ಬಿಜೆಪಿ ಗೆಲುವು ಸಂಭ್ರಮಾಚರಣೆ
ಚನ್ನಪಟ್ಟಣ: ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಿ, ಸರ್ಕಾರ ಉರುಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾಗಿ ಅನರ್ಹ ರ ಚುನಾವಣೆ ಎಂದೇ ಬಿಂಬಿತವಾಗಿದ್ದ ಹದಿನೇಳು ಕ್ಷೇತ್ರದ ಪೈಕಿ ಹದಿನೈದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಹನ್ನೆರಡು ಸ್ಥಾನ ಗಿಟ್ಟಿಸಿಕೊಂಡ ಬಿಜೆಪಿ ಪಕ್ಷದ ಪರವಾಗಿ ತಾಲ್ಲೂಕು ಘಟಕದ ವತಿಯಿಂದ ಇಂದು ನಗರದ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಿದರು.
ನೂರಾರು ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಒಂದೆಡೆ ಸೇರಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಪಕ್ಷ ಮತ್ತು ನಾಯಕರ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
ಸಂಭ್ರಮಾಚರಣೆಯಲ್ಲಿ ಬಿಜೆಪಿ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ತಾಲ್ಲೂಕು ಪಂಚಾಯತಿ ಸದಸ್ಯ ಪ್ರಭು, ದಯಾನಂದ, ತಿಮ್ಮೇಶಪ್ರಭು, ಶಿವಲಿಂಗಯ್ಯ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು