Tel: 7676775624 | Mail: info@yellowandred.in

Language: EN KAN

    Follow us :


ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು

Posted date: 10 Oct, 2021

Powered by:     Yellow and Red

ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು

ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆ

ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್ರೀಡಾಪಟುಗಳು ಹದಿನೈದು ಚಿನ್ನ, ಹದಿಮೂರು ಬೆಳ್ಳಿ ಮತ್ತು ಐದು ಕಂಚಿನ ಪದಕ ಸೇರಿದಂತೆ ಒಟ್ಟು ಮೂವತ್ತ ಮೂರು ಪದಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಹೆಸರನ್ನು ತಂದಿದ್ದಾರೆ.


ಕನಕಪುರ ನಗರದ ಅಡ್ಡ್ವಂಚರ್ ಅಕಾಡೆಮಿಯ ತರಬೇತುದಾರರಾದ ಮನೋಜ್ ಹಾಗೂ ಅಕ್ಷತಾ ನೇತೃತ್ವದಲ್ಲಿ ಹತ್ತು, ಹದಿನೈದು ಹಾಗೂ ಹದಿನೇಳು ವರ್ಷದ ಒಳಗಿನ ಗಂಡು ಹಾಗೂ ಹೆಣ್ಣು ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ, 


ಹದಿನೇಳು ವರ್ಷದ ಒಳಗಿನ ಬಾಲಕರ ಕ್ರೀಡಾ ವಿಭಾಗದ ಓಟದಲ್ಲಿ ವಿಶ್ವಾಸ್ 1,500 ಮೀಟರ್ ಓಟ ಹಾಗೂ ಲಾಂಗ್ ಜಂಪ್ ನಲ್ಲಿ ಎರಡನೇ ಸ್ಥಾನ, ಹದಿನಾಲ್ಕು ವರ್ಷದ ಒಳಗಿನ ಕ್ರೀಡಾ ವಿಭಾಗದ 1,500 ಹಾಗೂ 3,000 ಮೀಟರ್ ಓಟದಲ್ಲಿ ಚಿರಾಗ್ ಗೌಡ  ಮೊದಲನೇ ಸ್ಥಾನ ಗಳಿಸಿದ್ದಾರೆ.


ಹತ್ತು ವರ್ಷ ಒಳಗಿನ ಬಾಲಕಿಯರ ವಿಭಾಗದಲ್ಲಿ 3,000 ಹಾಗೂ 1,500 ಮೀಟರ್ ಓಟದಲ್ಲಿ ರಚನಾ ಮನು ಮೊದಲನೇ ಸ್ಥಾನ ಹಾಗೂ ಮೂರನೇ ಸ್ಥಾನ, 800 ಹಾಗೂ 400 ಮೀಟರ್ ಓಟದಲ್ಲಿ ಸಮೀಕ್ಷಾ ಎಸ್.ಗೌಡ ಮೊದಲನೇ ಸ್ಥಾನ, ಭಾನು 100 ಹಾಗೂ 200 ಮೀಟರ್ ಓಟದಲ್ಲಿ ಮೊದಲನೇ ಸ್ಥಾನ, ಅದಿತಿ 100 ಹಾಗೂ 200 ಮೀಟರ್ ಓಟದಲ್ಲಿ ಎರಡು ಮತ್ತು ಮೂರನೇ ಸ್ಥಾನ, ಶ್ರೇಯಾ 200 ಹಾಗೂ 400 ಮೀಟರ್ ಓಟದಲ್ಲಿ ಎರಡನೇ ಸ್ಥಾನ, ಐಶ್ವರ್ಯ 100 ಹಾಗೂ 400 ಮೀಟರ್ ಓಟದಲ್ಲಿ ಮೊದಲ ಹಾಗೂ ಎರಡನೇ ಸ್ಥಾನ, ಬಾಂಧವ್ಯ ಎಸ್. ಗೌಡ 1,500 ಮೀಟರ್ ವಿಭಾಗದಲ್ಲಿ ಮೊದಲನೇ ಸ್ಥಾನ, ಸನೌ 10 ಕಿ.ಮೀ ಹಾಗೂ 5 ಕಿ.ಮೀ ವಿಭಾಗದಲ್ಲಿ ಮೊದಲನೇ ಸ್ಥಾನ ಗಳಿಸಿದ್ದಾರೆ, 


ಬಾಲಕರ ವಿಭಾಗದ 100 ಹಾಗೂ 200 ಮೀಟರ್ ಓಟದಲ್ಲಿ ವಿನಿ, ಎಸ್.ಪಿ. ಮೊದಲನೇ ಸ್ಥಾನ, ಮನು 400 ಹಾಗೂ 200 ಮೀಟರ್ ಓಟದಲ್ಲಿ ಎರಡನೇ ಹಾಗೂ ಮೂರನೇ ಸ್ಥಾನ, ಸಮರ್ಥ್ 400 ಹಾಗೂ 200 ಮೀಟರ್ ಓಟದಲ್ಲಿ  ಮೊದಲ ಹಾಗೂ ಎರಡನೇ ಸ್ಥಾನ, ಚಿನ್ಮಯಿ 1,500 ಹಾಗೂ 800 ಮೀಟರ್ ಓಟದಲ್ಲಿ ಮೊದಲ ಸ್ಥಾನ, ಸಮೃದ್ಧ್ 10,000 ಮೀಟರ್ ಓಟದಲ್ಲಿ ಎರಡನೇ ಸ್ಥಾನ, ವಿರಾಟ್ 800 ಹಾಗೂ 3,000 ಮೀಟರ್ ಓಟದಲ್ಲಿ ಮೊದಲನೇ ಸ್ಥಾನ ಗಳಿಸಿದ್ದಾರೆ, 


 ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಮ್ಮ ಕಛೇರಿಯಲ್ಲಿ ಮಕ್ಕಳ ಸಾಧನೆಯನ್ನು ಮೆಚ್ಚಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ
ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ

ರಾಮನಗರ: ಸುರಕ್ಷತೆ ಮತ್ತು ಸುಸ್ಥಿರತೆ ಎಲ್ಲರ ಆದ್ಯತೆಯಾಗಬೇಕು. ರಸ್ತೆ ಸುರಕ್ಷೆಯ ಬಗ್ಗೆ ಸಮಾಜವನ್ನು ಜಾಗೃತಗೊಳಿಸಲು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ

ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ
ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ

ಚನ್ನಪಟ್ಟಣ: ನಗರದ ಹೊರವಲಯದಲ್ಲಿನ ಸಾತನೂರು ಮುಖ್ಯ ರಸ್ತೆಯ ಕಲ್ಪವೃಕ್ಷ ಹೋಟೆಲ್ ಹಿಂಭಾಗವಿರುವ ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಗ್ರ

ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು

ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆ

ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್

ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.
ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.

ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋ

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ

ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು.

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು

ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರ

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

Top Stories »  


Top ↑