ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ನಾಗವಾರ ತಿಮ್ಮಯ್ಯ ನಿಧನ
ಚನ್ನಪಟ್ಟಣ: ತಾಲೂಕಿನ ನಾಗವಾರ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎನ್. ತಿಮ್ಮಯ್ಯ (101) ವಯೋಸಹಜ ಖಾಯಿಲೆಯಿಂದಾಗಿ ಬುಧವಾರ ವಿಧಿವಶರಾದರು.
ಮೃತರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ, ಗ್ರಾಮದಲ್ಲಿ ಸಾರ್ವಜನಿಕ ವಿದ್ಯಾಸಂಸ್ಥೆ ಹುಟ್ಟುಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ತಮ್ಮ ಸ್ನೇಹಪರ ವ್ಯಕ್ತಿತ್ವದಿಂದ ತಾಲೂಕಿನಲ್ಲಿ ಚಿರಪರಿಚಿತವಾಗಿದ್ದರು. ಮೃತರು ಇಬ್ಬರು ಹೆಣ್ಣುಮಕ್ಕಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಆಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಗ್ರಾಮದಲ್ಲಿ ನೇರವೇರಿತು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು