ನಿವೃತ್ತ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀಯುತ ಸಿದ್ದಯ್ಯ ಅಸುನೀಗಿದರು
ಚನ್ನಪಟ್ಟಣ: ತಾಲ್ಲೂಕಿನ ಮಂಕುಂದ ಗ್ರಾಮದ ನಿವಾಸಿ ಸಿದ್ದಯ್ಯ ನವರು (೯೩) ಇಂದು ಮುಂಜಾನೆ ಅಸುನೀಗಿದರು. ಶ್ರೀಯುತರು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಮೃತರು ಮಕ್ಕಳಾದ ರವಿಶಂಕರ್, ಶಶಿಧರ್, ರಾಧಾ, ಉಮಾ, ಸುಮಾ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ೦೩:೦೦ ಗಂಟೆಗೆ ಮಂಕುಂದ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು