Tel: 7676775624 | Mail: info@yellowandred.in

Language: EN KAN

    Follow us :


ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ವಿಜಯಶಾಲಿಗಳಾಗಿ ಬನ್ನಿ ಹರೂರು ರಾಜಣ್ಣ

Posted date: 14 Sep, 2019

Powered by:     Yellow and Red

ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ವಿಜಯಶಾಲಿಗಳಾಗಿ ಬನ್ನಿ ಹರೂರು ರಾಜಣ್ಣ

ಚನ್ನಪಟ್ಟಣ: ವಿಶ್ವ ವಿಖ್ಯಾತ ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ತಾಲ್ಲೂಕಿನ ಕ್ರೀಡಾ ಪಟುಗಳು ವಿಜಯಶಾಲಿಗಳಾಗಿ ತಾಲ್ಲೂಕಿನ ಹೆಸರನ್ನು ಅಜರಾಮರಗೊಳಿಸಿ ಎಂದು ಕ್ರೀಡಾ ಪಟುಗಳಿಗೆ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಕರೆ ನೀಡಿದರು.

ಅವರು ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ, ಕ್ರೀಡಾ ಇಲಾಖೆ ಮತ್ತು ಶಿಕ್ಷಣಾಧಿಕಾರಿಗಳ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ೨೦೧೯/೨೦ ನೇ ಸಾಲಿನ ಪುರುಷ ಮತ್ತು ಮಹಿಳೆಯರ ತಾಲ್ಲೂಕು ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆಷ್ಟೇ ಸೀಮಿತವಾಗದೆ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ದೇಹಾರೋಗ್ಯ ಹಾಗೂ ಮನಸ್ಸನ್ನು ಸದೃಢಗೊಳಿಸಿಕೊಳ್ಳಲು ಸಹಕಾರಿಯಾಗಲಿದೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕರು ತರಬೇತಿಗೊಳಿಸಬೇಕೆಂದರು.


ದೈಹಿಕ ಶಿಕ್ಷಣ ಅಧೀಕ್ಷಕ ನರಸಿಂಹಯ್ಯ ಮಾತನಾಡಿ ಮುಂದಿನ ದಿನಗಳಲ್ಲಿ ಹೆಚ್ಚು ಕ್ರೀಡಾ ಕೂಟಗಳನ್ನು ಹಮ್ಮಿಕೊಂಡು ಕ್ರೀಡಾ ಪಟುಗಳನ್ನು ಉತ್ತೇಜಿಸುವ ಕೆಲಸ ಮಾಡುತ್ತೇವೆ, ಶಿಕ್ಷಕರು ಮತ್ತು ಪೋಷಕರು ಕೈಜೋಡಿಸಿ ತಾಲ್ಲೂಕಿನ ಕ್ರೀಡಾ ಪಟುಗಳನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ಕೆಲಸ ಮಾಡಬೇಕು ಎಂದರು.


ಕಾರ್ಯಕ್ರಮದಲ್ಲಿ ತಾಲ್ಲೂಕಿನ ದೈಹಿಕ ಶಿಕ್ಷಕರು ಮತ್ತು ಕ್ರೀಡಾಪಟುಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑