Tel: 7676775624 | Mail: info@yellowandred.in

Language: EN KAN

    Follow us :


ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.

Posted date: 25 Mar, 2021

Powered by:     Yellow and Red

ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.

ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋಗ ರುಜಿನಗಳು ಬರದಂತೆ ತಡೆದು ಉಲ್ಲಸಿತರಾಗಿರಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರು ಅಭಿಪ್ರಾಯ ಪಟ್ಟರು.

ಅವರು ಇಂದು ಇಲ್ಲಿನ ಜಿಲ್ಲಾ ಪೊಲೀಸ್ ಶಸಸ್ತ್ರ ಮೀಸಲು ಪಡೆ ಮೈದಾನ ದಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೨೦೨೦ರ ವಾರ್ಷಿಕ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.


ಕೋವಿಡ್ ವಿಶ್ವದಾದ್ಯಂತ ಸಾಂಕ್ರಾಮಿಕ ರೋಗವಾಗಿ ಹರಡಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಸಾಧ್ಯವಾಗಿರುವುದಿಲ್ಲ. ಪೊಲೀಸ್ ಇಲಾಖೆ ಸೇರಿ ದಂತೆ ಸರ್ಕಾರದ ಇನ್ನಿತರ ಇಲಾಖೆಗಳು ಒಗ್ಗೂಡಿ, ಕೆಲಸ ಮಾಡಿದ್ದರಿಂದಲೇ ಕೋವಿಡ್‌ನಂತಹ ಸಾಂಕ್ರಾಮಿಕ ರೋಗವನ್ನು ತಹ ಬಂದಿಗೆ ತರಲು ಸಾಧ್ಯವಾಯಿತು. ಆರೋಗ್ಯ ಇಲಾಖೆಯ ಜೊತೆ ಅತಿ ಹೆಚ್ಚು ಕೈ ಜೋಡಿಸಿದ ಇಲಾಖೆಯೆಂದರೆ ಅದು ಪೊಲೀಸ್ ಇಲಾಖೆ. ಇಂತಹವರಿಗೆ ಅವರ ಕ್ರೀಡಾ ಮನೋಭಾವವು ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದರು.


ಸರ್ಕಾರದ ಇಚ್ಛೆಯನುಸಾರ ಪೊಲೀಸರು, ಜನ ಸ್ನೇಹಿಯಾಗಿ ರೂಪುಗೊಂಡಿದ್ದಾರೆ. ಇನ್ನು ಮುಂದೆಯೂ ಸಹ ಪೊಲೀಸರು, ಜನಸ್ನೇಹಿಯಾಗಿಯೇ ಮುಂದುವರಿಯುತ್ತಾರೆ. ಅವರ ಜವಾಬ್ದಾರಿ ವಿಸ್ತಾರವಾಗಿ ಹಬ್ಬುತ್ತಿದೆ. ಇಂತಹ ಒತ್ತಡದ ಕೆಲಸ ನಿರ್ವಹಿಸುವ ಪೊಲೀಸರಿಗೆ ಇಂತಹ ಕ್ರೀಡಾ ಕೂಟಗಳು ಅತ್ಯವಶ್ಯವಾಗಿವೆ ಎಂದರು.


ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರು ಉದ್ಘಾಟಿಸಿ, ಸ್ವಾಗತಿಸಿದರು. ಕ್ರೀಡಾ ಕೂಟದಲ್ಲಿ ಮೊದಲಿಗೆ, ವೇದಿಕೆಯ ಗಣ್ಯರಿಗೆ ಪೊಲೀಸರಿಂದ ಪಥಸಂಚಲನ ನಡೆಸಿ, ಗೌರವ ರಕ್ಷೆ ನೀಡಲಾಯಿತು. ನಂತರ ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಲಾಯಿತು.

ಇದೇ ಸಮಯದಲ್ಲಿ ಕ್ರೀಡಾ ಪಟುಗಳಿಗೆ ವಚನ ಬೋಧಿಸಲಾಯಿತು. ಕ್ರೀಡಾ ಕೂಟದಲ್ಲಿ ಮಹಿಳೆಯರ ಒಂದು ತಂಡ ಸೇರಿದಂತೆ ಒಟ್ಟು ಆರು ತಂಡಗಳು ಭಾಗವಹಿಸಿದ್ದವು. ಪುರುಷ ಮತ್ತು ಮಹಿಳೆಯರಿಗೆ ೧೦೦ ಮೀಟರ್ ಓಟ, ೪೦೦ಘಿ ೧೦೦ ರಿಲೇ ಓಟ, ಹಗ್ಗಜಗ್ಗಾಟ, ತಂಡಗಳ ಪಥ ಸಂಚಲನ, ಜರುಗಿತು.


ಕಾರ್ಯಕ್ರಮದಲ್ಲಿ ಚನ್ನಪಟ್ಟಣ, ಕನಕಪುರ  ಉಪ ಪೊಲೀಸ್ ಅಧೀಕ್ಷಕ ಕೆ.ಎನ್ ರಮೇಶ್ ನಿರೂಪಣೆ ಮಾಡಿದರು. ಮಾಗಡಿ ಡಿವೈಎಸ್ಪಿ ಓಂಪ್ರಕಾಶ್, ರಾಮನಗರ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಎಲ್ಲಾ ಠಾಣೆಗಳ ವೃತ್ತ ನಿರೀಕ್ಷಕರುಗಳು, ಉಪನಿರೀಕ್ಷಕರುಗಳು ಮತ್ತು ಸಿಬ್ಬಂದಿಗಳು ಹಾಗೂ ಚನ್ನಪಟ್ಟಣ ನಗರಸಭೆಯ ಪೌರಾಯುಕ್ತ ಶಿವನಾಂಕಾರಿಗೌಡ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ
ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ

ರಾಮನಗರ: ಸುರಕ್ಷತೆ ಮತ್ತು ಸುಸ್ಥಿರತೆ ಎಲ್ಲರ ಆದ್ಯತೆಯಾಗಬೇಕು. ರಸ್ತೆ ಸುರಕ್ಷೆಯ ಬಗ್ಗೆ ಸಮಾಜವನ್ನು ಜಾಗೃತಗೊಳಿಸಲು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ

ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ
ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ

ಚನ್ನಪಟ್ಟಣ: ನಗರದ ಹೊರವಲಯದಲ್ಲಿನ ಸಾತನೂರು ಮುಖ್ಯ ರಸ್ತೆಯ ಕಲ್ಪವೃಕ್ಷ ಹೋಟೆಲ್ ಹಿಂಭಾಗವಿರುವ ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಗ್ರ

ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು

ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆ

ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್

ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.
ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.

ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋ

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ

ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು.

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು

ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರ

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

Top Stories »  


Top ↑