ಮೇ 22 ರ ಶುಕ್ರವಾರ ಸಚಿವ ಜಗದೀಶ್ ಶೆಟ್ಟರ್ ರವರಿಂದ ಜಿಲ್ಲಾ ಪ್ರವಾಸ
ರಾಮನಗರ:ಮೇ/೨೧/೨೦/ಗುರುವಾರ. ಬೃಹತ್, ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ್ ಶೆಟ್ಟರ್ ಅವರು ಮೇ ೨೧ ರ ಶುಕ್ರವಾರ ರಾಮನಗರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಿಗ್ಗೆ ೧೧:೦೦ ಗಂಟೆಗೆ ಬಿಡದಿಗೆ ಆಗಮಿಸಿ, ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಭಾಂಗಣದಲ್ಲಿ ಬಿಡದಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸುವರು.
ಮಧ್ಯಾಹ್ನ ೦೧:೦೦ ಗಂಟೆಗೆ ಬಿಡದಿ ಕೈಗಾರಿಕಾ ಪ್ರದೇಶದಿಂದ ನಿರ್ಗಮಿಸಿ ಮಧ್ಯಾಹ್ನ ೦೧:೧೫ ಕ್ಕೆ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಸ್ಟವ್ ಕ್ರಾಫ್ಟ್ ಕಾರ್ಖಾನೆಗೆ ಭೇಟಿ ನೀಡಿ ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸಿ, ಮಧ್ಯಾಹ್ನ ೦೨:೦೦ ಗಂಟೆಗೆ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಿಂದ ನಿರ್ಗಮಿಸಿ ಮಧ್ಯಾಹ್ನ ೦೩:೦೦ ಗಂಟೆಗೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು