ಜನಪದ ಎಂದರೆ ಹಿರಿಯಜ್ಜನ ನೆನಪು ಶಿವಲಿಂಗಯ್ಯ
ಜನಪದ ಎಂದರೆ ನಮ್ಮ ಹಿರಿಯಜ್ಹ, ಮುತ್ತಜ್ಜರು ನೆನಪಿಗೆ ಬರುತ್ತಾರೆ, ನಮ್ಮ ಬಾಲ್ಯ ನೆನಪಿಗೆ ಬರುತ್ತದೆ, ಪುರಾಣ ಮತ್ತು ಇತಿಹಾಸದ ಕಥೆಗಳನ್ನು ಸಹ ಜಾನಪದ ಶೈಲಿಯಲ್ಲಿ ಹೇಳುತ್ತಿದ್ದ ನಮ್ಮ ಅಜ್ಜ ಅಜ್ಜಿಯರ ನೆನಪು ಒಮ್ಮೆಲೆ ಮೂಡುತ್ತಿದೆ ಎಂದು ಮುಖ್ಯಮಂತ್ರಿ ಗಳ ವಿಶೇಷ ಕರ್ತವ್ಯ ಅಧಿಕಾರಿ ಶಿವಲಿಂಗಯ್ಯನವರು ನೆನಪಿಸಿಕೊಂಡರು.
ಅವರು ಕರ್ನಾಟಕ ಜಾನಪದ ಪರಿಷತ್ತು ಜಾನಪದ ಲೋಕದಲ್ಲಿ ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಲಾವಿದರು ಹೆಂಡ ಕುಡಿಯುವುದು, ಜೂಜಾಡುವುದು, ಪರ ಹೆಣ್ಣಿನ ಸಹವಾಸ ಮಾಡುವುದು, ಧೂಮಪಾನ ಮಾಡುವುದು ಮತ್ತು ಸುಳ್ಳು ಹೇಳುವಂತಹ ಕೆಲವು ದುಶ್ಚಟಗಳನ್ನು ಬಿಡಬೇಕು, ಆಗಲೇ ಆತ ಪರಿಪೂರ್ಣ ಮತ್ತು ಶ್ರೇಷ್ಠ ಕಲಾವಿದನಾಗಲು ಸಾಧ್ಯವಾಗುತ್ತದೆ, ಇಂದಿನ ಸಮಾಜದಲ್ಲಿ ಸಂಬಂಧಗಳು ಸಹ ವ್ಯವಹಾರವಾಗಿವೆ, ಸಮಾಜದ ಋಣ ತೀರಿಸಲು ಹಲವು ಜನ್ಮಗಳು ಸಾಲದು, ಅದರಲ್ಲೂ ಸ್ವಾರ್ಥಕ್ಕಾಗಿ ಸಮಾಜ ಸೇವೆ ಮಾಡಬಾರದು ಎಂದರು.
ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜು ಮಾತನಾಡಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಒಟ್ಟುಗೂಡಿಸಿ ಪುಸ್ತಕ ಹೊರ ತರುತ್ತಿರುವುದಾಗಿ ತಿಳಿಸಿದರು.
ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ ತಿಮ್ಮೇಗೌಡರು ಮಾತನಾಡಿ ಜಾನಪದ ವನ್ನೇ ಉಸಿರಾಗಿಸಿಕೊಂಡಿರುವ ಕಲಾವಿದರಿಗೆ ಸರ್ಕಾರವು ಸೌಲಭ್ಯಗಳನ್ನು ಒದಗಿಸಿದರೆ ಜಾನಪದ ಮುಂದಿನ ಪೀಳಿಗೆಗೂ ಉಳಿಯಲು ಸಾಧ್ಯವಾಗುತ್ತದೆ, ಕನ್ನಡ ಸಂಸ್ಕೃತಿ ಇಲಾಖೆ, ಕ್ರೀಡಾ ಯುವಜನ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯು ನಮ್ಮ ಜೊತೆ ಕೈ ಜೋಡಿಸುತ್ತಿರುವುದು ಸಂತಸ ತಂದಿದೆ ಎಂದರು.
ಈ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ಡೊಳ್ಳಿನ ಹಾಡು-ಕುಣಿತ ಕಲಾವಿದರಾದ ಸೋಮಣ್ಣ ದುಂಡಪ್ಪ ದನಗೊಂಡ ಮತ್ತು ತಂಡದವರು ರವರು ಡೊಳ್ಳು ಹುಟ್ಟಿದ ಬಗ್ಗೆ, ಭೀಮಾನದಿ ತೀರದ ಬಗ್ಗೆ ಡಾ ಹೆಚ್ ಎಲ್ ನಾಗೇಗೌಡರು ಮತ್ತು ಅವರ ಕಾದಂಬರಿಗಳ ಬಗ್ಗೆ ಹಾಡುಗಳನ್ನು ಕಟ್ಟಿ ಹಾಡಿ ನೆರೆದಿದ್ದ ಕಲಾ ಪ್ರೇಮಿಗಳ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಬೆಸ್ಕಾಂ ಅಧಿಕಾರಿ ದೊಡ್ಡರಾಮಯ್ಯ, ರಾಮನಗರ ಜಿಲ್ಲೆಯ ಅಧ್ಯಕ್ಷ ಸು ತ ರಾಮೇಗೌಡ, ಸಂಗೀತ ವಿದ್ವಾನ್ ಶಿವಾಜಿರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು