ಕೇಸರಿಮಯವಾದ ಲೋಕಸಭೆ, ಗಟಾರ ಸೇರಿದ ಮಹಾಘಟಬಂಧನ್, ರಾಜ್ಯಕ್ಕೆ ಮೂರೇ ಗೆಲುವು !
ವಿರೋಧ ಪಕ್ಷದಲ್ಲಿ ಕೂರಲು ಅನರ್ಹಇಡೀ ದೇಶದಲ್ಲಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿದ್ದು ಮತ್ತೆ ನರೇಂದ್ರ ಮೋದಿಯವರು ಪ್ರಧಾನಿ ಪಟ್ಟ ಅಲಂಕರಿಸಲು ಸಜ್ಹಾಗಿದ್ದಾರೆ.ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಲೂ ಸಹ ಅನರ್ಹವಾಗಿದ್ದು ಸಂಗಡ ಪಕ್ಷಗಳನ್ನೆಲ್ಲಾ ಸೇರಿಸಿಕೊಂಡು ವಿರೋಧ ಪಕ್ಷದ ಸ್ಥಾನ ಉಳಿಸಿಕೊಳ್ಳಬೇಕಾಗಿರುವುದು ರಾಷ್ಟ್ರೀಯ ಪಕ್ಷಕ್ಕೆ
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು !?
(ಸಾಮಾನ್ಯ ಜನರ ನಾಡಿಮಿಡಿತ)ಹಲವಾರು ಸಮೀಕ್ಷೆಗಳು ಸಾಮಾನ್ಯ ಮತದಾರರನ್ನು ಸಂಪೂರ್ಣ ಗಣನೆಗೆ ತೆಗೆದುಕೊಳ್ಳದೆ ನಾಮಕಾವಸ್ಥೆಗಷ್ಟೇ ಸೀಮಿತಗೊಳಿಸಿದ್ದು ಕೇವಲ ಒಂದು, ಎರಡು, ಮೂರನೇ ದರ್ಜೆಯ ಆಯಾಯ ಪಕ್ಷದ ನಾಯಕರು ಮತ್ತು ಹಿಂಬಾಲಕರನ್ನಷ್ಟೇ ಸಂದರ್ಶಿಸಿ ಇಂತಹವರೇ ಗೆಲ್ಲುತ್ತಾರೆ ಎಂದು ಘೋಷಿಸಿದ್ದಾರೆ.ನಮ್ಮ ಪತ್ರಿಕೆಯ ವರದಿಗಾರರು ಮಂಡ್ಯ ಮತ್ತು ಬೆಂಗಳೂರು
ಒತ್ತುವರಿ, ಜಾನುವಾರು, ಕೊಳಚೆ ಮತ್ತು ಮದ್ಯವ್ಯಸನಿಗಳ ತಾಣವಾಗಿರುವ ಮಂಗಳವಾರಪೇಟೆ ಪ್ರಾಥಮಿಕ ಶಾಲೆ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಇರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಪೂರ್ವಾಪರ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂದರ್ಶಿಸಿ ನಮ್ಮ ಪತ್ರಿಕೆಯಲ್ಲಿ ಇತ್ತೀಚೆಗೆ ಸಂಪೂರ್ಣ ವರದಿಯೊಂದನ್ನು ಪ್ರಕಟಿಸಲಾಗಿತ್ತು, ಆ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಸೀತಾರಾಮು ರವರು ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟವನ್ನು ಉನ್ನತ ಮಟ್ಟ
ಭಾರತದಲ್ಲಿ ಬೌದ್ಧ ಪೂರ್ಣಿಮೆಯ ವಿಶೇಷತೆಗಳು
ಬುದ್ಧ ಪೂರ್ಣಿಮೆ ಎಂಬುದು ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದಾಗಿದೆ. ಗೌತಮ ಬುದ್ಧ ಹುಟ್ಟಿದ ದಿನವಾದ ವೈಶಾಖ ಮಾಸದ ಶುಕ್ಲ ಪಕ್ಷ ಹುಣ್ಣಿಮೆ ದಿನದಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಬುದ್ಧ ಪೂರ್ಣಿಮೆ ಬರುತ್ತದೆ. ಈ ವರ್ಷ ಮೇ ೧೮ ರ ಶನಿವಾರ ದಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ.ಗೌತಮ ಬುದ್ಧ (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್
ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಜನಪದ ಕಲೆಗಳ ಪ್ರದರ್ಶನ-ಕಲಾವಿದರಿಗೆ ಸನ್ಮಾನ
ಇಂದಿನ ದಿನಗಳಲ್ಲಿ ಮದುವೆ, ಹುಟ್ಟುಹಬ್ಬ, ವಾರ್ಷಿಕೋತ್ಸವಗಳನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವವರೇ ಹೆಚ್ಚಾಗಿರುವವರ ಮಧ್ಯೆ ಇಲ್ಲೋಬ್ಬರು ತಮ್ಮ ಮದುವೆ ವಾರ್ಷಿಕೋತ್ಸವವನ್ನು ಜನಪದ ಕಲೆಗಳ ಪ್ರದರ್ಶನ ಹಾಗೂ ಕಲಾವಿದರನ್ನು ಸನ್ಮಾನಿಸುವ ಮೂಲಕ ಆಚರಿಸಿ ಸಮಾಜಕ್ಕೆ ಮಾದರಿಯಾದರು. ರಾಮನಗರದ ಸಂಶೋಧನಾ ವಿದ್ಯಾರ್ಥಿ ಎಸ್. ರುದ್ರೇಶ್ವರ ಹಾಗೂ ಡಿ.ಆರ್. ನೀಲಾಂಬಿಕಾ ದಂಪತಿ ತಮ್ಮ ಮದುವೆ
ಮೂಲ ಆಶಯಗಳನ್ನು ಬದಿಗೊತ್ತಿ ಬಾಡಿಗೆಗೆ ಸೀಮಿತವಾದ ಶತಮಾನೋತ್ಸವ ಭವನ
ಚನ್ನಪಟ್ಟಣ: ಬೆಂಗಳೂರು ಮೈಸೂರು ನಡುವಿನ ಚನ್ನಪಟ್ಟಣದಲ್ಲಿ ಶತಮಾನದ ಹಿಂದೆಯೇ ಸರ್ಕಾರಿ ಬಾಲಕರ ಪ್ರೌಢಶಾಲೆ ಸ್ಥಾಪನೆಯಾಗಿದ್ದು, ಇಂದಿನ ಹಲವಾರು ಗಣ್ಯ ವ್ಯಕ್ತಿಗಳು ಆ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ, ಕ್ರಿ ಶ ೧೮೯೯ ರಲ್ಲಿ ಪ್ರಾರಂಭವಾದ ಈ ಶಾಲೆಯ ಶತಮಾನೋತ್ಸವದ ನೆನಪಿಗಾಗಿ ತಡವಾಗಿಯಾದರೂ ಎಚ್ಚೆತ್ತುಕೊಂಡ ಶಾಲೆಯ ಹಳೆಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಸಂಘ (ರಿ) ಕಟ್ಟಿಕೊಂಡು ಅದೇ
ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುಟ್ಟಲಕ್ಷ್ಮಮ್ಮ ಆಯ್ಕೆ
ಹಿಂದಿನ ಅಧ್ಯಕ್ಷರಾದ ದೇವರಾಜು ಮರಣಾನಂತರ ತೆರವಾಗಿದ್ದ ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಗೋವಿಂದೇಗೌಡನದೊಡ್ಡಿ ಗ್ರಾಮದ ಪಂಚಾಯತಿ ಸದಸ್ಯೆ ಶ್ರೀಮತಿ ಪುಟ್ಟಲಕ್ಷ್ಮಮ್ಮ ನವರು ಆಯ್ಕೆಯಾದರು.ಹದಿನೆಂಟು ಸದಸ್ಯರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಸುಶೀಲಮ್ಮ ಮತ್ತು ಪುಟ್ಟಲಕ್ಷ್ಮಮ್ಮ ನವರು ನಾಮಪತ್ರ ಸಲ್ಲಿಸಿದ್ದು ಸುಶೀಲಮ್ಮ ಎಂಟು ಮತಗಳನ್ನು ಪಡೆದು ಪರಾಜಿತರಾದರೆ ಹತ್ತು ಮತಗ
ಸರಣಿ ದೋಖಾ ಎಸಗಿದ ಕಿರಿಯ ಇಂಜಿನಿಯರ್ ಶಂಕರ್ ಅಮಾನತು
*ನಮ್ಮ ಪತ್ರಿಕೆಯ ಫಲಶೃತಿ*ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ತುಂಡು ಗುತ್ತಿಗೆಗಳ ಸರಣಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂಬ ದೂರಿನ ಮೇರೆಗೆ ತನಿಖೆಗೆ ಒಳಪಟ್ಟು ಅಕ್ರಮಗಳು ಸಾಬೀತು ಆಗಿದ್ದರಿಂದ ಪ್ರೊಬೆಷನರಿ ಸೇವಾ ಅವಧಿಯಲ್ಲಿ ಇರುವ ಕಿರಿಯ ಇಂಜಿನಿಯರ್ *ಜಿ ಎಸ್ ಶಂಕರ್* ರವರನ್ನು ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಎಂ ಪಿ ಮುಲ್ಲೈ ಮುಹಿಲನ್ ರವರು ಅಮಾನತು ಮಾ
ನಗರದ ಸೌಂದರ್ಯಕ್ಕೆ ಧಕ್ಕೆ ತರುವ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಸೂರಜ್
ಚನ್ನಪಟ್ಟಣ: ನಗರದ ಸೌಂದರ್ಯಕ್ಕೆ ದಕ್ಕೆ ತರುವ ಹಾಗೂ ವಾಹನ ಸಂಚಾರ, ಸಾರ್ವಜನಿಕರ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿರುವ ಪುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದೆಂದು ಯೋಜನಾ ನಿರ್ದೇಶಕ ಸೂರಜ್ ತಮ್ಮ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿದರು. ಅವರು ನಗರಕ್ಕೆ ಆಗಮಿಸಿ ಪ್ರಮುಖ ರಸ್ತೆಗಳನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಪುಟ್ಪಾತ್ ವ್ಯಾಪಾರಿಗಳ ಜೊತೆ ಮಾತನಾಡಿ, ಹಸಿರು ನ್
ವಂದಾರಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ
ಚನ್ನಪಟ್ಟಣ: ವಂದಾರಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ವಂದಾರಗುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಚುನಾವಣೆ ನಡೆದು ಒಟ್ಟು ಹನ್ನೊಂದು ಮಂದಿ ಆಯ್ಕೆಯಾದರು.ಒಟ್ಟು ಹದಿನೆಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಸಾಲಗಾರರಲ್ಲದ ಕ್ಷೇತ್ರದಲ್ಲಿ ೬೦೦ ಮತಗಳು ಮತ್ತು ಸಾಲಗಾರರ ಕ್ಷೇತ್ರದಲ್ಲಿ ೭೪೧ ಮತದಾರರ ಜೊತೆಗೆ ಪ್ರಪ್ರಥಮ ಬಾರಿಗ