ಕಾಶಿ ವಿಶ್ವನಾಥಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಶಿವರಾತ್ರಿ ರಾಂಪುರ ರಾಜಣ್ಣ
ಚನ್ನಪಟ್ಟಣ:ಫೆ/೧೮/೨೦/ಮಂಗಳವಾರ.
ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್ ವತಿಯಿಂದ ೨೧ ರ ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಟ್ರಸ್ಟ್ ನ ಅಧ್ಯಕ್ಷ ರಾಂಪುರ ರಾಜಣ್ಣ ತಿಳಿಸಿದರು.
ಅವರು ಇಂದು ದೇವಾಲಯದ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸರಿಸುಮಾರು ೪೦೦ ವರ್ಷಗಳ ಹಿಂದೆ ನೇರವಾಗಿ ಕಾಶಿ ಯಿಂದಲೇ ತಂದು ಪ್ರತಿಷ್ಠಾಪಿಸಲಾಗಿರುವ ದೇವರ ವಿಗ್ರಹ ಇದಾಗಿದ್ದು ಅಂದಿನ ಮೈಸೂರು ಮಹಾರಾಜರು ಬೆಂಗಳೂರು ಮೈಸೂರು ನಡುವೆ ಓಡಾಡುವ ಸಮಯದಲ್ಲಿ ತಪ್ಪದೆ ಬಂದು ದರ್ಶನ ಮಾಡಿಹೋಗುತ್ತಿದ್ದುದಾಗಿ ಹಿರಿಯರು ಹೇಳುತ್ತಾರೆ ಎಂದು ಸ್ಮರಿಸಿದರು.
ಶ್ರೀ ಸ್ವಾಮಿಯ ಹಬ್ಬದ ಸಂದರ್ಭದಲ್ಲಿ ರಾತ್ರಿ ಪೂರ್ಣ ಜಾಗರಣೆ ಹಮ್ಮಿಕೊಳ್ಳಲಾಗಿದ್ದು ಆಹೋರಾತ್ರಿ ಹಲವಾರು ಸಂಘ ಸಂಸ್ಥೆಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಶುಕ್ರವಾರ ಬೆಳಿಗ್ಗೆ ಯಿಂದ ಶನಿವಾರ ಸಹ ವಿಶೇಷ ಪೂಜೆ, ಅಭಿಷೇಕ ಇತ್ಯಾದಿಗಳನ್ನು ಹಮ್ಮಿಕೊಂಡಿದ್ದು ದಾನಿಗಳ ಸಹಾಯದಿಂದ ಹದಿನೈದು ಸಾವಿರ ಮಂದಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಮಂಜುನಾಥ ದಶವಾರ, ಕಾರ್ಯದರ್ಶಿ ಪುಟ್ಟಮಾದಯ್ಯ, ಖಜಾಂಚಿ ಪುಟ್ಟಸ್ವಾಮಿ, ಅರ್ಚಕ ಶಿವರಾಮು, ಸದಸ್ಯರಾದ ಸುಜೇಂದ್ರ ಬಾಬು, ನಗರಸಭೆ ಮಾಜಿ ಸದಸ್ಯ ಮಧು ಸೇರಿದಂತೆ ಹಲವಾರು ಸದಸ್ಯರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು