Tel: 7676775624 | Mail: info@yellowandred.in

Language: EN KAN

    Follow us :


ವಲಸೆ ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ನೋಡಲ್ ಅಧಿಕಾರಿ ನೇಮಕ

Posted date: 02 May, 2020

Powered by:     Yellow and Red

ವಲಸೆ ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ನೋಡಲ್ ಅಧಿಕಾರಿ ನೇಮಕ

ರಾಮನಗರ:ಮೇ/೦೨/೨೦/ಶನಿವಾರ. ತುತ್ತು ಅನ್ನಕ್ಕಾಗಿ ಹೊರ ಜಿಲ್ಲೆಯಿಂದ ನಮ್ಮ ಜಿಲ್ಲೆಗೆ, ನಮ್ಮ ಜಿಲ್ಲೆಯಿಂದ ಹೊರ ಜಿಲ್ಲೆಗೆ ದುಡಿಯಲು ಮತ್ತು ಮತ್ತಿತರ ಕಾರ್ಯಕ್ಕೆ ಬಂದು ಲಾಕ್ ಡೌನ್ ಅವಧಿಯಲ್ಲಿ ಸಿಲುಕಿರುವ ವಿವಿಧ ಜಿಲ್ಲೆಯ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಗಳು ಮತ್ತು ಪ್ರವಾಸಿಗಳನ್ನು ಅವರ ವಾಸಸ್ಥಳಕ್ಕೆ ರಾಮನಗರ ಜಿಲ್ಲೆಯಿಂದ ವಾಪಸ್ ಕಳುಹಿಸಲು ಹಾಗೂ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ರಾಮನಗರ ಜಿಲ್ಲೆಗೆ ಕರೆತರುವ ಕಾರ್ಯನಿರ್ವಹಣೆಗಾಗಿ ಜಿಲ್ಲೆಯ ಕಾರ್ಮಿಕ ಅಧಿಕಾರಿ ಶೇಖರ್ ಗಡತ್ (9448221040) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ಎಂಎಸ್ ಅರ್ಚನಾ ಅವರು ಆದೇಶ ಹೊರಡಿಸಿದ್ದಾರೆ.


*ವೆಬ್ ಸೈಟ್ ನಲ್ಲಿ ಹೆಸರು ನೋಂದಣಿ*: ರಾಮನಗರ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗಲು ಮತ್ತು ಹೊರ ರಾಜ್ಯದಿಂದ ಜಿಲ್ಲೆಗೆ ಬರಲು ಬಯಸುವ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಿಗಳು ತಮ್ಮ ಹೆಸರನ್ನು sevasindhu.karnataka.gov.in ನಲ್ಲಿ ನೊಂದಾಯಿಸಿಕೊಂಡು ಆನ್ ಲೈನ್ ಮೂಲಕವೇ ಸ್ಥಿತಿಗತಿಗಳನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑