ಭಾರತಕ್ಕೆ 66 ಪದಕಗಳು
ದೆಹಲಿ: ಮತ್ತೊಂದು ಚಿನ್ನದ ಭರವಸೆ ಮೂಡಿಸಿದ್ದ ವಿಶ್ವದ ನಂ.1 ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್, ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ನಿರಾಶೆ ಅನುಭವಿಸಿ ಬೆಳ್ಳಿ ಪದಕಕ್ಕೆ ಕೊರಳೊಡಿದ್ದಾರೆ.
ಮೂರು ಬಾರಿ ಒಲಿಂಪಿಕ್ಸ್ ಬೆಳ್ಳಿ ಪದಕ ಜಯಿಸಿರುವ ಮಲೇಷ್ಯಾದ ಲೀ ಚಾಂಗ್ ವೆಯ್, ಫೈನಲ್ ಪಂದ್ಯದ ಆರಂಭದ ಗೇಮ್ನಲ್ಲಿ ಹಿನ್ನಡೆ ಕಂಡರೂ ಮುಂದಿನ ಎರಡು
ಗೇಮ್ಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಕಾರಣ ಶ್ರೀಕಾಂತ್ಗೆ ಸುಧಾರಿಸಿಕೊಳ್ಳಲು ಅವಕಾಶವೇ ಸಿಗಲಿಲ್ಲ.
ಆರಂಭಿಕ ಗೇಮ್ಅನ್ನು 21-19ರಲ್ಲಿ ತಮ್ಮದಾಗಿಸಿಕೊಂಡ ಶ್ರೀಕಾಂತ್, ನಂತರದ ಎರಡು ಗೇಮ್ಗಳಲ್ಲಿ 14-21, 14-21ರಲ್ಲಿ ತಮಗಿಂತ ಹತ್ತು ವರ್ಷ ಹಿರಿಯರಾದ ವೆಯ್ ಎದುರು ತಲೆಬಾಗಿದರು.
ಇದೇ ವೇಳೆ, ಪುರುಷರ ಡಬಲ್ಸ್ ಫೈನಲ್ನಲ್ಲಿ ಇಂಗ್ಲೆಂಡ್ನ ಮಾರ್ಕಸ್ ಎಲ್ಲಿಸ್/ ಕ್ರಿಸ್ ಲ್ಯಾಂಗ್ರಿಡ್ಜ್ ಜೋಡಿ ಎದುರು 21-13, 21-16ರ ಅಂತರದಲ್ಲಿ ಸೋಲು ಕಂಡ ಭಾರತದ ಸಾತ್ವಿಕ್ ರಂಕಿರೆಡ್ಡಿ/ಚಿರಾಗ್ ಶೆಟ್ಟಿ ಜೋಡಿ ಬೆಳ್ಳಿ ಪದಕ ಜಯಿಸಿದ್ದಾರೆ.
ಶ್ರೀಕಾಂತ್ ತಮ್ಮ ಮೊದಲ ಕಾಮನ್ವೆಲ್ತ್ ಪದಕ ಗಿಟ್ಟಿಸಿಕೊಂಡಿದ್ದಾರೆ.ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಶಿಸ್ತಿನಲ್ಲಿ ಈ ಮೂಲಕ ಭಾರತದ ಪದಕಗಳ ಬೇಟೆ ಏಳಕ್ಕೆ ಏರಿದೆ.
ಈ ಮೂಲಕ ಕೂಟದಲ್ಲಿ ಭಾರತ ಒಟ್ಟಾರೆ 66 ಪದಕಗಳನ್ನು ಜಯಿಸಿ, ನಾಲ್ಕು ವರ್ಷಗಳ ಹಿಂದಿನ ಗ್ಲಾಸ್ಗೋ ಕೂಟದಲ್ಲಿ ಜಯಿಸಿದ್ದಕ್ಕಿಂತ ಹೆಚ್ಚಿನ ಪದಕಗಳನ್ನು ಭಾರತ ಜಯಿಸಿದಂತಾಗಿದೆ.
ಇವುಗಳಲ್ಲಿ 26ಚಿನ್ನ, 20 ಬೆಳ್ಳಿ ಹಾಗು 20 ಕಂಚಿನ ಪದಕಗಳು ಸೇರಿವೆ.
Recent news in sports »
ಅಭಿವೃದ್ಧಿಗೆ ಸುರಕ್ಷತೆ ಮತ್ತು ಸುಸ್ಥಿರತೆ ಅಗತ್ಯ: ಜಿಲ್ಲಾಧಿಕಾರಿ
ರಾಮನಗರ: ಸುರಕ್ಷತೆ ಮತ್ತು ಸುಸ್ಥಿರತೆ ಎಲ್ಲರ ಆದ್ಯತೆಯಾಗಬೇಕು. ರಸ್ತೆ ಸುರಕ್ಷೆಯ ಬಗ್ಗೆ ಸಮಾಜವನ್ನು ಜಾಗೃತಗೊಳಿಸಲು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ
ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಪೋಲಿಸರ ದಾಳಿ, ೨೯ಮಂದಿಯ ಮೇಲೆ ಎಫ್ಐಆರ್, ೧,೧೦,೧೦೦₹ ಡಿವಿಆರ್, ರಿಜಿಸ್ಟರ್ ವಶಕ್ಕೆ
ಚನ್ನಪಟ್ಟಣ: ನಗರದ ಹೊರವಲಯದಲ್ಲಿನ ಸಾತನೂರು ಮುಖ್ಯ ರಸ್ತೆಯ ಕಲ್ಪವೃಕ್ಷ ಹೋಟೆಲ್ ಹಿಂಭಾಗವಿರುವ ಮಾರುತಿ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮೇಲೆ ಗ್ರ
ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು
ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆ
ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್
ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.
ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋ
ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು.
ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರ
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
ಟಾಸ್ ಸೋತು
ಪ್ರತಿಕ್ರಿಯೆಗಳು