ನಾಡು-ನುಡಿಗಾಗಿ ಜೀವನ ಮುಡಿಪಾಗಿಟ್ಟ ರಮೇಶಗೌಡ, ಮಾಜಿ ಶಾಸಕ
ಚನ್ನಪಟ್ಟಣ: ನಾಡಿನ ಅಸ್ಮಿತೆಗಾಗಿ ತಮ್ಮ ಜೀವನವನ್ನು ಹೋರಾಟಕ್ಕೆ ಸೀಮಿತವಾಗಿಸಿಕೊಂಡಿರುವ ರಮೇಶ್ಗೌಡರ ಹೋರಾಟ ಅರ್ಥಪೂರ್ಣವಾಗಿದ್ದು ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಶಾಸಕರಾದ ಎಂ.ಸಿ.ಅಶ್ವಥ್ ಅವರು ಅಭಿಪ್ರಾಯಿಸಿದರು.ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ನಗರದ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿರುವ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ, ಶಾಲೆಯ ವಾರ್ಷಿಕ ಕ್ರೀಡಾಕೂ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ/ ಬಿ.ಎಸ್ಸಿ (ಜನರಲ್/ಹೋಮ್ ಸೈನ್ಸ್/ಐಟಿ/ಬಿ.ಸಿ.ಎ/ಬಿ.ಬಿ.ಎ ಹಾಗೂ ಅಂತಿಮ ವರ್ಷದ ಎಂ.ಎ/ಎಂ.ಕಾಂ/ ಎಂ.ಬಿ.ಎ ಮತ್ತು ಎಂ.ಎಸ್ಸಿ ಪದವಿಗಳಿಗೆ ಪ್ರವೇಶಾತಿ ನವೀಕರಣಕ್ಕಾಗಿ ಬೋಧನಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.
ನಾಳೆಯಿಂದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಜಾತ್ರಾ/ಬ್ರಹ್ಮರಥೋತ್ಸವ: ಶಿವಾನಂದ ಮೂರ್ತಿ
ರಾಮನಗರ: ಚನ್ನಪಟ್ಟಣ ತಾಲ್ಲೂಕು ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ 2024ನೇ ಸಾಲಿನ ಜಾತ್ರಾ/ಬ್ರಹ್ಮರಥೋತ್ಸವವು ಜ. 12 ರಿಂದ ಪ್ರಾರಂಭವಾಗಿ ಜ. 22 ವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ
ತಮ್ಮ ಕಷ್ಟ ಪರಿಹರಿಸಲು ಸರ್ಕಾರವೇ ನಿಮ್ಮ ಮುಂದೆ ಬಂದಿದೆ, ಸದುಪಯೋಗ ಪಡಿಸಿಕೊಳ್ಳಿ ಸಚಿವ ರಾಮಲಿಂಗಾರೆಡ್ಡಿ
ಚನ್ನಪಟ್ಟಣ :ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಸಮಸ್ಯೆ ಇರುತ್ತದೆ, ಪ್ರತಿ ಪ್ರಜೆಯು ಅಧಿಕಾರಿಗಳನ್ನು ಅಥವಾ ಜನಪ್ರತಿನಿಧಿಗಳನ್ನು ಹುಡುಕಿಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾರಿಟಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಅಧ್ಯಕ್ಷರು, ಹಿರಿಯ ವಕೀಲರು, ಸಮಾಜ ಸೇವಕರು ಆದ ಜನಾನುರಾಗಿ ಎಂ ಕೆ ನಿಂಗಪ್ಪ ಅವರು ತಾಲ್ಲೂಕಿನ ಚಕ್ಕಲೂರು ಸರ್ಕಾರಿ ಪ್ರಾಥಮಿಕ ಶಾಲೆಗೆ ಉತ್ತಮ ಗುಣಮಟ್ಟದ ಪ್ರಿಂಟರ್ ಮತ್ತು ಸ್ಕ್ಯಾನರ್ ವಿತರಣೆ ಮಾಡಿದರು.
ಎಲಿಯೂರು ಈ ಧನಂಜಯ ರವರಿಗೆ ಹೆಚ್ ಎನ್ ಪ್ರಶಸ್ತಿ ಪ್ರದಾನ
ಚನ್ನಪಟ್ಟಣ: ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ನಡೆದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಎಲಿಯೂರು ಗ್ರಾಮದ ಈ.ಧನಂಜಯ ಎಲಿಯೂರು ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ( ರಿ.) ವತಿಯಿಂದ ನೀಡುವ ರಾಜ್ಯ ಮಟ್ಟದ ಹೆಚ್.ಎನ್. ಪ್ರಶಸ್ತಿ (ಹೆಚ್.ನರಸಿಂಹಯ್ಯ ಪ್ರಶಸ್ತಿ) ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್
ಎಲಿಯೂರು ಧನಂಜಯ ರವರಿಗೆ ಹೆಚ್ ನರಸಿಂಹಯ್ಯ ಪ್ರಶಸ್ತಿ
ಚನ್ನಪಟ್ಟಣ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ( ರಿ.) ವತಿಯಿಂದ ನೀಡುವ ರಾಜ್ಯ ಮಟ್ಟದ ಎಚ್.ನರಸಿಂಹಯ್ಯ ಪ್ರಶಸ್ತಿಗೆ ಈ.ಧನಂಜಯ ಎಲಿಯೂರು ಅವರು ಆಯ್ಕೆಯಾಗಿದ್ದಾರೆ.ಮೂಲತಃ ಚನ್ನಪಟ್ಟಣ ತಾಲೂಕು, ಎಲಿಯೂರು ಗ್ರಾಮದ ನಿವಾಸಿಯಾದ ಇವರು ಕಳೆದ 30 ವರ್ಷಗಳಿಂದ ಮೈಸೂರಿನಲ್ಲಿ ವಾಸವಿದ್ದಾರೆ. ಕನ್ನಡ ಮತ್ತು ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಬಂದ ಯುವಕನಲ್ಲಿ ಸೋಂಕು ಪತ್ತೆಯಾಗಿರುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿ ದೃಢಪಡಿಸಿದ್ದಾರೆ ೬೦ ವರ್ಷದ ಮೇಲ್ಪಟ್ಟರವರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವರು ಫರ್ಮಾನು ಹೊರಡಿ
ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!?
ಸ್ಪಂದಿಸದ ಕಮೀಷನರ್, ಕೌನ್ಸಿಲರ್, ಡಿಸಿ, ಶಾಸಕರು ಹಾಗೂ ಜೆಡಿಎಸ್ ಮುಖಂಡರು. ಏಕಾಂಗಿಯಾದ ಅಧ್ಯಕ್ಷ, ನಗರದ ಪ್ರಥಮ ಪ್ರಜೆಗೆ ಫಜೀತಿ ತಂದಿಟ್ಟ ಇ-ಖಾತೆ ಮತ್ತು ಕಸದ ಸಮಸ್ಯೆ, ನಗರಸಭೆ ಅಧ್ಯಕ್ಷ, ಸದಸ್ಯ ಸ್ಥಾನದ ಜೊತೆಗೆ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ!?ಚನ್ನಪಟ್ಟಣ:ನಗರದ ಪ್ರಥಮ ಪ್ರಜೆ ಅರ್ಥಾತ್ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ರವರು ರಾಜೀನಾಮೆ ನೀಡುತ್ತಾರೆ ಎಂಬುದು ದೃಢಪಟ್ಟಿದೆ. ಪೌರಾಯುಕ್ತರು,