ವಿದ್ಯುತ್ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ
ರಾಮನಗರ, ಸೆಪ್ಟಂಬರ್,೦೭: ರಾಮನಗರ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರ ಮತ್ತು ಹಸುಗಳಿಗೆ ರಬ್ಬರ್ ನೆಲಹಾಸು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನಾಂಕವಾಗಿದೆ.
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಆಕಾಂಕ್ಷಿತ ಅಭ್ಯರ್ಥಿ ಮಾಯಣ್ಣ ತಿಳಿಸಿದರು. ಅವರು ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಸಂದೇಶ್ ಕಂಬಾರ್ ರವರು ರಚಿಸಿರುವ ಅಪ್ಪನಭು
ಶಿಕ್ಷಕರ ದಿನಾಚರಣೆ: ಸಾಧನೆ ಮಾಡಿದ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ
ರಾಮನಗರ, ಸೆ:04; ರಾಮನಗರ ಜಿಲ್ಲಾ ಪಂಚಾಯತ್ ಹಾಗೂ ಸಾರ್ವನಿಜಕ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ರಾಮನಗರದ ಗುರುಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯ ಉಪ ನಿರ್ದೇಶರು (ಅಭಿವೃದ್ಧಿ) ಡಯಟ್ ಪ್ರಸನ್ನಕುಮಾರ ಅವರು ಉದ್ಘಾಟಿಸಿ ಮಾತನಾಡಿದರು.ರಾಜ್ಯ ಮತ್ತು ರಾಷ್ಟ್ರ&n
ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ
ಮಾವು ಸಂಸ್ಕರಣಾ ಘಟಕಕ್ಕೆ 15 ಎಕರೆ ಭೂಮಿಯನ್ನು ಸರ್ಕಾರ ನೀಡಿದೆ. ಸದ್ಯ ಐದು ಎಕರೆಯಲ್ಲಿ ಶೀಘ್ರವಾಗಿ ಕಾರ್ಯಾರಂಭ ಮಾಡುತ್ತೇವೆ. ಘಟಕದಲ್ಲಿ ಉನ್ನತ ದರ್ಜೆಯ ಉಪಕರಣಗಳನ್ನು ಜೋಡಿಸಿ, ರಫ್ತು ಮಾಡಲು ಅಣಿಗೊಳಿಸಲಾಗುತ್ತದೆ. ಈ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಅಶ್ವಥ್ ನಾರಾಯಣ ರವರು ಶೀಘ್ರವಾಗಿ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾವು ಬೆಳೆಗಾ
ನಿವೃತ್ತಿಗೊಂಡ ಅಂಚೆ ಅಧೀಕ್ಷಕ ನಾಗರಾಜರಾವ್ ಗೆ ಬೀಳ್ಕೊಡುಗೆ
ಚನ್ನಪಟ್ಟಣ ಅಂಚೆ ವಿಭಾಗದ ಅಧೀಕ್ಷಕರಾದ ಶ್ರೀ ಸಿ ಆರ್ ನಾಗರಾಜರಾವ್ ರವರು ಆಗಸ್ಟ್ ತಿಂಗಳ ಕೊನೆಯಲ್ಲಿ ವಯೋನಿವೃತ್ತಿ ಹೊಂದಿದ್ದು ಇಲಾಖೆಯ ಮನೋರಂಜನಾ ಕೂಟದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚನ್ನಪಟ್ಟಣ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕರಾದ ವೈ ಪಿ ಭೋವಿ ರವರು ವಹಿಸಿದ್ದರು. ಚನ್ನಪಟ್ಟಣದವರೇ ಆದ ಶ್ರೀ ಯುತ ನಾಗರಾಜರಾವ್ ರವರು ಚನ್ನಪಟ್ಟ
ಒಂದೇ ವೇದಿಕೆಯಲ್ಲಿ ಮೂವರು ವೈರಿ ನಾಯಕರು ಕುತೂಹಲ ಕೆರಳಸಿದ ವೇದಿಕೆ
ದಶಕದಿಂದೀಚೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಬದ್ದವೈರಿಗಳಾದ ಮೂವರು ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದರೆ, ಆಯಾಯ ಪಕ್ಷಗಳ ಮತದಾರರು ಮತ್ತು ಅಭಿಮಾನಿಗಳು ತಮ್ಮ ನಾಯಕ ಮಾತನಾಡುವಾಗ ಮತ್ತು ಬೇರೆ ನಾಯಕರು ತಮ್ಮ ನಾಯಕನ ಹೆಸರು ಹೇಳುವಾಗ ಶಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ತಮ್ಮ ಸಂತೋಷವನ್ನು ದುಪ್ಪಟ್ಟು ಮಾಡಿಕೊಂಡರು.ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಗುರುವಾ
ಬೀರೇಶ್ವರ ದೇವಾಲಯದಲ್ಲಿ ನಡೆಯುತ್ತಿದ್ದ, ಬಾಲ್ಯವಿವಾಹ ತಡೆಗಟ್ಟಿದ ಸಿಡಿಪಿಓ ತಂಡ.
ಚನ್ನಪಟ್ಟಣ: ತಾಲ್ಲೂಕಿನ ದೇವರಹಳ್ಳಿ, ಮಂಕುಂದ ಗ್ರಾಮದ ನಡುವೆ ಇರುವ ದೊಡ್ಡಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಬಾಲ್ಯವಿವಾಹ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಿದ್ದಲಿಂಗಯ್ಯ ಮತ್ತು ತಂಡ ಹಾಜರಾಗಿ ಬಾಲ್ಯವಿವಾಹವನ್ನು ತಡೆದು, ಬಾಲಕಿಯನ್ನು ರಕ್ಷಿಸಿ ತಾಲ್ಲೂಕಿನ ಲಾಳಾಘಟ್ಟ ಗ್ರಾಮದಲ್ಲಿರುವ ಬಾಲಮಂದಿರಕ್ಕೆ ಬಿಡಲಾಗಿದೆ.
ಪತ್ರಕರ್ತರು ಏಕಮುಖಿಯಾಗಿರದೆ, ಯಾರದೇ ಒತ್ತಡಕ್ಕೆ ಮಣಿಯದೆ ಕ್ರಿಯಾಶೀಲರಾಗಿರಬೇಕು. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ: ಪತ್ರಕರ್ತರು ಎಂದರೆ ಇಡೀ ಸಮಾಜದಲ್ಲಿ ಒಂದೊಳ್ಳೆಯ ಗೌರವವಿದೆ. ಆ ಗೌರವವನ್ನು ಅವರು ಆಸೆ ಆಮಿಷಕ್ಕೊಳಗಾಗಿ ಹಾಳುಮಾಡಿಕೊಳ್ಳದೆ, ಬದ್ದತೆ ಮೆರೆಯುವ ಕೆಲಸ ಮಾಡಬೇಕು. ಕ್ರಿಯಾಶೀಲರಾಗಿ ಕೆಲಸ ಮಾಡಲು ಪತ್ರಕರ್ತರ ಮನಸ್ಥಿತಿ ಹಾಗೂ ವ್ಯವಸ್ಥೆಗಳು ಚನ್ನಾಗಿರಬೇಕು. ನಾವುಗಳು ಸಹ ಅವರ ಒಳ್ಳೆಯ ಮನಸ್ಥಿತಿಯನ್ನು ಅರ್ಥೈಸಿಕೊಂಡು ಬೆನ್ನುತಟ್ಟಿ ಪ್ರೋತ್ಸಾಹಿಸಬೇಕು ಎಂದು ಮಾಜಿ ಸಚಿವರು ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ಅಭಿಪ್ರಾಯ
ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ
ಚನ್ನಪಟ್ಟಣ, ಆ. 27: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ ಶಾಸಕರು ಹಾಗೂ ಕಾಲೇಜಿಗೆ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನಲ್ಲಿ ಅಭಿವೃದ್ಧಿ ಮಾಡಲಾಗಿರುವ ಧನ್ವಂತರಿ ಉ
ದಾನದಾನಕ್ಕೂ ಜೀವದಾನ ಮುಖ್ಯ, ಜೀವದಾನಕ್ಕೆ ರಕ್ತದಾನ ಮುಖ್ಯ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ, ಆ. ೨೭: ರಕ್ತದಾನ ಮಹಾದಾನವಾಗಿದ್ದು, ಸಕಾಲಕ್ಕೆ ರಕ್ತ ಸಿಗದೆ ಭೂಮಿಯ ಮೇಲೆ ಪ್ರತಿನಿತ್ಯ ನೂರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಈ ನಿಟ್ಟಿನಲ್ಲಿ ನನ್ನ ಹುಟ್ಟುಹಬ್ಬದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಮಾಡಲು ಮುಂದಾಗಿರುವುದು ನನಗೆ ಸಂತೋಷ ಉಂಟು ಮಾಡಿದ್ದು, ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಎಲ್ಲರಿಗೂ ನಾನು ಚಿರಋಣಿಯಾಗಿರುತ್ತೇನೆ ಎಂದು ಕ್ಷೇತ್ರದ ಮಾಜಿ ಶಾಸಕರು, ಮಾಜಿ ಸಚಿವರು, ಹಾಲಿ ವಿಧಾನಪರಿಷತ್ ಸದ್ಯರಾ