಿದ್ದಾರೆ, ಆ ಹಣವನ್ನು ಚಾಲಕ ಪಡೆಯುತ್ತಿರುವಾಗ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಳಿಗ್ಗೆ ಹನ್ನೊಂದುವರೆ ಗಂಟೆಗೆ ಅಖಾಡಕ್ಕೆ ಇಳಿದಿದ್ದ ಎಸಿಬಿ ತಂಡವು ರಾತ್ರಿ ಹತ್ತು ಗಂಟೆಯವರೆಗೆ ನಗರಸಭೆಯ ಪೌರಾಯುಕ್ತ ರ ಕಛೇರಿಯಲ್ಲೇ ಆಂತರಿಕ ತನಿಖೆ ನಡೆಸಿದ್ದು, ದಾಳಿ ಸಮಯದಲ್ಲಿ ಬಹುತೇಕ ಎಲ್ಲಾ ನೌಕರರು ದಿಕ್ಕಾಪಾಲಾಗಿದ್ದರು ಎಂದು ತಿಳಿದು ಬಂದಿದೆ, ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಸಂಬಂಧಿಸಿದ ಯಾವ ಕಛೇರಿಯಲ್ಲಿಯೂ ಸಹ ಸಿಬ್ಬಂದಿಗಳು ಇರಲಿಲ್ಲ, ಹಾಗೂ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು *ಚೆಕ್ ಬುಕ್* ಆದಿಯಾಗಿ ಬಹುತೇಕ ದಾಖಲೆಗಳು ಟೇಬಲ್ ಮೇಲೆಯೇ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿತ್ತು.
ನಗರಸಭೆ ಆವರಣದಲ್ಲಿ ಹಲವಾರು ನಗರಸಭಾ ಸದಸ್ಯರು ಸೇರಿದಂತೆ ಸಾರ್ವಜನಿಕರು ಈ ವೇಳೆ ಜಮಾಯಿಸಿದ್ದು ಪರ ವಿರೋಧ ಚರ್ಚೆಯಲ್ಲಿ ತೊಡಗಿದ್ದರು, ಕೆಲ ಸಾರ್ವಜನಿಕರು ಇದೇ ಸುಸಮಯ ಎಂದು ದಾಖಲೆ ಸಮೇತ ದೂರು ನೀಡಲು ಬಂದಿದ್ದರಾದರೂ ಅವಕಾಶ ಸಿಗದೆ ನಿರಶಾದರು.
ಸಾರ್ವಜನಿಕರು ಹೆಚ್ಚಾಗುತ್ತಿದ್ದಂತೆ ನಗರದ ಪೋಲಿಸರು ಬಂದು ಸಾರ್ವಜನಿಕರನ್ನು ಹೊರ ಕಳುಹಿಸಿ ಗೇಟ್ ಬಾಗಿಲು ಮುಚ್ಚಿಸಿದರು.
ಎಸಿಬಿ ಡಿವೈಎಸ್ಪಿ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಈ ವೇಳೆ ಹಾಜರಿದ್ದು ಕೆಲವು ನಗರಸಭೆಯ ಸಿಬ್ಬಂದಿ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಗಳನ್ನು ಸಹ ಕರೆಸಿಕೊಳ್ಳುವ ಮೂಲಕ ತನಿಖೆ ಕೈಗೊಂಡರು.
ನಗರಸಭೆಯ ಪೌರಾಯುಕ್ತ ರ ಕಛೇರಿಯಲ್ಲಿ ಆಂತರಿಕ ತನಿಖೆ ಮುಗಿಸಿದ ನಂತರ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದೊಯ್ಯಲಾಯಿತು ಎಂದು ಬಲ್ಲ ಮೂಲಗಳು ತಿಳಿಸಿವೆ.
ಚನ್ನಪಟ್ಟಣದ ಮಟ್ಟಿಗೆ ಸರ್ಕಾರಿ ಕಾರ್ಯಾಲಯಗಳಲ್ಲೊಂದಾದ ನಗರಸಭೆಗೆ ಪ್ರಪ್ರಥಮವಾಗಿ ಎಸಿಬಿ ದಾಳಿ ಸಡೆಸಿದ್ದು ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿರುವ ಅನೇಕ ಕಛೇರಿಗಳ ಮೇಲೆಯೂ ದಾಳಿ ನಡೆಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು