Tel: 7676775624 | Mail: info@yellowandred.in

Language: EN KAN

    Follow us :


ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

Posted date: 08 May, 2020

Powered by:     Yellow and Red

ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮದ ವೃತ್ತಿಯಲ್ಲಿ ತೊಡಗಿ  ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ (ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.


೧೧,೭೨೨ ಕುಟುಂಬಗಳಿಗೆ  ಪ್ರತಿ ಕುಟುಂಬಕ್ಕೆ ತಲಾ ಐದು ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ.  ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಈ ವಿಶೇಷ ಪ್ಯಾಕೇಜ್ ನಿಂದ ಚರ್ಮ ಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ.  ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮಾನ್ಯ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ಡಿಸಿಎಂ  ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑