Tel: 7676775624 | Mail: info@yellowandred.in

Language: EN KAN

    Follow us :


ಶೆಟ್ಟಿಹಳ್ಳಿ ಕೆರೆ ಒತ್ತುವರಿ ತಿಂಗಳೊಳಗೆ ಸರ್ವೇ ಮಾಡಿ ವರದಿ ನೀಡಿ ಲೋಕಾಯುಕ್ತ

Posted date: 16 Sep, 2019

Powered by:     Yellow and Red

ಶೆಟ್ಟಿಹಳ್ಳಿ ಕೆರೆ ಒತ್ತುವರಿ ತಿಂಗಳೊಳಗೆ ಸರ್ವೇ ಮಾಡಿ ವರದಿ ನೀಡಿ ಲೋಕಾಯುಕ್ತ

*ಚನ್ನಪಟ್ಟಣ: ನಗರದ ಮಧ್ಯ ಭಾಗದಲ್ಲಿ ಇರುವ ಪುರಾತನ ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸಲು ಶೀಘ್ರವಾಗಿ ಸರ್ವೇ ಮಾಡುವಂತೆ ಭೂ ಸ್ವಾಧೀನ ಅಧಿಕಾರಿಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ಸೂಚಿಸಿದರು.

ನಗರ ಮತ್ತು ತಾಲ್ಲೂಕಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೆರೆಯ ಕೋಡಿ ಭಾಗಕ್ಕೆ ಕರೆಸಿಕೊಂಡ ಡಿವೈಎಸ್ಪಿ ಯವರು ಈ ಕೆರೆ ಯು ಯಾವ ಇಲಾಖೆಗೆ ಬರುತ್ತದೆ ಎಂದು ಪ್ರಶ್ನಿಸಿದರು, ಎಂದಿನಂತೆ ತಾಲ್ಲೂಕು ಪಂಚಾಯತಿ, ತಾಲ್ಲೂಕು ಕಛೇರಿ ಮತ್ತು ನಗರಸಭೆ ಅಧಿಕಾರಿಗಳು ನಮಗೆ ಬರುವುದಿಲ್ಲ ಎಂದು ಹೇಳಿದರು.


ಜಿಲ್ಲಾ ಪಂಚಾಯತಿ ಎಇಇ ಚನ್ನಪ್ಪ ನವರನ್ನು ಸ್ಥಳಕ್ಕೆ ಕರೆಸಿಕೊಂಡ ಅಧಿಕಾರಿಗಳು ಅವರನ್ನು ಪ್ರಶ್ನಿಸಿದಾಗ ತಮ್ಮ ಇಲಾಖೆಗೆ ಬರುತ್ತದೆ ಎಂದು ಒಪ್ಪಿಕೊಂಡರು.

ಸ್ಥಳದಲ್ಲೇ ಇದ್ದ ಭೂ ಸ್ವಾಧೀನ ಅಧಿಕಾರಿಗಳಿಗೆ ಅಕ್ಟೋಬರ್ ತಿಂಗಳ ಹದಿನೈದನೇ ತಾರೀಖಿನೊಳಗೆ ಸರ್ವೇ ಮಾಡಿ ವರದಿ ನೀಡಬೇಕೆಂದು ಸೂಚಿಸಿದರು.


ಇಂದಿರಾ ಕಾಟೇಜ್ ಕಡೆಯಿಂದ ಒತ್ತುವರಿ ಆಗಿದ್ದು ಒತ್ತುವರಿ ಜಾಗದಲ್ಲಿ ಮನೆ ನಿರ್ಮಿಸಲು ನ್ಯಾಷನಲ್ ಪ್ರಾಜೆಕ್ಟ್ ಕನ್ಸ್ಟ್ರಕ್ಸನ್ ಕಾರ್ಪೋರೇಷನ್ ಸಂಸ್ಥೆ ನೆರವು ನೀಡಲಾಗಿದೆ ಎಂಬ ಮಾಹಿತಿ ಪಡೆದ ಅಧಿಕಾರಿಗಳು ಹಿರಿಯ ವ್ಯವಸ್ಥಾಪಕ ವೆಂಕಟರಾಮಯ್ಯ ರವರನ್ನು ಕರೆಸಿಕೊಂಡು ತಾಲ್ಲೂಕು ಕಛೇರಿಯಲ್ಲಿ ಸುಧೀರ್ಘವಾಗಿ ಚರ್ಚೆ ನಡೆಸಿದರು.


ಮುಂದಿನ ತಿಂಗಳು ಹದಿನೈದನೇ ತಾರೀಖಿನಂದು ಭೇಟಿ ನೀಡಲಿದ್ದು ಅಷ್ಟರೊಳಗೆ ಕೆರೆ ಮತ್ತು ಒತ್ತುವರಿ ದಾರರ ಎಲ್ಲಾ ದಾಖಲೆಗಳ ಸಮೇತ ಅಧಿಕಾರಿಗಳು ಹಾಜರಿರಬೇಕೆಂದು ಸೂಚನೆ ನೀಡಿದರು.

ದೂರುದಾರರಾದ ವಕೀಲ ಸುರೇಶ್ ಮತ್ತು ಗಜೇಂದ್ರ ಸಿಂಗ್ ಸ್ಥಳದಲ್ಲಿ ಉಪಸ್ಥಿತರಿದ್ದು ಮಾಹಿತಿ ಒದಗಿಸಿದರು.


ಸ್ಥಳದಲ್ಲಿ ತಹಶಿಲ್ದಾರ್ ಸುದರ್ಶನ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ, ಜಿಲ್ಲಾ ಪಂಚಾಯತಿ ಎಇಇ ಚನ್ನಪ್ಪ, ನಗರಸಭೆಯ ಎಂಟು ಅಧಿಕಾರಿಗಳ ತಂಡ, ಭೂಸ್ವಾಧೀನ ಅಧಿಕಾರಿಗಳ ತಂಡ ಮತ್ತು ನಗರಸಭೆ ಮಾಜಿ ಸದಸ್ಯ ಜೆಸಿಬಿ ಲೋಕೇಶ್ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑