ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಳೆ ಉಚಿತ ಗಣಪತಿ ವಿತರಣೆ1
ಚನ್ನಪಟ್ಟಣ: ಪ್ರತಿ ವರ್ಷದಂತೆ ಈ ವರ್ಷವೂ ಸಹ ತಾಲ್ಲೂಕಿನ ಗ್ರಾಮಗಳಿಗೆ ಗೌರಿ ಗಣೇಶ ಮೂರ್ತಿಗಳನ್ನು ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡಲಾಗುತ್ತದೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜಯಮುತ್ತು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ನಮ್ಮ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಬಹುತೇಕ ಎಲ್ಲಾ ಗ್ರಾಮಗಳಿಗೂ ಗಣೇಶ ಹಬ್ಬದ ಪ್ರಯುಕ್ತ ಉಚಿತ ಗೌರಿ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು ಈ ವರ್ಷವೂ ವಿತರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ ಅಂದರೆ ಸೆಪ್ಟೆಂಬರ್ ಒಂದನೇ ತಾರೀಖು ಭಾನುವಾರ ಮಧ್ಯಾಹ್ನ ಹನ್ನೆರಡು ಗಂಟೆಗೆ ನಗರದ ಸಾಯಿಮಂದಿರ ಕಲ್ಯಾಣ ಮಂಟಪದಲ್ಲಿ ಮೂರ್ತಿಗಳನ್ನು ವಿತರಣೆ ಮಾಡುತ್ತಿದ್ದು ನೋಂದಾಯಿತ ಮುಖ್ಯಸ್ಥರು ಬಂದು ಮೂರ್ತಿಗಳನ್ನು ಕೊಂಡೊಯ್ಯಬೇಕೇಂದು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು