ಅರ್ಜಿ ಆಹ್ವಾನ
ರಾಮನಗರ :- ರಾಜ್ಯ ಜಾನಪದ ಅಕಾಡೆಮಿ ವತಿಯಿಂದ 2016-17ನೇ ಸಾಲಿನಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರದಲ್ಲಿ ತರಬೇತಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ಈ ತರಬೇತಿ ಕೊಡಿಸುವ ಶಿಬಿರಕ್ಕೆ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಅಕಾಡೆಮಿಯ ವೆಬ್ಸೈಟ್ www.karnatakajanapada.in ನಲ್ಲಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಜಾನಪದ ಅಕಾಡೆಮಿಯ ದೂ.ಸಂಖ್ಯೆ: 22215509ಗೆ ಸಂಪರ್ಕಿಸಬಹುದು.
ಅರ್ಜಿಯನ್ನು ಇದೇ 2018ರ ಮಾರ್ಚ್ 5ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಕ್ರಿಯೆಗಳು