ಕೂಡ್ಲೂರು ಸೋಪಾನ ಕಾಮಗಾರಿಯಲ್ಲಿ ಎರಡೂವರೆ ಲಕ್ಷ ಗುಳುಂ ಮಾಡಿದ ಶಂಕರ್
ಚನ್ನಪಟ್ಟಣ: ಶಂಕರ್ ಎಂದರೆ ಚನ್ನಪಟ್ಟಣ ತಾಲ್ಲೂಕಿನಾದ್ಯಂತ ತುಂಡು ಗುತ್ತಿಗೆ ಕಾಮಗಾರಿಗಳೆಲ್ಲ ಕಿಸಕ್ ಎಂದು ನಗುತ್ತವೆ,* ಅವರಿಂದ ಬಿಲ್ ಬಿಡುಗಡೆ ಮಾಡಿಸಿಕೊಳ್ಳುವ *ಗುತ್ತಿಗೆದಾರರಿಗೆ ಹಬ್ಬದ ರಸದೌತಣವೇ ಸರಿ,* ಅಂದಿನ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ *ಕುಮಾರಸ್ವಾಮಿ* ಮತ್ತು ಸದ್ಯ ಅಮಾನತ್ತಿನಲ್ಲಿರುವ ಪರೀಕ್ಷಾರ್ಥ ಕಿರಿಯ ಇಂಜಿನಿಯರ್ *ಶಂಕರ್* ನ ತುಂಡು ಗುತ್ತಿಗೆ ಕಾಮಗಾರಿಗಳ ಕರ್ಮಕಾಂಡ ಬಗೆದಂತೆಲ್ಲಾ ಗಬ್ಬೆದ್ದು ನಾರುವಂತಾಗಿವೆ.
ಅಂತಹದ್ದೇ ಒಂದು ತುಂಡು ಗುತ್ತಿಗೆ ಕಾಮಗಾರಿ ಮಳೂರು ಜಿಲ್ಲಾ ಪಂಚಾಯತಿಯ ಕೂಡ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ನಡೆದಿದ್ದು ೨,೫೦,೦೦೦ ರೂಪಾಯಿಗಳು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ವಿ ಜಿ ಕೃಷ್ಣೇಗೌಡ ದಾಖಲೆ ಸಮೇತ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ಕೂಡ್ಲೂರು ಗ್ರಾಮದ ಸರ್ಕಾರಿ ಕಾಲುವೆಯ ಬಳಿ *ಸೋಪಾನ ನಿರ್ಮಾಣ ಹಾಗೂ ಕಾಲುವೆಗೆ ದಿಂಡುಕಲ್ಲು* ಕಾಮಗಾರಿ ಗೆಂದು *೨,೪೮,೩೧೬* ರೂಪಾಯಿಗಳ ಬಿಲ್ ನ್ನು *ಗುತ್ತಿಗೆದಾರ ಪುಟ್ಟಸ್ವಾಮಿ* ಹೆಸರಿನಲ್ಲಿ ಪಡೆದಿದ್ದಾರೆ.
ಕೂಡ್ಲೂರು ಗ್ರಾಮದಲ್ಲಿ ಬಹುಶಃ ಮೂರು ವರ್ಷಗಳ ಹಿಂದೆಯೇ ಅಂದರೆ ೨೦೧೫/೧೬ ರಲ್ಲೇ ಬೇರೆ ಅನುದಾನದಲ್ಲಿ ನಡೆದ ಕಲ್ಲು ಕಟ್ಟಡ ಸೋಪಾನ ಕಾಮಗಾರಿಯನ್ನು ಶ್ರೀ ಬಸವೇಶ್ವರ ದೇವಾಲಯ ನಿರ್ಮಾಣ ಮಾಡಿದಾಗಲೇ ದಿವಂಗತ *ಬುಲೆಟ್ ಕೃಷ್ಣಪ್ಪ* ನವರು ನಿರ್ಮಿಸಿರುವುದಾಗಿ ಸ್ಥಳೀಯರು ತಿಳಿಸುತ್ತಾರೆ.
ನಂ ೭-೮ ರಲ್ಲಿ WBM & PCC ರಸ್ತೆ ೩೯ ಮೀಟರ್ ಉದ್ದವಿದ್ದು, ೦೩.೭೫ ಮೀಟರ್ ಅಗಲ, ೦.೧೫ ದಪ್ಪ ಕಾಂಕ್ರೀಟ್ ರಸ್ತೆ ಕಾಮಗಾರಿಯೆಂದು ತೋರಿಸಿದ್ದಾರೆ, ಆದರೆ ಈ ಕಾಮಗಾರಿ ೨೦೧೭/೧೮ ನೇ ಸಾಲಿನಲ್ಲಿ ನಡೆದಿದೆ ಎನ್ನುವುದರ ಬಗ್ಗೆ ಯಾವುದೇ ಕುರುಹು ಇಲ್ಲ.
ತಾಲ್ಲೂಕಿಗೆ ಸಂಬಂಧಿಸಿದ ಬಹುತೇಕ ಎಲ್ಲಾ ಜಿಲ್ಲಾ ಪಂಚಾಯತಿ ಗಳಲ್ಲೂ ಈ ಮೇಲಿನ ಅಧಿಕಾರಿಗಳು ಅಕ್ರಮ ಎಸಗಿದ್ದು ಪರೀಕ್ಷಾರ್ಥ ಇಂಜಿನಿಯರ್ ಶಂಕರ್ ಮಾತ್ರ ಅಮಾನತುಗೊಂಡಿದ್ದಾರೆ, ಅಂದಿನ ಪ್ರಭಾರ ಸಹಾಯಕ ಅಭಿಯಂತರ ಕುಮಾರಸ್ವಾಮಿ ಮತ್ತು ಗುತ್ತಿಗೆದಾರರನ್ನು ಸಹ ತನಿಖೆಗೊಳಪಡಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಈ ಮೇಲ್ಕಂಡ ಕಾಮಗಾರಿ ಗೆ ಸಂಬಂಧಿಸಿದಂತೆ ಇಲಾಖೆ ವತಿಯಿಂದ ಸೀಮಿತ ಅವಧಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಸಾರ್ವಜನಿಕರ ತೆರಿಗೆ ಹಣವನ್ನು ವಸೂಲಿ ಮಾಡುವ ಮೂಲಕ ನ್ಯಾಯ ಒದಗಿಸಿಕೊಡಲೆಂದು ನಮ್ಮ ಪತ್ರಿಕೆ ಹಾಗೂ ಸಾರ್ವಜನಿಕರು ಈ ಮೂಲಕ ಒತ್ತಾಯಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು