Tel: 7676775624 | Mail: info@yellowandred.in

Language: EN KAN

    Follow us :


ಮೇ 22 ರ ಶುಕ್ರವಾರ ಸಚಿವ ಜಗದೀಶ್ ಶೆಟ್ಟರ್ ರವರಿಂದ ಜಿಲ್ಲಾ ಪ್ರವಾಸ

Posted date: 21 May, 2020

Powered by:     Yellow and Red

ಮೇ 22 ರ ಶುಕ್ರವಾರ ಸಚಿವ ಜಗದೀಶ್ ಶೆಟ್ಟರ್ ರವರಿಂದ ಜಿಲ್ಲಾ ಪ್ರವಾಸ

ರಾಮನಗರ:ಮೇ/೨೧/೨೦/ಗುರುವಾರ. ಬೃಹತ್, ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ್ ಶೆಟ್ಟರ್ ಅವರು ಮೇ ೨೧ ರ ಶುಕ್ರವಾರ ರಾಮನಗರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ಅವರು ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಿಗ್ಗೆ ೧೧:೦೦ ಗಂಟೆಗೆ ಬಿಡದಿಗೆ ಆಗಮಿಸಿ, ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಭಾಂಗಣದಲ್ಲಿ ಬಿಡದಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸುವರು.


ಮಧ್ಯಾಹ್ನ ೦೧:೦೦ ಗಂಟೆಗೆ ಬಿಡದಿ ಕೈಗಾರಿಕಾ ಪ್ರದೇಶದಿಂದ ನಿರ್ಗಮಿಸಿ ಮಧ್ಯಾಹ್ನ ೦೧:೧೫ ಕ್ಕೆ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಸ್ಟವ್ ಕ್ರಾಫ್ಟ್ ಕಾರ್ಖಾನೆಗೆ ಭೇಟಿ ನೀಡಿ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸಿ, ಮಧ್ಯಾಹ್ನ ೦೨:೦೦ ಗಂಟೆಗೆ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಿಂದ ನಿರ್ಗಮಿಸಿ ಮಧ್ಯಾಹ್ನ ೦೩:೦೦ ಗಂಟೆಗೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑