ನಾಡಪ್ರಭು ಹೆಸರಿಗಿಂತ ಸಾಮಂತ ಅಥವಾ ಮಹಾಮಂಡಲಾಧಿಪತಿ ಹೆಸರು ಸೂಕ್ತ ರಾಜಶೇಖರ
ಕೆಂಪೇಗೌಡರನ್ನು ನಾಡಪ್ರಭು ಎನ್ನುವ ಬಿರುದುಗಿಂತ ಸಾಮಂತ ರಾಜ ಅಥವಾ ಮಹಾಂಮಡಲಾಧಿಪತಿ ಎಂಬ ಬಿರುದಿನಿಂದ ಕರೆಯುವುದು ಸೂಕ್ತ ಎಂದು ಮುಖ್ಯ ಭಾಷಣಕಾರರಾಗಿ ಆಗಮಿಸಿದ ಶಿಕ್ಷಕ ರಾಜಶೇಖರ ರವರು ಅಭಿಪ್ರಾಯ ಪಟ್ಟರು, ಅವರು ಇಂದು ಮಹದೇಶ್ವರ ನಗರದಲ್ಲಿ ಕೆಂಪೇಗೌಡ ಸಾಂಸ್ಕೃತಿಕ ಬಳಗ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ಕೆಂಪೇಗೌಡರ ಕುರಿತು ಮುಖ್ಯ ಭಾಷಣ ಮಾಡಿದರು.
ಹದಿನೈದನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ವಿಜಯದಶಮಿ ವೇಳೆ ಆಗಮಿಸಿದ ಕೆಂಪೇಗೌಡರು ವಿಜೃಂಭಣೆಯಿಂದ ಜರುಗಿದನ್ನು ಕಣ್ತುಂಬಿಕೊಂಡು ಕನಸು ಕಾಣುತ್ತಾರೆ,
ಮತ್ತೊಂದು ಬಾರಿ ನಡೆದ ವಿಜಯದಶಮಿಯಲ್ಲಿ ತಿರುಮಲರಾಯನನ್ನು ಕುಸ್ತಿಯಲ್ಲಿ ಸೋಲಿಸಿದ ಕೆಂಪೇಗೌಡರನ್ನು ಶ್ರೀ ಕೃಷ್ಣ ದೇವರಾಯರು ಸಾಮಂತ ರಾಜರನ್ನಾಗಿ ಮಾಡುತ್ತಾರೆ.
ಕೆಂಪೇಗೌಡ ರ ದೂರದೃಷ್ಟಿಗೆ ನೆರವಾಗಿ ನಿಂತ ಮಹರಾಜರು ಬೆಂಗಳೂರು ನಗರ ನಿರ್ಮಾಣ ಮಾಡಲು ಆರ್ಥಿಕ ನೆರವಿನ ಜೊತೆಗೆ ಸ್ಥಳೀಯವಾಗಿ ಬರುವ ತೆರಿಗೆಯ ಹಣವನ್ನು ಉಪಯೋಗಿಸಿ ಕೊಳ್ಳಲು ಅನುಮತಿ ನೀಡುತ್ತಾರೆ, ನಂತರ ಅರ್ಕಾವತಿ ಯಿಂದ ಕಾವೇರಿ ವರೆಗೆ ವಿಸ್ತಾರ ಮಾಡಿಕೊಂಡು ಆಳ್ವಿಕೆ ಮಾಡಿದವರು ಶೈವ ಕೆಂಪೇಗೌಡರು.
ನಗರ ನಿರ್ಮಾಣದ ಸಂದರ್ಭದಲ್ಲಿ ಗಡಿಯನ್ನು ಗುರುತಿಸುವ ಜೊತೆಗೆ ಎಲ್ಲಾ ಜನಾಂಗದ ವರಿಗೆ ಅವರ ವೃತ್ತಿಯ ಹೆಸರಿನಲ್ಲಿ ಪೇಟೆಗಳನ್ನು ನಿರ್ಮಿಸಿ ಕೊಡುತ್ತಾರೆ, ಕೆರೆ ಕಟ್ಟೆಗಳ ನಿರ್ಮಾಣ, ಸಾಲುಮರಗಳನ್ನು ನೆಡುವ, ಕೃಷಿಗೆ ಆದ್ಯತೆ ನೀಡಿ, ಬಸವನಿಂದ ಧರ್ಮರಾಯ ರವರೆಗಿನ ಹಲವಾರು ಮಂದಿರಗಳನ್ನು ನಿರ್ಮಿಸಿದ ಕೀರ್ತಿ ಕೆಂಪೇಗೌಡರದು ಎಂದರು.
ಇದೇ ವೇಳೆ ಅವರು ಜಯಂತಿ ಎಂಬುದು ಕೇವಲ ಸರ್ಕಾರಿ ಶಾಲೆಗಳ ಮತ್ತು ಇಲಾಖೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ ಎಂದು ವಿಷಾದಿಸಿದರು.
ಒಕ್ಕಲಿಗರ ಮಠದ ಪೀಠಾಧ್ಯಕ್ಷ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿಗಳು ಕೆಂಪೇಗೌಡ ಸಾಂಸ್ಕೃತಿಕ ಬಳಗಕ್ಕೆ ಕೊಡುಗೆ ನೀಡಿದ ಅನೇಕ ಗಣ್ಯರಿಗೆ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿಗಳು ಸನ್ಮಾನಿಸಿ ಆಶೀರ್ವಚನ ನೀಡಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣ ಮಾತನಾಡಿ ಕೆಂಪೇಗೌಡರು ಬೆಂಗಳೂರು ನಿರ್ಮಾಣ ಮಾಡಿದಾಗ ಕೇವಲ ಸಮುದಾಯಕ್ಕೆ ಸೀಮಿತವಾಗದೇ ಎಲ್ಲಾ ಸಮುದಾಯಕ್ಕೆ ಮೀಸಲಾಗಿದ್ದವರು, ಇತ್ತೀಚಿಗೆ ಸಹ ಕೆಂಗಲ್ ಹನುಮಂತಯ್ಯ ನವರು ವಿಧಾನಸೌಧ, ಎಸ್ ಎಂ ಕೃಷ್ಣ ರವರು ವಿಕಾಸಸೌಧ ಹಾಗೂ ಕುಮಾರಸ್ವಾಮಿ ಯವರು ಸುವರ್ಣಸೌಧ ಗಳನ್ನು ನಾಡಿನ ಎಲ್ಲಾ ಧರ್ಮ ಮತ್ತು ಸಮುದಾಯದ ಜನರಿಗೆ ನೀಡಿರುವುದು ಗಮನಾರ್ಹ ಎಂದರು.
ಮಾಜಿ ನಗರಸಭಾ ಸದಸ್ಯ ಜೆಸಿಬಿ ಲೋಕೇಶ್, ಎ ಜಿ ಸ್ವಾಮಿ (ಎಜಿಎಸ್) ತಿಮ್ಮೇಶಪ್ರಭು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರು ಸೇರಿದಂತೆ ಕೆಂಪೇಗೌಡ ಸಾಂಸ್ಕೃತಿಕ ಬಳಗ ದ ಅಧ್ಯಕ್ಷ ಮುನಿಸಿದ್ದೇಗೌಡ ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿ ಆಸೀನರಾಗಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು