Tel: 7676775624 | Mail: info@yellowandred.in

Language: EN KAN

    Follow us :


ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*

Posted date: 04 Mar, 2020

Powered by:     Yellow and Red

ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*

ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಅಬ್ಬೂರು ರಾಜಶೇಖರ್ ಅವರು ಆಯ್ಕೆಯಾಗಿದ್ದಾರೆ.


ಮಂಗಳೂರಿನ  ಪುರಭವನದಲ್ಲಿ ಮಾರ್ಚ್ ೦೮ ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಎಚ್.ಕೆ.ವೀರಣ್ಣಗೌಡ ಅವರ ಹೆಸರಿನಲ್ಲಿ ೨.೫ ಲಕ್ಷ ರೂ. ದತ್ತಿನಿಧಿ ಇರಿಸಿ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಪ್ರಾರಂಭಿಸಿದ್ದರು. ಈ ಹಿಂದೆ ಇದೇ ಪ್ರಶಸ್ತಿ ರಾಮನಗರ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸು.ತ.ರಾಮೇಗೌಡ ಅವರಿಗೆ ಲಭಿಸಿತ್ತು. ಎರಡನೇ ಬಾರಿಗೂ ರೇಷ್ಮೆ ನಾಡಿನ ಹಿರಿಯ ಪತ್ರಕರ್ತರಾದ ಅಬ್ಬೂರು ರಾಜಶೇಖರ್ ಅವರಿಗೆ ಸಂದಿದೆ. ಪ್ರಶಸ್ತಿಗೆ ಭಾಜನರಾಗಿರುವ ಅಬ್ಬೂರು ರಾಜಶೇಖರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮತ್ತಿಕರೆ ಜಯರಾಮ್  ಸೇರಿದಂತೆ ಜಿಲ್ಲೆಯ ಅನೇಕ ಪತ್ರಕರ್ತರು ಅಭಿನಂದಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑