ಪ್ರಾದೇಶಿಕ ಆಯುಕ್ತರಿಂದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು ವಿಭಾಗೀಯ ಪ್ರಾದೇಶಿಕ ಆಯುಕ್ತರಾದ ನವೀನ್ರಾಜ್ ಸಿಂಗ್ ರವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ, ಉಪನೋಂದಣಾಧಿಕಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಣಿಯಾಗುವಂತಹ ಕ್ರಯದ ವಹಿವಾಟುಗಳಿಗೆ ಯಾವುದೇ ತಕರಾರುಗಳು ಸ್ವೀಕೃತಗೊಂಡಲ್ಲಿ ಕೂಡಲೇ ವಿಳಂಭಕ್ಕೆ ಆಸ್ಪ
ವಸ್ತುನಿಷ್ಠ ವರದಿಗಾರರಾಗಿ ಕೆಲಸ ನಿರ್ವಹಿಸಿ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್
ಪತ್ರಿಕೋದ್ಯಮ ಎಂಬುದು ದೇಶದ ನಾಲ್ಕನೆಯ ಅಂಗ. ರಾಜಕೀಯ ಮತ್ತು ಆಡಳಿತಗಾರರು ಎಚ್ಚೆತ್ತುಕೊಳ್ಳಲು, ತಿದ್ದಿಕೊಳ್ಳಲು ಮಾಧ್ಯಮ ರಂಗವೇ ಕಾರಣ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ತಿಳಿಸಿದರು.ಅವರು ಇಂದು ರಾಮನಗರದ ಎಂಜಿ ರಸ್ತೆಯಲ್ಲಿರುವ ಕನ್ನಿಕಾ ಮಹಲ್ ನಲ್ಲಿ ರಾಮನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ರಾಮನಗರದಲ್ಲಿ ತಹಶಿಲ್ದಾರರಿಗೆ
2022 ರ ವೇಳೆಗೆ ಸತ್ತೇಗಾಲ ನೀರಾವರಿ ಯೋಜನೆ ಪೂರ್ಣ. ಹೆಚ್ ಡಿ ಕುಮಾರಸ್ವಾಮಿ
ಚನ್ನಪಟ್ಟಣ: ರಾಮನಗರ ಜಿಲ್ಲೆಯನ್ನು ಶಾಶ್ವತ ನೀರಾವರಿಯನ್ನಾಗಿಸಬೇಕು ಎಂಬ ಉದ್ದೇಶದಿಂದ ನನ್ನ ಅಧಿಕಾರವಧಿಯಲ್ಲಿ ಮಂಜೂರಾತಿ ನೀಡಿದ್ದ ಸತ್ತೇಗಾಲ ನೀರಾವರಿ ಯೋಜನೆ 2022 ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಕಣ್ವ ಜಲಾಶಯದ ಬಳಿ ಈ ಯೋಜನೆಯ ಭಾಗವಾದ ಪಂಪ್ಹೌಸ್ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಕಾವ
ಜುಲೈ 27ರಂದು ಸರ್ಕಾರಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ
ಚನ್ನಪಟ್ಟಣ ತಾಲ್ಲೂಕಿನ ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದಲ್ಲಿರುವ ಆದರ್ಶ ಶಾಲೆಗೆ 2021 -22 ನೇ ಸಾಲಿಗೆ 6 ನೇ ತರಗತಿ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ಗಂಟೆಯಿಂದ 1 ಗಂಟೆಯವರೆಗೆ ನೂತನ S.O.P ಪ್ರಕಾರ ಚನ್ನಪಟ್ಟಣದ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ .ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ವೆಬ್ಸೈಟ್.www.schooleducat
ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ಮಾರುಕಟ್ಟೆ ಯೋಜನೆಗೆ ಡಿಸೆಂಬರ್ನಲ್ಲಿ ಕಾರ್ಯಾದೇಶ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಮಾವು ಸಂಸ್ಕರಣಾ ಘಟಕ ಹಾಗೂ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಯೋಜನೆಗಳಿಗೆ ಅಕ್ಟೋಬರ್ನಲ್ಲಿ ಸಮಗ್ರ ಯೋಜನಾ ವರದಿ (DPR) ಅಂತಿಮಗೊಳಿಸಿ ಡಿಸೆಂಬರ್ನಲ್ಲಿ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಈ ಎರಡೂ ಯೋಜನೆಗಳಿಗೆ ಸಂಬಂಧಿಸಿದಂತೆ ರೇಷ್ಮೆ ಖಾತೆ
ಕೂಡ್ಲೂರು ಕೆರೆ ಕೋಡಿ ಬಳಿ ಚಿರತೆ ಪ್ರತ್ಯಕ್ಷ. ಜನರ ಆತಂಕ. ಅರಣ್ಯ ಇಲಾಖೆ ನಿರ್ಲಕ್ಷ್ಯ
ತಾಲ್ಲೂಕಿನ ಕೂಡ್ಲೂರು ಕೆರೆ ಕೋಡಿಯ ಬಳಿ ಚಿರತೆಯೊಂದು ಸುಳಿದಾಡುತಿದ್ದು, ಸುತ್ತ ಮುತ್ತ ಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಶನಿವಾರ ಮತ್ತು ಭಾನುವಾರ ರಾತ್ರಿ ವೇಳೆಯಲ್ಲಿ ಚಿರತೆ ಓಡಾಡುತ್ತಿರವುದನ್ನು, ಕೆರೆಯ ಸನಿಹದಲ್ಲಿ ಇರುವ ಹಸುಗಳ ಫಾರಂ ಮಾಲೀಕರು ನೋಡಿ ಗಾಬರಿಗೊಂಡು ಅರಣ್ಯ ಇಲಾಖೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಕೂಡ್ಲೂರು ಕೆರೆಯ ಸುತ್ತಮುತ್ತ ನಗರವು ಸೇರಿದಂತೆ ಮಸಿಗೌಡನ ದೊಡ್ಡಿ, ನೀಲಕಂಠನಹಳ್ಳಿ,
ಕಬ್ಬಾಳು ಅರಣ್ಯದಲ್ಲಿ ಹತ್ತಕ್ಕೂ ಹೆಚ್ಚು ಆನೆಗಳು
ರಾಮನಗರ: ಹಲವು ತಿಂಗಳಿಂದ ರೈತರಿಗೆ ಉಪಟಳ ನೀಡುತ್ತಿದ್ದ 7 ಕಾಡಾನೆಗಳನ್ನು ಮುತ್ತತ್ತಿಯ ಕಾವೇರಿ ವನ್ಯಜೀವಿ ಧಾಮಕ್ಕೆ ಅಟ್ಟಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ.23 ಆನೆಗಳ ಪೈಕಿ ರಾಮನಗರದ ತೆಂಗಿನಕಲ್ಲು ಹಾಗು ಚನ್ನಪಟ್ಟಣ ದ ನರಿಕಲ್ಲುಗುಡ್ಡ ಅರಣ್ಯದಿಂದ ಹತ್ತಕ್ಕೂ ಹೆಚ್ಚು ಆನೆಗಳು ಕನಕಪುರ ತಾಲೂಕಿನ ಕಬ್ಬಾಳು ಅರಣ್ಯದಲ್ಲಿ ಬೀಡು ಬಿಟ್ಟಿವೆ.ರಾಮನಗರದ ಕೈಲಾಂಚ, ಚನ್ನಪಟ್ಟಣದ ವಿರುಪಾಕ್ಷಿಪು
ಹಾರೋಹಳ್ಳಿ ಪಿಎಸ್ಐ ರವರಿಂದ ಬಡವರಿಗೆ ದಿನಸಿ ಕಿಟ್, ಹಸಿದವರಿಗೆ ಅನ್ನ. ಶ್ಲಾಘಿಸಿದ ಎಸ್ ಪಿ
ರಾಮನಗರ: ಕೊರೋನಾ ಸಂಕಷ್ಟದ ನಡುವೆ ಪೊಲೀಸರಿಗೆ ಸಾಕಷ್ಟು ಕೆಲಸಗಳಿರುತ್ತವೆ. ಲಾಕ್ ಡೌನ್ ಚೆಕ್ ಪೋಸ್ಟ್ ಡ್ಯೂಟಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಇದರ ಜತೆಗೆ ಮಹಾ ಹೆಮ್ಮಾರಿ ಕರೋನಾದ ಭಯ. ಇಷ್ಟೆಲ್ಲದರ ನಡುವೆ ಬಡವರ ಕಷ್ಟಕ್ಕೆ ಪೊಲೀಸರು ನೆರವಾಗಿದ್ದಾರೆ. ಎರಡೊತ್ತಿನ ಊಟಕ್ಕೂ ಅನುಕೂಲವಿಲ್ಲದ ಗ್ರಾಮಗಳಲ್ಲಿರುವ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ. ಇಷ್ಟೆಲ್ಲಾ ಮಾಡುತ್ತಿರುವ ಪೊಲೀಸರ ಕಾರ್ಯ ಜನರ ಪ್ರೀತಿಗೆ ಪಾತ್ರವಾಗಿದೆ.
ರಾಮನಗರ ಜಿಲ್ಲೆಗೆ 20 ಆಮ್ಲಜನಕ ಸಾಂದ್ರಕ ಸೇರಿ 3.5 ಕೋಟಿ ಮೌಲ್ಯದ ವೈದ್ಯಕೀಯ ಯಂತ್ರೋಪಕರಣ ನೀಡಿದ ಟೊಯೊಟಾ ಕಿರ್ಲೋಸ್ಕರ್.
ಬೆಂಗಳೂರು: ಈಗಾಗಲೇ ರಾಮನಗರ ಜಿಲ್ಲೆಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿರುವ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಮತ್ತಷ್ಟು ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಅವರಿಗೆ ಸೋಮವಾರ ಹಸ್ತಾಂತರ ಮಾಡಿದೆ. ಬೆಂಗಳೂರಿನಲ್ಲಿ ಡಿಸಿಎಂ ಅವರನ್ನು ಭೇಟಿಯಾದ ಕಂಪನಿಯ ಪ್ರಧಾನ ವ್ಯವಸ್ಥಾಪ
ಗ್ರಾಮೀಣ ಭಾಗದಲ್ಲಿ ನೆಲೆಸಿರುವ ವಲಸಿಗರಿಗೆ ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಅಕ್ಕೂರು ಪೋಲೀಸ್ ಠಾಣೆಯ ಸಿಬ್ಬಂದಿ
ಈಗ ಕೋವಿಡ್ ಸಮಯ. ಅದರಲ್ಲೂ ಇಂದಿನಿಂದ ಮುಂದಿನ ಜೂನ್ 7 ರ ತನಕ ಕಟ್ಟುನಿಟ್ಟಿನ ಲಾಕ್ಡೌನ್ ನ್ನು ಸರ್ಕಾರ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಬೇರೆ ರಾಜ್ಯ ಮತ್ತು ಜಿಲ್ಲೆಗಳಿಂದ ಕೂಲಿಗಾಗಿ ಬಂದವರ ಪಾಡು ಹೇಳತೀರದಾಗಿದೆ. ಇಂತಹವರ ಕಷ್ಟಕ್ಕೆ ಸರ್ಕಾರ ಇನ್ನೂ ಸರಿಯಾಗಿ ಸ್ಪಂದಿಸಿಲ್ಲ. ಇವರ ಬದುಕು ಅಲ್ಲಿಯೂ ಸಲ್ಲದೆ, ಇಲ್ಲಿಯೂ ಸಲ್ಲದೆ ಬೀದಿಗೆ ಬಿದ್ದಿದೆ.ನಗರದಲ್ಲಿನ ಭಿಕ್ಷುಕರಿಗೆ, ನಿರಾಶ್ರಿತರಿಗೆ ಮತ್ತು ವಲಸಿಗರಿಗೆ ಸಿ