ತಾಲ್ಲೂಕಿನ ದಂಡಾಧಿಕಾರಿ ಯೋಗಾನಂದ ನಿರ್ಗಮನ ಸುದರ್ಶನ್ ಆಗಮನ
ಚನ್ನಪಟ್ಟಣ: ಕಳೆದ ವರ್ಷದ ಆರಂಭದಲ್ಲಿ ಕನಕಪುರ ದಿಂದ ತಾಲೂಕಿಗೆ ವರ್ಗಾವಣೆ ಗೊಂಡು ಚನ್ನಪಟ್ಟಣದ ಹೊಣೆಹೊತ್ತಿದ್ದ ತಹಶಿಲ್ದಾರ್ ಯೋಗಾನಂದ ರವರು ಇಂದು ತುಮಕೂರು ತಹಶಿಲ್ದಾರರಾಗಿ ವರ್ಗಾವಣೆ ಗೊಂಡಿದ್ದಾರೆ, ಚನ್ನಪಟ್ಟಣದ ನೂತನ ತಹಶಿಲ್ದಾರರ ರಾಗಿ ಮೂಡಬಿದಿರೆಯ ಬಿ ಕೆ ಸುದರ್ಶನ್ ರವರು ನಿಯೋಜನೆಗೊಂಡಿದ್ದು ಇನ್ನೂ ಅಧಿಕಾರ ಸ್ವೀಕರಿಸಿಲ್ಲ.
ಕನಕಪುರ ದಲ್ಲಿ ಅನೇಕ ಜನಪರ ಕೆಲಸ ಮಾಡಿ ಜನಪ್ರಿಯತೆ ಗಳಿಸಿದ ಯೋಗಾನಂದ ರವರನ್ನು ಮುಖ್ಯಮಂತ್ರಿ ಗಳ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ವರ್ಗಾವಣೆ ಮಾಡಲಾಗಿತ್ತು, ಹೊಸದರಲ್ಲಿಯೇ ಅನೇಕ ಸಮಸ್ಯೆಗಳನ್ನು ಪಟ್ಟಿಮಾಡಿಕೊಂಡು ಕಾರ್ಯಾಚರಣೆಗೆ ಇಳಿದರಾದರೂ ಅನೇಕ ಸ್ಥಳೀಯ ನಾಯಕರ ಅಡ್ಡಗಾಲಿನಿಂದ ಸಾರ್ವಜನಿಕರ ಯಾವ ಸಮಸ್ಯೆಗಳನ್ನು ಪೂರ್ಣ ಪರಿಹರಿಸಲಾಗಿರಲಿಲ್ಲ.
ರಾಜ ಕಾಲುವೆ ಒತ್ತುವರಿ, ಬೀದಿಬದಿ ವ್ಯಾಪಾರಿಗಳ ತೆರವು, ಶೆಟ್ಟಿಹಳ್ಳಿ ಕೆರೆ ಪುನಶ್ಚೇತನ ಹಾಗೂ ಸರ್ಕಾರದ ವಿವಿಧ ರೀತಿಯ ಆಸ್ತಿಗಳ ಒತ್ತುವರಿ ತೆರವು ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಾಚರಣೆ ಗೆ ಇಳಿದೆನಾದರೂ ಯಾವುದನ್ನು ಚನ್ನಪಟ್ಟಣ ತಾಲ್ಲೂಕಿನ ನಾಗರೀಕರಿಗೆ ನ್ಯಾಯ ಒದಗಿಸಲಾಗಲಿಲ್ಲ, ಪ್ರತಿಯೊಂದು ಕೆಲಸಕ್ಕೆ ಕೈ ಹಾಕಿದಾಗಲು ಹಲವು ನಾಯಕರು ತಡೆಯಾಗಿ ನಿಂತರು, ಕೆಲವು ಬಾರಿ ಕೈ ಮತ್ತು ಬಾಯಿಯನ್ನು ಕಟ್ಟಿ ಹಾಕಿದ ಅನುಭವ ಆಗಿದೆ, ಕೆಲಸ ಮಾಡಲಾಗದ ಜಾಗದಲ್ಲಿ ಇರುವುದು ತರವಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಇವೆಲ್ಲದರ ನಡುವೆಯೂ ಹಲವಾರು ನೆನೆಗುದಿಗೆ ಬಿದ್ದಿದ್ದ ಹಲವಾರು ರೈತರ ಕೆಲಸಗಳನ್ನು ಮಾಡಿ ರೈತರಿಂದ ಸನ್ಮಾನವನ್ನು ಸ್ವೀಕರಿಸಿದ್ದರು, ಗಣರಾಜ್ಯೋತ್ಸವ ಮತ್ತು ಮುಖ್ಯಮಂತ್ರಿ ಗಳ ಸಭೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.
ಒತ್ತಡದ ನಡುವೆ ಸಣ್ಣ ಹೃದಯಾಘಾತವಾಗಿ ತಿಂಗಳು ಕಾಲ ರಜೆಯಲ್ಲಿದ್ದ ಅವರು ಇದೇ ತಿಂಗಳ ಒಂದನೇ ತಾರೀಖು ಬಂದಿದ್ದರಾದರೂ ಮತ್ತೆ ರಜೆ ಪಡೆದು ಹೋಗಿದ್ದರು.
ಹೊಸದಾಗಿ ತಾಲ್ಲೂಕಿಗೆ ಆಗಮಿಸುತ್ತಿರುವ ದಂಡಾಧಿಕಾರಿ ಬಿ ಕೆ ಸುದರ್ಶನ್ ರವರಿಗೆ ತಾಲ್ಲೂಕು ಅದಕ್ಕಿಂತ ಹೆಚ್ಚಾಗಿ ಮುಖ್ಯಮಂತ್ರಿ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಬೆಟ್ಟದಷ್ಟು ಸಮಸ್ಯೆಗಳಿದ್ದು ಕೆಸರೆರಚಾಟದ ಹಲವಾರು ರಾಜಕೀಯ ನಾಯಕರ ಮಧ್ಯೆ ಕರ್ತವ್ಯ ನಿಭಾಯಿಸುತ್ತಾರೋ ಅಥವಾ ಶೀಘ್ರ ನಿರ್ಗಮಿಸುತ್ತಾರೊ ಕಾದು ನೋಡಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು