ಕೆಂಪಿಕಟ್ಟೆ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳವು ಆರೋಪಿ ಸೆರೆ
ಚನ್ನಪಟ್ಟಣ: ಚನ್ನಪಟ್ಟಣ ಪ್ರಾದೇಶಿಕ ಅರಣ್ಯ ವಲಯದ ಚಿಕ್ಕಮಣ್ಣುಗುಡ್ಡೆ ಮೀಸಲು ಅರಣ್ಯದ ಕೆಂಪಿಕಟ್ಟೆ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧದ ಮರಗಳನ್ನು ಕತ್ತರಿಸುತ್ತಿದ್ದ ಶಿವರಾಜು ಬಿನ್ ಲೇಟ್ ಸಾಕಯ್ಯ (೨೦) ಎಂಬ ಆರೋಪಿಯನ್ನು ಉಪ ವಲಯ ಅರಣ್ಯಾಧಿಕಾರಿ ಮನ್ಸೂರ್ ಮಹಮ್ಮದ್ ರವರ ನೇತೃತ್ವದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಯು ರಾಮದೇವರ ಬೆಟ್ಟದ ಇರುಳಿಗರ ಕಾಲೋನಿ ಯವನಾಗಿದ್ದು ಒಂದೂವರೆ ಕಿಲೋ ತೂಗುವ ಶ್ರೀಗಂಧದ ಮೂರು ತುಂಡುಗಳು, ಮೂರು ದೊಡ್ಡ ತುಂಡುಗಳು, ಮಚ್ಚು, ಗರಗಸ ಮತ್ತು ಹಾರೆ ಯನ್ನು ವಶಪಡಿಸಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿಯು ತಲೆ ಮರೆಸಿಕೊಂಡಿದ್ದು ಕಾರ್ಯಾಚರಣೆ ಮುಂದುವರೆದಿದೆ.
ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀಧರ್, ಮಧುಕುಮಾರ್, ಅರಣ್ಯ ರಕ್ಷಕರಾದ ಕೃಷ್ಣ ಮತ್ತು ವೆಂಕಟಸ್ವಾಮಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು