ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಓರ್ವ ಸಾವು
ಚನ್ನಪಟ್ಟಣ:ಮಾ/೨೭/೨೦/ಗುರುವಾರ.ತಾಲ್ಲೂಕಿನ ಮುದುಗೆರೆ ಗ್ರಾಮದ ಕೆರೆ ಏರಿಯ ಬಳಿ ನಾಯಿ ಅಡ್ಡ ಬಂದಿದ್ದರಿಂದ ಆಯತಪ್ಪಿ ದ್ವಿಚಕ್ರ ವಾಹನದ ಸವಾರರೊಬ್ಬರು ವಿದ್ಯುತ್ ಕಂಬಕ್ಕೆ ಢಿಕ್ಕಿಯೊಡೆದು ಓರ್ವ ಮೃತಪಟ್ಟಿದ್ದಾರೆ.
ತಾಲ್ಲೂಕಿನ ತೂಬಿನಕೆರೆ ಗ್ರಾಮದ ಶಿವಣ್ಣ ಎಂಬುವವರ ಮಗ ಲೋಕೇಶ್ (೩೪) ಎಂಬ ಯುವಕ ಲೋಕೇಶ್ ಗೆ ಗಂಭೀರ ಗಾಯವಾಗಿದ್ದರಿಂದ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ನಿನ್ನೆ ಸಂಜೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಲೋಕೇಶ್ ಮೃತಪಟ್ಟಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.
ಗ್ರಾಮಾಂತರ ಠಾಣೆಯ ಪೋಲಿಸರು ಎಫ್ ಆರ್ ಐ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು