Tel: 7676775624 | Mail: info@yellowandred.in

Language: EN KAN

    Follow us :


ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

Posted date: 17 Jun, 2022

Powered by:     Yellow and Red

ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ 

ಕಾಟಾ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಪಂದ್ಯಾವಳಿಯ ಆಯೋಜಕರಾದ ಕದಂಬ ಸೈನ್ಯ ರಾಜ್ಯ 

ಸಂಚಾಲಕ ಶಿವಕುಮಾರ್ ಹಾಗೂ ಜಿಲ್ಲಾಧ್ಯಕ್ಷ ರಾಂಪುರ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ವತಿಯಿಂದ ಚನ್ನಪಟ್ಟಣದ ಹಿರಿಯ ಪೈಲ್ವಾನರ ಸವಿನೆನಪಿಗಾಗಿ ಈ ರಾಜ್ಯ ಮಟ್ಟದ ಪುರುಷ ಹಾಗೂ ಮಹಿಳಾ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯ 

ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ನಗರದ 

ದೊಡ್ಡಪ್ಪಯ್ಯನ ಗರಡಿಮನೆಯಲ್ಲಿ ಪೂಜೆ ಸಲ್ಲಿಸಿ, ಹಿರಿಯ ಪೈಲ್ವಾನರಾದ ಕಾಡಯ್ಯರವರಿಂದ ಪಂದ್ಯಾವಳಿ ನಡೆಯುವ ಸ್ಥಳಕ್ಕೆ ಜ್ಯೋತಿ ತರಲಾಗುವುದು.


ತದನಂತರ 10.30 ರಿಂದ ಪಂದ್ಯಾವಳಿಗಳು 

ಆರಂಭಗೊಳ್ಳಲಿದ್ದು, ಈ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗದ ಕುಸ್ತಿಪಟುಗಳು ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ 

30 ಜೋಡಿಗಳ ರೋಚಕ ಕಾಟಾ ಮಟ್ಟಿ ಕುಸ್ತಿ 

ಪಂದ್ಯಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ 

ಉದ್ಘಾಟಿಸಲಿದ್ದು, ಕಾಂಗ್ರೆಸ್ ನಾಯಕ ಪ್ರಸನ್ನ ಪಿ ಗೌಡ ಪಂದ್ಯಾವಳಿಗಳಿಗೆ ಚಾಲನೆ ನೀಡಲಿದ್ದಾರೆ. ರಾಮನಗರ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ನಗರಸಭಾ ಅಧ್ಯಕ್ಷ ಪ್ರಶಾಂತ್, ಜೆಡಿಎಸ್ ಮುಖಂಡರಾದ ಹಾಪ್‍ಕಾಮ್ಸ್ ದೇವರಾಜ್, 

ಎಚ್.ಸಿ.ಜಯಮುತ್ತು, ಕುಕ್ಕೂರುದೊಡ್ಡಿ ಜಯರಾಮು ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸಂಜೆ ನಾಲ್ಕು ಗಂಟೆಗೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದ್ದು, ಈ 

ಉದ್ಘಾಟನೆಯನ್ನು ಮಾಜಿ ಸಚಿವ, ಮೇಲ್ಮನೆ ಸದಸ್ಯ ಸಿ.ಪಿ.ಯೋಗೇಶ್ವರ್ ನಡೆಸಿಕೊಡಲಿದ್ದಾರೆ. ಕಾಂಗ್ರೆಸ್ ಮುಖಂಡರಾದ ಶರತಚಂದ್ರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲವೇಗೌಡ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ವಿವಿಧ 

ಕ್ಷೇತ್ರದ ಗಣ್ಯರಿಗೆ ಕದಂಬ ಸೇವಾರತ್ನ ಪ್ರಶಸ್ತಿ ನೀಡಿ 

ಗೌರವಿಸಲಾಗುವುದು. 25 ವರ್ಷಗಳ ನಂತರ 

ನಡೆಯುತ್ತಿರುವ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ 

ಯಶಸ್ವಿಗೊಳಿಸುವಂತೆ ಕದಂಬ ಸೈನ್ಯ ರಾಜ್ಯ ಸಂಚಾಲಕ ಶಿವಕುಮಾರ್ ಹಾಗೂ ಜಿಲ್ಲಾಧ್ಯಕ್ಷ ರಾಂಪುರ ಉಮೇಶ್ ಮನವಿ ಮಾಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ
ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ

ರಾಮನಗರ: ಸುರಕ್ಷತೆ ಮತ್ತು ಸುಸ್ಥಿರತೆ ಎಲ್ಲರ ಆದ್ಯತೆಯಾಗಬೇಕು. ರಸ್ತೆ ಸುರಕ್ಷೆಯ ಬಗ್ಗೆ ಸಮಾಜವನ್ನು ಜಾಗೃತಗೊಳಿಸಲು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ

ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ
ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ

ಚನ್ನಪಟ್ಟಣ: ನಗರದ ಹೊರವಲಯದಲ್ಲಿನ ಸಾತನೂರು ಮುಖ್ಯ ರಸ್ತೆಯ ಕಲ್ಪವೃಕ್ಷ ಹೋಟೆಲ್ ಹಿಂಭಾಗವಿರುವ ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಗ್ರ

ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು

ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆ

ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್

ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.
ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.

ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋ

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ

ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು.

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು

ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರ

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

Top Stories »  


Top ↑