ಲೋಕಾಯುಕ್ತ ಭೇಟಿ ವೈಯಕ್ತಿಕ ದೂರುಗಳೇ ಅಧಿಕ
ಚನ್ನಪಟ್ಟಣ: ತಾಲ್ಲೂಕು ಕಛೇರಿಗೆ ಇಂದು ಭೇಟಿ ನೀಡಿದ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಗೆ ಸಾರ್ವಜನಿಕ ಹಿತಾಸಕ್ತಿ ಉಳ್ಳ ದೂರುಗಳಿಗೆ ಬದಲಾಗಿ ವೈಯುಕ್ತಿಕ ಲಾಭದ ಹಾಗೂ ಸ್ಪಂದಿಸದ ಅಧಿಕಾರಿಗಳ ವಿರುದ್ಧದ ದೂರುಗಳು ಹೆಚ್ಚಾಗಿ ಬಂದಿದ್ದು ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಿ ನ್ಯಾಯ ಒದಗಿಸುವುದಾಗಿ ಲೋಕಾಯುಕ್ತ ಅಧಿಕಾರಿ ಅಂಜಲಿ ತಿಳಿಸಿದರು.
ಲೋಕಾಯುಕ್ತ ಅಧಿಕಾರಿಗಳು ಇಂದು ನಗರಕ್ಕೆ ಆಗಮಿಸುವ ಸುದ್ದಿಯು ಪತ್ರಿಕೆಗಳಲ್ಲಿ ಮಾತ್ರ ಬಂದಿದ್ದು ಎಲ್ಲಾ ಸಾರ್ವಜನಿಕರಿಗೆ ತಲುಪದ ಕಾರಣ ಬೆರಳಣಿಕೆಯ ದೂರುದಾರರು ಭಾಗವಹಿಸಿ ದೂರು ನೀಡಿದರು.
ದಲಿತ ಮುಖಂಡ ವೆಂಕಟಾಚಲಯ್ಯ ಕೊಲ್ಲಾಪುರದಮ್ಮ ದೇವಾಲಯದ ಆಸ್ತಿ ಸರ್ಕಾರದ ಆಸ್ತಿಯಾಗಿದ್ದು ಟ್ರಸ್ಟ್ ನವರು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ದೂರು ನೀಡಿದರೇ ವಕೀಲ ಸುರೇಶ್ ಶೆಟ್ಟಿಹಳ್ಳಿ ಕೆರೆ ಒತ್ತುವರಿಯ ಬಗ್ಗೆ ಸಾರ್ವಜನಿಕ ದೂರು ದಾಖಲಿಸಿದರು.
ಅನೇಕ ದೂರುದಾರರು ತಮ್ಮ ವೈಯುಕ್ತಿಕ ಲಾಭ, ಕುಟುಂಬದ ಆಸ್ತಿ, ಕಂದಾಯ ಇಲಾಖೆ, ಪೋಡಿ, ಹಾಗೂ ಅಧಿಕಾರಿಗಳು ಸ್ಪಂದಿಸದ ಕಾರಣಕ್ಕಾಗಿ ದೂರು ನೀಡಿದರು.
ಶೆಟ್ಟಿಹಳ್ಳಿ ಕೆರೆಗೆ ಸಂಬಂಧಿಸಿದ ದೂರನ್ನು ಕುತೂಹಲದಿಂದ ಆಲಿಸಿದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮಾಹಿತಿ ಕೇಳಲಾಗಿ ಹಲವಾರು ಕಾರಣ ನೀಡಿ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಜಾರಿಕೊಂಡರು.
ಸಭೆಯ ನಂತರ ಶೆಟ್ಟಿಹಳ್ಳಿ ಕೆರೆಯನ್ನು ವೀಕ್ಷಿಸಿದ ಅಧಿಕಾರಿಗಳು ಕೆರೆ ಒತ್ತುವರಿ ಆಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಇಷ್ಟು ಒತ್ತುವರಿಯಾಗಿದ್ದರು ಸಹ ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಮತ್ತು ಈ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ಅನುದಾನ ಬಿಡುಗಡೆ ಮಾಡಿರುವ ಇಲಾಖೆಯ ವಿರುದ್ಧ ಅಸಮಾಧನಗೊಂಡಿದ್ದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ನೀಡಿದರು.
ತಹಶಿಲ್ದಾರ್ ಜಯಣ್ಣ, ಶಿರಸ್ತೇದಾರ ಮಹದೇವಯ್ಯ, ತಾಲ್ಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು, ತೋಟಗಾರಿಕೆ, ರೇಷ್ಮೆ ಇಲಾಖೆ, ನಗರಸಭೆ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳ ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು