ಬಂದ್ ಗೆ ಬ್ರೇಕ್ ಯಥಾಸ್ಥಿತಿಗೆ ಮರಳಿದ ವ್ಯವಸ್ಥೆ
ಚನ್ನಪಟ್ಟಣ: ಮಾಜಿ ಸಚಿವ ಡಿ ಕೆ ಶಿವಕುಮಾರ್ ರವರನ್ನು ಇ ಡಿ ಇಲಾಖೆಯ ಅಧಿಕಾರಿಗಳು ಬಂಧಿಸಿದ ನಂತರ ರಾಜ್ಯಾದ್ಯಂತ ಡಿಕೆಶಿ ಬೆಂಬಲಿಗರು ಭುಗಿಲೆದ್ದು ಎರಡು ದಿನ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಚನ್ನಪಟ್ಟಣ ದಲ್ಲಿ ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಗರದಾದ್ಯಂತ ಮೆರವಣಿಗೆ, ಅಂಗಡಿ ಮುಂಗಟ್ಟು ಬಂದ್ ಹಾಗೂ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.
ಇಂದು ನಗರದ ಗಾಂಧಿ ಭವನದ ಬಳಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ತಿಳಿಸಿದ ಮುಖಂಡರು ಒಕ್ಕಲಿಗರ ಸಂಘದ ಕಛೇರಿಯಲ್ಲಿ ಸಭೆ ಹಮ್ಮಿಕೊಂಡಿರುವುದರಿಂದ ಮುಂದೂಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಇಂದಿನಿಂದ ಯಾರಾದರೂ ಪ್ರತಿಭಟನೆ ನಡೆಸಿದರೆ, ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಅರ್ಚನಾ ರವರು ತಿಳಿಸಿದ್ದು ಪ್ರತಿಭಟನೆಗೆ ಮುಂದಾಗುವ ಮಂದಿ ಹಿಂದೆ ಸರಿಯುವಂತೆ ಮಾಡಿದೆ.
ರಾಜ್ಯ ಹೆದ್ದಾರಿ ಯಲ್ಲಿ ಬಹುತೇಕ ಎಲ್ಲಾ ರೀತಿಯ ವಾಹನಗಳ ಸಂಚಾರ ಸುಗಮವಾಗಿದ್ದು ನಗರದಾದ್ಯಂತ ಎಲ್ಲಾ ಅಂಗಡಿಗಳು ತೆರೆದಿದ್ದು ವಹಿವಾಟಿನಲ್ಲಿ ತೊಡಗಿವೆಯಾದರೂ ಬಿಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು