ತಹಶಿಲ್ದಾರ್ ಭರವಸೆ, ಸತ್ಯಾಗ್ರಹ ಹಿಂಪಡೆದ ರಮೇಶ್ ಕುಟುಂಬ
ಚನ್ನಪಟ್ಟಣ:ಡಿ/೧೪/೨೦೧೯/ಶನಿವಾರ. ಕಳೆದ ಎರಡು ದಿನಗಳಿಂದ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಅನ್ಯಾಯದ ವಿರುದ್ಧ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಮೈಲನಾಯಕನ ಹೊಸಹಳ್ಳಿ ಗ್ರಾಮದ ರಮೇಶ್ ಮತ್ತು ಕುಟುಂಬದವರು ತಹಶಿಲ್ದಾರ್ ಸುದರ್ಶನ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶ್ರೀಚಂದ್ರ ರವರು ನೀಡಿದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದಾರೆ.
ಶನಿವಾರ ಸಂಜೆ ವೇಳೆಗೆ ಧರಣಿ ನಿರತರ ಬಳಿ ಬಂದ ಅಧಿಕಾರಿಗಳು ಅವರ ಬಳಿ ಇದ್ದ ದಾಖಲೆಗಳನ್ನು ಪರಿಶೀಲಿಸಿ, ಸಮಾಲೋಚಿಸಿದ ನಂತರ ಶೀಘ್ರವಾಗಿ ಜಾಗ ಪರಿಶೀಲಿಸಿ ನ್ಯಾಯ ಒದಗಿಸಿಕೊಡಲಾಗುವುದು ಎಂಬ ಭರವಸೆ ನೀಡಿದ ನಂತರ ಧರಣಿಯನ್ನು ಹಿಂಪಡೆಯಲಾಯಿತು.
ಸತ್ಯಾಗ್ರಹ ನಿರತ ರಮೇಶ್ ರವರು ನಮಗೆ ನ್ಯಾಯ ಕೊಡಿಸುವುದರ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದಾಖಲೆಗಳನ್ನು ತಿರುಚುವ ಸಾಧ್ಯತೆ ಇದ್ದು ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಬೇಕೆಂದು ತಹಶಿಲ್ದಾರ್ ಸುದರ್ಶನ್ ರವರಿಗೆ ಮನವಿ ಮಾಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು