ಹಳ್ಳಿ ನಗರದಲ್ಲಿ ಹಂದಿ ನಾಯಿಗಳ ದರ್ಬಾರ್ ಕಣ್ಮುಚ್ಚಿ ಕುಳಿತ ಇಲಾಖೆಯ ಅಧಿಕಾರಿಗಳು
ಚನ್ನಪಟ್ಟಣ: ನಗರವೂ ಸೇರಿದಂತೆ ತಾಲ್ಲೂಕಿನ ಪ್ರತಿ ಹಳ್ಳಿಗಳಲ್ಲಿಯೂ ಬೀದಿ ನಾಯಿಗಳು, ಹಿಂಡಿಂಡು ಹಂದಿಗಳ ಜೊತೆಗೆ ಬಿಡಾಡಿ ಜಾನುವಾರುಗಳು ಸಂಚರಿಸುತ್ತಿದ್ದು ವಾಹನ ಸವಾರರಿಗೆ ಕಿರಿಕಿರಿ ಮತ್ತು ಆಯಾಯ ಸ್ಥಳದ ಸೌಂದರ್ಯ ಹಾಳಾಗುತ್ತಿರುವುದರ ಜೊತೆಗೆ ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗಿವೆ.
*ನಗರದ ತುಂಬೆಲ್ಲಾ ಕಸದ ರಾಶಿ*
ನಗರಸಭೆಯ ಪೌರಾಯುಕ್ತ ರು ಎಸಿಬಿ ದಾಳಿಯಿಂದ ಅಮಾನತು ಆದ ನಂತರ ದಿಕ್ಕೆಟ್ಟ ಸಿಬ್ಬಂದಿ ಸರಿಯಾದ ಸಮಯಕ್ಕೆ ಕಸ ವಿಲೇವಾರಿ ಮಾಡದ್ದರಿಂದ ನಗರವೆಲ್ಲಾ ಗಬ್ಬೆದ್ದು ನಾರುತ್ತಿವೆ, ತೋಟಗಾರಿಕೆ ಇಲಾಖೆಯ ಮುಂದೆ, ಹಳೇ ಕೋಟ್೯ ರಸ್ತೆ, ಮದೀನಾ ಚೌಕ, ಕೋಟೆ ಪ್ರದೇಶ, ಖಾಲಿ ನಿವೇಶನಗಳು ಸೇರಿದಂತೆ ಬಹುತೇಕ ನಗರದ ತುಂಬೆಲ್ಲಾ ಕಸ ಬಿದ್ದಿದ್ದು ಗಬ್ಬೆದ್ದು ನಾರುತ್ತಿದೆ.
*ಕಸದ ರಾಶಿಯಲ್ಲಿ ಹಂದಿ ನಾಯಿಗಳು*
ಗಬ್ಬೆದ್ದು ನಾರುತ್ತಿರುವ ಕಸದ ರಾಶಿಯ ವಾಸನೆಗೆ ಹಂದಿಗಳು, ನಾಯಿಗಳು ಮತ್ತು ಬೀಡಾಡಿ ಜಾನುವಾರುಗಳು ಗುಂಪು ಗುಂಪಾಗಿ ಕೆದಕಿ ಇನ್ನಷ್ಟು ಹೆಚ್ಚು ಜಾಗದಲ್ಲಿ ಕಸ ಹರಡುವುದರ ಜೊತೆಗೆ ಅವುಗಳ ಕಸವೂ ಸೇರಿ ಇಡೀ ನಗರವೇ ಗಬ್ಬು ನಾರುವಂತೆ ಮಾಡುತ್ತಿವೆ.
*ಎಲ್ಲೆಂದರಲ್ಲಿ ಕೋಳಿ ಮತ್ತು ಮಾಂಸದಂಗಡಿಗಳು*
ನಗರವೂ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿ ಜನ ನಿಬಿಡ ಪ್ರದೇಶಗಳು ಸೇರಿ ಎಲ್ಲೆಂದರಲ್ಲಿ ಮಾಂಸ ಮತ್ತು ಕೋಳಿ ಅಂಗಡಿಗಳು ತಲೆ ಎತ್ತಿದ್ದು ಎಲ್ಲಾ ಅಂಗಡಿಗಳ ಮುಂದೆ ಬೀದಿ ನಾಯಿಗಳ ಹಿಂಡು ನೆರೆದಿರುತ್ತವೆ, ಶೇಕಡಾ ಎಂಭತ್ತಕ್ಕೂ ಹೆಚ್ಚು (ದನದ ಮಾಂಸದಂಗಡಿಗಳು ಸೇರಿ) ಅಂಗಡಿಗಳಿಗೆ ಪರವಾನಗಿ ಇಲ್ಲದಿದ್ದರೂ ಸಹ ನಗರಸಭೆ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದಿರುವುದು ಅವರ ಕರ್ತವ್ಯ ವೈಫಲ್ಯತೆಯನ್ನು ತೋರಿಸುತ್ತದೆ.
*ಕೆರೆ ತಡಿ ಮತ್ತು ಏರಿಗಳೆಲ್ಲವೂ ತ್ಯಾಜ್ಯ ಮಯ*
ನಗರದ ಸುತ್ತಮುತ್ತ ಇರುವ ಕೆರೆಗಳು ಮತ್ತು ಎಲ್ಲಾ ಹಳ್ಳಿಗಳ ಕೆರೆ ತಡಿ ಮತ್ತು ಏರಿಗಳೆಲ್ಲವೂ ಮಾಂಸ ಮತ್ತು ಕೋಳಿ ತ್ಯಾಜ್ಯದಿಂದ ತುಂಬಿದ್ದು ನೀರಿನ ಜೊತೆಗೆ ವಾಸಿಸುವ ಜೀವ ಸಂಕುಲಗಳೆಲ್ಲವೂ ಸಾಯುತ್ತಿವೆಯಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಸಹ ಎಚ್ಚೆತ್ತುಕೊಳ್ಳದಿರುವುದರಿಂದ ಸಾಂಕ್ರಾಮಿಕ ರೋಗಗಳು ಉಲ್ಬಣಿಸಿವೆ.
*ಸಭೆಗೆ ಸೀಮಿತವಾದ ಕಾಳಜಿ*
ತಾಲ್ಲೂಕು ಪಂಚಾಯತಿಯಲ್ಲಿ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಅಧಿಕಾರಿಗಳ ಸಭೆ ಕರೆದು ಸಾಂಕ್ರಾಮಿಕ ರೋಗಗಳ ಬಗ್ಗೆ ಸಭೆ ನಡೆಸಿದ್ದು ಬಿಟ್ಟರೆ ಘೋಷಿಸಿದ ಯಾವುದೇ ರೀತಿಯ ಸ್ವಚತೆಯ ಬಗ್ಗೆ ಗಮನ ನೀಡದಿರುವುದು ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗಿದೆ.
*ಆಸ್ಪತ್ರೆಗಳ ಮುಂದೆ ರೋಗಿಗಳ ಸಾಲು*
ತಾಲ್ಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ ಬಂದ ರೋಗಿಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಸರ್ವೇಸಾಮಾನ್ಯವಾಗಿದ್ದು ಸಾಂಕ್ರಾಮಿಕ ರೋಗ ಹರಡುತ್ತಿರುವ ಎಲ್ಲಾ ಲಕ್ಷಣಗಳು ತಾಲ್ಲೂಕಿನಲ್ಲಿ ಗೋಚರಿಸುತ್ತವೆ.
*ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಸ್ವಚ್ಚತೆ ಕಡಿಮೆ ಇರುವುದರಿಂದ ಸೊಳ್ಳೆಗಳ ವಾಸಸ್ಥಾನ ಇಲ್ಲೇ ಹೆಚ್ಚಾಗಿದೆ, ಸೊಳ್ಳೆಗಳಿಂದ ಹರಡಬಹುದಾದ ರೋಗಗಳ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾರೋ ಅಥವಾ ಅವರದೇ ಆಸ್ಪತ್ರೆಗಳಲ್ಲಿ ಸೊಳ್ಳೆಗಳಿಂದ ಕಚ್ಚಿಸಿ ರೋಗ ಮತ್ತಷ್ಟು ಉಲ್ಬಣಗೊಳ್ಳುವಂತೆಮಾಡುತ್ತಾರೋ ಎಂಬುದನ್ನು ವೈದ್ಯರೇ ನಿರ್ಧರಿಸಬೇಕಾಗಿದೆ ?*
*ಕಾನೂನುಬದ್ಧ ಕ್ರಮ ಜರುಗಿಸಲಿ*
ಸಂಬಂಧಿಸಿದ ಅಧಿಕಾರಿಗಳು ಸ್ವಚ್ಚತೆ ಬಗ್ಗೆ ನಿಗಾವಹಿಸಿ ಹಂದಿ ಮತ್ತು ಬೀಡಾಡಿ ಜಾನುವಾರುಗಳು ಹಾಗೂ ಮಾಂಸದಂಗಡಿಗಳ ಮಾಲೀಕರಿಗೆ ತಿಳುವಳಿಕೆ ನೋಟೀಸ್ ನೀಡಿ ಸ್ವಚ್ಚತೆಗೆ ಆದ್ಯತೆ ನೀಡಿದರೆ ಮುಖ್ಯಮಂತ್ರಿ ಗಳ ಸ್ವಕ್ಷೇತ್ರದ ಮರ್ಯಾದೆ ಜೊತೆಗೆ ಜನರ ಆರೋಗ್ಯವು ಸ್ಥಿರವಾಗಿರಲು ನೆರವಾದಂತಾಗುತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು