ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ
ಚನ್ನಪಟ್ಟಣ: ನಗರದ ತಾಜ್ ಹೋಟೆಲ್ ಮುಂಭಾಗದ ಮನೆಯೊಂದರಲ್ಲಿ ಗೃಹ ಬಳಕೆಯ (ಇಂಡೇನ್ ಗ್ಯಾಸ್) ಹದಿನೈದು ಗ್ಯಾಸ್ ಸಿಲಿಂಡರ್ ಗಳನ್ನು ತಹಶಿಲ್ದಾರ್ ಸುದರ್ಶನ್ ಮತ್ತು ತಂಡದವರು ವಶಪಡಿಸಿಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ಆಟೋಗಳು ಮತ್ತು ಚಿಕ್ಕ ಸಿಲಿಂಡರ್ ಗಳಿಗೆ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ ದಂಡಾಧಿಕಾರಿಗಳು ಮಾಲೀಕ ಮುಮ್ತಾಜ್ ನ ಮೇಲೆ ದೂರು ದಾಖಲಿಸಿ ನೋಟೀಸ್ ನೀಡಿದ್ದಾರೆ.
ಸಾರ್ವಜನಿಕರಿಂದ ಮನೆಯ ಗ್ಯಾಸ್ ಸಿಲಿಂಡರ್ ಗಳನ್ನು ಖರೀದಿಸಿ ಹೆಚ್ಚಿನ ಲಾಭಕ್ಕಾಗಿ ರೀ ಫಿಲ್ಲಿಂಗ್ ಮಾಡುತ್ತಿದ್ದು ಆ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಅನಾಹುತವೇ ಸಂಭವಿಸುತ್ತಿತ್ತು ಎಂದು ತಹಶಿಲ್ದಾರ್ ಸುದರ್ಶನ್ ರವರು ಆತಂಕ ವ್ಯಕ್ತಪಡಿಸಿದರು.
ದಾಳಿ ವೇಳೆ ಆಹಾರ ನಿರೀಕ್ಷಕಿ ಅನುಷಾ, ರೆವಿನ್ಯೂ ಇನ್ಸ್ಪೆಕ್ಟರ್ ಕಾಂತರಾಜ್ ಮತ್ತು ಸಿಬ್ಬಂದಿ ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು