Tel: 7676775624 | Mail: info@yellowandred.in

Language: EN KAN

    Follow us :


ಮುದಗೆರೆ ಬಳಿ ಭೀಕರ ಅಪಘಾತ ಎರಡು ಸಾವು, ಓರ್ವ ಗಂಭೀರ

Posted date: 31 Jan, 2020

Powered by:     Yellow and Red

ಮುದಗೆರೆ ಬಳಿ ಭೀಕರ ಅಪಘಾತ ಎರಡು ಸಾವು, ಓರ್ವ ಗಂಭೀರ

ಚನ್ನಪಟ್ಟಣ: ಬೆಂಗಳೂರು ಮೈಸೂರು ಹೆದ್ದಾರಿಯ ಮುದುಗೆರೆ ಗೇಟ್ ನ ವೈಶಾಲಿ ಹೋಟೆಲ್ ಬಳಿ ಬೆಳಗಿನ ಚುಮುಚುಮು ಚಳಿಯ ವೇಳೆ ಕಾರು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದಾರೆ.


ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿದ್ದ ಕ್ರೇಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕೆಲಸಕ್ಕೆ ಹೋಗುತ್ತಿದ್ದ ದ್ವಿಚಕ್ರ ಸವಾರರಿಗೆ ಢಿಕ್ಕಿ ಹೊಡೆದು ನಂತರ ಪಾದಚಾರಿಯೊಬ್ಬನಿಗೂ ಢಿಕ್ಕಿ ಹೊಡೆದಿದೆ. ದ್ವಿಚಕ್ರ ಸವಾರರು ಸ್ಥಳದಲ್ಲೇ ಅಸುನೀಗಿದರೆ ಗಂಭೀರ ಗಾಯಗೊಂಡಿರುವ ಪಾದಚಾರಿ ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.


ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು ಸಂಬಂಧಿಕರು ಮತ್ತು ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ.


ತಾಲ್ಲೂಕಿನ ಸೀಬನಹಳ್ಳಿ ಗ್ರಾಮದ  ಅಭಿಷೇಕ್ (೨೧) ರಾಹುಲ್ (೧೮) ಮೃತರಾಗಿದ್ದು

ಹರ್ಷಿತ್ (೨೦) ಎಂಬ ಯುವಕನ ಸ್ಥಿತಿ ಗಂಭೀರವಾಗಿದೆ. ನಗರದ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑