ಕಲಾವಿದರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ ಒಕ್ಕೂಟ ಮನವಿ
ಚನ್ನಪಟ್ಟಣ: ಭಾರತವು ಸಾಂಸ್ಕೃತಿಕ ದೇಶವಾಗಿದ್ದು, ಸಾಂಸ್ಕೃತಿಕ ಕಲೆಗಳನ್ನು ಉಳಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕರ್ನಾಟಕದ ಕಲಾವಿದರು ಪರಿಶ್ರಮ ಪಡುತ್ತಿದ್ದಾರೆ, ಸಾಂಸ್ಕೃತಿಕ ರಾಜ್ಯಕ್ಕೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಬಂದಿರುವುದು ನಮ್ಮ ಸಂಸ್ಕೃತಿಯ ಬಿಂಬವಾಗಿದೆ, ಇಂತಹ ಸಂಸ್ಕೃತಿಗಳನ್ನು ವಿಶ್ವದಲ್ಲೇ ಮೇಲ್ಮಟ್ಟಕ್ಕೆ ಕರೆದೊಯ್ಯುತ್ತಿರುವ ಕಲಾವಿದರಿಗೆ ಶಾಸಕಾಂಗ ಮತ್ತು ಕಾರ್ಯಾಂಗಗಳು ಅನ್ಯಾಯ ಎಸಗುತ್ತಿದ್ದು ಈ ಮೊದಲು ಇದ್ದ ಮಾರ್ಗಸೂಚಿ ಮೂಲಕವೇ ಇಲಾಖೆ ಕಾರ್ಯ ನಿರ್ವಹಿಸಬೇಕು ಎಂದು ತಾಲ್ಲೂಕಿನ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟದ ಪದಾಧಿಕಾರಿಗಳು ಇಂದು ತಾಲ್ಲೂಕು ಶಿರಸ್ತೇದಾರ ಮಹದೇವಯ್ಯ ರವರಿಗೆ ಮನವಿ ಸಲ್ಲಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ ಒಕ್ಕೂಟದ ಪದಾಧಿಕಾರಿಗಳು ಚರ್ಚಿಸಿ ನಂತರ ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ಘೋಷಣೆ ಗಳನ್ನು ಕೂಗಿ ಪ್ರತಿಭಟಿಸಿದರು.
ರಾಜ್ಯದಲ್ಲಿ ಸಂಸ್ಕೃತಿ ಇಲಾಖೆ ಹುಟ್ಟಿನಿಂದಲೂ ಗ್ರಾಮೀಣ ಕಲಾವಿದರ ಏಳಿಗೆಗೆ ಶ್ರಮಿಸುತ್ತಿತ್ತು, ಇಲಾಖೆ ಹುಟ್ಟಿನಿಂದ ಕಳೆದ ವರ್ಷದ ತನಕ ಬಂದ ಹಲವಾರು ಮಂತ್ರಿಗಳು, ಅಧಿಕಾರಿಗಳು ಬಂದು ಹೋಗಿದ್ದಾರೆ, ಆದರೆ ಇಂದಿನ ಕೆಲವು ಅಧಿಕಾರಿಗಳು ಮತ್ತು ಇಲಾಖೆಯ ಮಂತ್ರಿಗಳು ಕಲಾವಿದರ ಮತ್ತು ಕಲಾ ಸಂಸ್ಥೆಗಳ ಹಕ್ಕುಗಳನ್ನೇ ಕಿತ್ರುಕೊಳ್ಳಲು ಹೊರಟಿರುವುದು ದುರದೃಷ್ಟಕರ ಎಂದು ದೂರಿದರು.
*ಹಿನ್ನೆಲೆ*
ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಡಿ ಕೆ ಶಿವಕುಮಾರ್ ರವರು ಸಂಘ ಸಂಸ್ಥೆಗಳಿಗೆ ಅನುದಾನ ಸ್ಥಗಿತಗೊಳಿಸಿ ಪ್ರತಿ ತಾಲ್ಲೂಕಿನಲ್ಲಿ *ಕರ್ನಾಟಕ ಸಂಸ್ಕೃತಿ* ಹೆಸರಿನಲ್ಲಿ ಕಾರ್ಯಕ್ರಮ ಮಾಡಿ ಸ್ಥಳೀಯ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದ್ದರು. ಜೊತೆಗೆ ಈ ವಿಷಯಗಳ ಬಗ್ಗೆ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳಿಂದಲೂ ಸಲಹೆ ನೀಡಲು ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಜಾನಪದ ಕಲಾವಿದರ ಒಕ್ಕೂಟವು ಮನವಿ ಸಲ್ಲಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು